Surah Al-Baqara Verse 246 - Kannada Translation by Abdussalam Puthige
Surah Al-Baqaraأَلَمۡ تَرَ إِلَى ٱلۡمَلَإِ مِنۢ بَنِيٓ إِسۡرَـٰٓءِيلَ مِنۢ بَعۡدِ مُوسَىٰٓ إِذۡ قَالُواْ لِنَبِيّٖ لَّهُمُ ٱبۡعَثۡ لَنَا مَلِكٗا نُّقَٰتِلۡ فِي سَبِيلِ ٱللَّهِۖ قَالَ هَلۡ عَسَيۡتُمۡ إِن كُتِبَ عَلَيۡكُمُ ٱلۡقِتَالُ أَلَّا تُقَٰتِلُواْۖ قَالُواْ وَمَا لَنَآ أَلَّا نُقَٰتِلَ فِي سَبِيلِ ٱللَّهِ وَقَدۡ أُخۡرِجۡنَا مِن دِيَٰرِنَا وَأَبۡنَآئِنَاۖ فَلَمَّا كُتِبَ عَلَيۡهِمُ ٱلۡقِتَالُ تَوَلَّوۡاْ إِلَّا قَلِيلٗا مِّنۡهُمۡۚ وَٱللَّهُ عَلِيمُۢ بِٱلظَّـٰلِمِينَ
ಇಸ್ರಾಈಲರ ಸಂತತಿಯಲ್ಲಿನ, ಮೂಸಾರ ಅನಂತರದ ಒಂದು ಪಂಗಡವನ್ನು ನೀವು ಕಾಣಲಿಲ್ಲವೇ? ಅವರು ತಮ್ಮ ಪ್ರವಾದಿಯೊಡನೆ, ‘‘ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವಂತಾಗಲು, ನಮಗಾಗಿ ಒಬ್ಬ ದೊರೆಯನ್ನು ನೇಮಿಸಿರಿ’’ ಎಂದರು. ‘‘ನಿಮ್ಮ ಮೇಲೆ ಯುದ್ಧವು ಕಡ್ಡಾಯವಾಗಿ ಬಿಟ್ಟಾಗ ನೀವು ಯುದ್ಧ ಮಾಡದೆ ಇರುವುದಿಲ್ಲ ತಾನೇ?’’ ಎಂದು ಅವರು (ಪ್ರವಾದಿ) ಕೇಳಿದರು. ಆಗ ಅವರು, ‘‘ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದೆ ಇರಲು ನಮಗೇನಾಗಿದೆ? ನಮ್ಮನ್ನಂತು ನಮ್ಮ ನೆಲೆಗಳಿಂದ ಹೊರದಬ್ಬಲಾಗಿದೆ ಮತ್ತು ನಮ್ಮ ಮಕ್ಕಳಿಂದ ನಮ್ಮನ್ನು ದೂರಗೊಳಿಸಲಾಗಿದೆ’’ ಎಂದರು. ಕೊನೆಗೆ ಅವರ ಮೇಲೆ ಯುದ್ಧವನ್ನು ಕಡ್ಡಾಯಗೊಳಿಸಲಾದಾಗ ಅವರಲ್ಲಿನ ಕೇವಲ ಕೆಲವರ ಹೊರತು ಉಳಿದವರು ಮುಖ ತಿರುಗಿಸಿಕೊಂಡರು. ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು