Surah Al-Baqara Verse 213 - Kannada Translation by Abdussalam Puthige
Surah Al-Baqaraكَانَ ٱلنَّاسُ أُمَّةٗ وَٰحِدَةٗ فَبَعَثَ ٱللَّهُ ٱلنَّبِيِّـۧنَ مُبَشِّرِينَ وَمُنذِرِينَ وَأَنزَلَ مَعَهُمُ ٱلۡكِتَٰبَ بِٱلۡحَقِّ لِيَحۡكُمَ بَيۡنَ ٱلنَّاسِ فِيمَا ٱخۡتَلَفُواْ فِيهِۚ وَمَا ٱخۡتَلَفَ فِيهِ إِلَّا ٱلَّذِينَ أُوتُوهُ مِنۢ بَعۡدِ مَا جَآءَتۡهُمُ ٱلۡبَيِّنَٰتُ بَغۡيَۢا بَيۡنَهُمۡۖ فَهَدَى ٱللَّهُ ٱلَّذِينَ ءَامَنُواْ لِمَا ٱخۡتَلَفُواْ فِيهِ مِنَ ٱلۡحَقِّ بِإِذۡنِهِۦۗ وَٱللَّهُ يَهۡدِي مَن يَشَآءُ إِلَىٰ صِرَٰطٖ مُّسۡتَقِيمٍ
(ಮೂಲತಃ) ಜನರೆಲ್ಲಾ ಒಂದೇ ಸಮುದಾಯವಾಗಿದ್ದರು. ತರುವಾಯ ಅಲ್ಲಾಹನು, ಶುಭವಾರ್ತೆ ನೀಡುವ ಹಾಗೂ ಎಚ್ಚರಿಸುವ ದೂತರನ್ನು ಕಳುಹಿಸಿದನು ಮತ್ತು ಜನರು ಪರಸ್ಪರ ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ಅವರ ನಡುವೆ ನ್ಯಾಯ ತೀರ್ಮಾನ ಮಾಡಲೆಂದು ಅವರ ಜೊತೆ, ಸತ್ಯವಿರುವ ಗ್ರಂಥವನ್ನಿಳಿಸಿದನು. ಆದರೆ ಯಾರಿಗೆ ಗ್ರಂಥ ನೀಡಲಾಗಿತ್ತೋ ಅದೇ ಜನರು, ತಮ್ಮ ಬಳಿಗೆ ಸ್ಪಷ್ಟ ಪುರಾವೆಗಳು ಬಂದ ಬಳಿಕ, ಪರಸ್ಪರ ವಿದ್ವೇಷದ ಕಾರಣ, ಆ ಕುರಿತು ಭಿನ್ನಾಭಿಪ್ರಾಯ ತಾಳಿದರು. ಕೊನೆಗೆ ಅಲ್ಲಾಹನು ವಿಶ್ವಾಸಿಗಳಿಗೆ, ಸತ್ಯದ ಕುರಿತಾಗಿ ಅವರು ಭಿನ್ನಾಭಿಪ್ರಾಯ ತಾಳಿದ್ದ ವಿಷಯಗಳಲ್ಲಿ ತನ್ನಿಚ್ಛೆಯಿಂದ ಮಾರ್ಗದರ್ಶನ ನೀಡಿದನು. ಅಲ್ಲಾಹನು ತಾನಿಚ್ಛಿಸಿದವರಿಗೆ, ನೇರ ಮಾರ್ಗವನ್ನು ತೋರಿಸಿ ಕೊಡುತ್ತಾನೆ