Surah Al-Baqara Verse 249 - Kannada Translation by Abdussalam Puthige
Surah Al-Baqaraفَلَمَّا فَصَلَ طَالُوتُ بِٱلۡجُنُودِ قَالَ إِنَّ ٱللَّهَ مُبۡتَلِيكُم بِنَهَرٖ فَمَن شَرِبَ مِنۡهُ فَلَيۡسَ مِنِّي وَمَن لَّمۡ يَطۡعَمۡهُ فَإِنَّهُۥ مِنِّيٓ إِلَّا مَنِ ٱغۡتَرَفَ غُرۡفَةَۢ بِيَدِهِۦۚ فَشَرِبُواْ مِنۡهُ إِلَّا قَلِيلٗا مِّنۡهُمۡۚ فَلَمَّا جَاوَزَهُۥ هُوَ وَٱلَّذِينَ ءَامَنُواْ مَعَهُۥ قَالُواْ لَا طَاقَةَ لَنَا ٱلۡيَوۡمَ بِجَالُوتَ وَجُنُودِهِۦۚ قَالَ ٱلَّذِينَ يَظُنُّونَ أَنَّهُم مُّلَٰقُواْ ٱللَّهِ كَم مِّن فِئَةٖ قَلِيلَةٍ غَلَبَتۡ فِئَةٗ كَثِيرَةَۢ بِإِذۡنِ ٱللَّهِۗ وَٱللَّهُ مَعَ ٱلصَّـٰبِرِينَ
ತಾಲೂತ್, ಸೇನೆಯೊಂದಿಗೆ ಹೊರಟಾಗ ಹೇಳಿದರು; ‘‘ಅಲ್ಲಾಹನು ಒಂದು ನದಿಯ ಮೂಲಕ ನಿಮ್ಮನ್ನು ಪರೀಕ್ಷಿಸುವನು. ಅದರ ನೀರು ಕುಡಿಯುವವನು ನನ್ನವನಲ್ಲ. ಅದರ ರುಚಿಯನ್ನೇ ನೋಡದವನು ಮಾತ್ರ ಖಂಡಿತ ನನ್ನವನು – ಯಾರಾದರೂ ತನ್ನ ಕೈಯಿಂದ, ಒಂದು ಬೊಗಸೆಯಷ್ಟು ಮಾತ್ರ ಕುಡಿದರೆ ತಪ್ಪಲ್ಲ’. ಆದರೆ ಅವರಲ್ಲಿನ ಕೇವಲ ಕೆಲವರ ಹೊರತು ಇತರೆಲ್ಲರೂ ಆ ಹೊಳೆಯ ನೀರನ್ನು ಕುಡಿದರು. ಕೊನೆಗೆ, ಆತ (ತಾಲೂತ್) ಮತ್ತು ಆತನ ಜೊತೆಗಿದ್ದ ವಿಶ್ವಾಸಿಗಳು ನದಿಯನ್ನು ದಾಟಿದಾಗ, ಆ ಮಂದಿ, ‘‘ಇಂದು ನಮ್ಮ ಬಳಿ, ಜಾಲೂತ್ ಮತ್ತವನ ಪಡೆಗಳನ್ನು ಎದುರಿಸುವ ಶಕ್ತಿ ಉಳಿದಿಲ್ಲ’’ ಎಂದು ಬಿಟ್ಟರು. ಆದರೆ ತಾವು ಅಲ್ಲಾಹನನ್ನು ಭೇಟಿಯಾಗಲಿಕ್ಕಿದೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದವರು ‘‘ಅದೆಷ್ಟೋ ಬಾರಿ, ಸಣ್ಣ ಪಡೆಗಳು ಅಲ್ಲಾಹನ ಅನುಗ್ರಹದಿಂದ ದೊಡ್ಡ ಪಡೆಗಳನ್ನು ಸೋಲಿಸಿದ್ದುಂಟು. ಅಲ್ಲಾಹನಂತು ಸಹನಶೀಲರ ಜೊತೆಗಿದ್ದಾನೆ’’ ಎಂದರು