Surah Al-Baqara Verse 251 - Kannada Translation by Abdussalam Puthige
Surah Al-Baqaraفَهَزَمُوهُم بِإِذۡنِ ٱللَّهِ وَقَتَلَ دَاوُۥدُ جَالُوتَ وَءَاتَىٰهُ ٱللَّهُ ٱلۡمُلۡكَ وَٱلۡحِكۡمَةَ وَعَلَّمَهُۥ مِمَّا يَشَآءُۗ وَلَوۡلَا دَفۡعُ ٱللَّهِ ٱلنَّاسَ بَعۡضَهُم بِبَعۡضٖ لَّفَسَدَتِ ٱلۡأَرۡضُ وَلَٰكِنَّ ٱللَّهَ ذُو فَضۡلٍ عَلَى ٱلۡعَٰلَمِينَ
ಕೊನೆಗೆ ಅವರು (ತಾಲೂತರ ಪಡೆ) ಅಲ್ಲಾಹನ ಅನುಗ್ರಹದಿಂದ ಅವರನ್ನು (ಜಾಲೂತನ ಪಡೆಯನ್ನು) ಸೋಲಿಸಿ ಬಿಟ್ಟರು ಮತ್ತು ದಾವೂದರು ಜಾಲೂತನನ್ನು ಕೊಂದರು. ಆ ಬಳಿಕ ಅಲ್ಲಾಹನು ಅವರಿಗೆ (ದಾವೂದರಿಗೆ) ಸಾಮ್ರಾಜ್ಯವನ್ನು ಮತ್ತು ಯುಕ್ತಿಯನ್ನು ನೀಡಿದನು ಮತ್ತು ತಾನಿಚ್ಛಿಸಿದ್ದನ್ನು ಅವರಿಗೆ ಕಲಿಸಿಕೊಟ್ಟನು. ಈ ರೀತಿ ಅಲ್ಲಾಹನು ಕೆಲವರನ್ನು ಮತ್ತೆ ಕೆಲವರ ಮೂಲಕ ತೊಲಗಿಸದೆ ಇದ್ದಿದ್ದರೆ, ಭೂಮಿಯಲ್ಲಿ ಖಂಡಿತ ವಿನಾಶ ಮೆರೆಯುತ್ತಿತ್ತು. ನಿಜವಾಗಿ ಅಲ್ಲಾಹನು ಸಕಲ ಲೋಕಗಳ ಪಾಲಿಗೆ ಉದಾರನಾಗಿದ್ದಾನೆ