Surah Al-Baqara Verse 221 - Kannada Translation by Abdussalam Puthige
Surah Al-Baqaraوَلَا تَنكِحُواْ ٱلۡمُشۡرِكَٰتِ حَتَّىٰ يُؤۡمِنَّۚ وَلَأَمَةٞ مُّؤۡمِنَةٌ خَيۡرٞ مِّن مُّشۡرِكَةٖ وَلَوۡ أَعۡجَبَتۡكُمۡۗ وَلَا تُنكِحُواْ ٱلۡمُشۡرِكِينَ حَتَّىٰ يُؤۡمِنُواْۚ وَلَعَبۡدٞ مُّؤۡمِنٌ خَيۡرٞ مِّن مُّشۡرِكٖ وَلَوۡ أَعۡجَبَكُمۡۗ أُوْلَـٰٓئِكَ يَدۡعُونَ إِلَى ٱلنَّارِۖ وَٱللَّهُ يَدۡعُوٓاْ إِلَى ٱلۡجَنَّةِ وَٱلۡمَغۡفِرَةِ بِإِذۡنِهِۦۖ وَيُبَيِّنُ ءَايَٰتِهِۦ لِلنَّاسِ لَعَلَّهُمۡ يَتَذَكَّرُونَ
(ವಿಶ್ವಾಸಿಗಳೇ,) ಬಹುದೇವಾರಾಧಕಿಯರು ವಿಶ್ವಾಸಿನಿಯರಾಗುವ ತನಕ ಅವರನ್ನು ನೀವು ವಿವಾಹವಾಗಬೇಡಿ. ನಿಜವಾಗಿ ವಿಶ್ವಾಸಿ ದಾಸಿಯು, (ಸ್ವತಂತ್ರ) ಬಹು ದೇವರಾಧಕಿಗಿಂತ ಉತ್ತಮಳು – ಆಕೆ ನಿಮಗೆಷ್ಟು ಇಷ್ಟವಿದ್ದರೂ ಸರಿಯೇ. ಹಾಗೆಯೇ, ಬಹುದೇವಾರಾಧಕ ಪುರುಷರು ವಿಶ್ವಾಸಿಗಳಾಗುವ ತನಕ ಅವರನ್ನು ವಿವಾಹವಾಗಬಾರದು. ವಿಶ್ವಾಸಿ ದಾಸನು, (ಸ್ವತಂತ್ರ) ಬಹು ದೇವಾರಾಧಕನಿಗಿಂತ ಉತ್ತಮನು – ಅವನು ನಿಮಗೆಷ್ಟು ಇಷ್ಟವಿದ್ದರೂ ಸರಿಯೇ. ಅವರು (ಬಹುದೇವಾರಾಧಕರು) ನರಕದೆಡೆಗೆ ಕರೆಯುತ್ತಾರೆ. ಆದರೆ ಅಲ್ಲಾಹನು ತನ್ನಿಚ್ಛೆಯಿಂದ ಸ್ವರ್ಗದೆಡೆಗೆ ಮತ್ತು ಕ್ಷಮೆಯೆಡೆಗೆ ಕರೆಯುತ್ತಾನೆ ಮತ್ತು ಅವನು ಜನರಿಗಾಗಿ ತನ್ನ ಆದೇಶಗಳನ್ನು ಸ್ಪಷ್ಟಪಡಿಸುತ್ತಾನೆ – ಅವರು ಉಪದೇಶ ಸ್ವೀಕರಿಸಲೆಂದು