Surah Al-Baqara Verse 253 - Kannada Translation by Abdussalam Puthige
Surah Al-Baqara۞تِلۡكَ ٱلرُّسُلُ فَضَّلۡنَا بَعۡضَهُمۡ عَلَىٰ بَعۡضٖۘ مِّنۡهُم مَّن كَلَّمَ ٱللَّهُۖ وَرَفَعَ بَعۡضَهُمۡ دَرَجَٰتٖۚ وَءَاتَيۡنَا عِيسَى ٱبۡنَ مَرۡيَمَ ٱلۡبَيِّنَٰتِ وَأَيَّدۡنَٰهُ بِرُوحِ ٱلۡقُدُسِۗ وَلَوۡ شَآءَ ٱللَّهُ مَا ٱقۡتَتَلَ ٱلَّذِينَ مِنۢ بَعۡدِهِم مِّنۢ بَعۡدِ مَا جَآءَتۡهُمُ ٱلۡبَيِّنَٰتُ وَلَٰكِنِ ٱخۡتَلَفُواْ فَمِنۡهُم مَّنۡ ءَامَنَ وَمِنۡهُم مَّن كَفَرَۚ وَلَوۡ شَآءَ ٱللَّهُ مَا ٱقۡتَتَلُواْ وَلَٰكِنَّ ٱللَّهَ يَفۡعَلُ مَا يُرِيدُ
ಆ ದೂತರಲ್ಲಿ ಕೆಲವರಿಗೆ ನಾವು ಇತರ ಕೆಲವರಿಗಿಂತ ಹೆಚ್ಚಿನ ಹಿರಿಮೆಯನ್ನು ನೀಡಿರುವೆವು. ಅವರಲ್ಲಿ ಒಬ್ಬರೊಡನೆ ಅಲ್ಲಾಹನು ಮಾತನಾಡಿದ್ದನು ಹಾಗೂ ಅವರಲ್ಲಿ ಕೆಲವರ ಸ್ಥಾನವನ್ನು ಅವನು ಉನ್ನತಗೊಳಿಸಿದ್ದನು. ನಾವು ಮರ್ಯಮರ ಪುತ್ರ ಈಸಾರಿಗೆ ಸ್ಪಷ್ಟ ಪುರಾವೆಗಳನ್ನು ನೀಡಿದ್ದೆವು ಮತ್ತು ಪವಿತ್ರ ಆತ್ಮದ (ಜಿಬ್ರೀಲ್ರ) ಮೂಲಕ ಅವರಿಗೆ ಬಲ ಒದಗಿಸಿದ್ದನು. ಅಲ್ಲಾಹನು ಬಯಸಿದ್ದರೆ, ಅವರ (ಆ ದೂತರ) ಬಳಿಕ ಬಂದವರು (ಮುಂದಿನ ಪೀಳಿಗೆಗಳು) ಸತ್ಯದ ಸ್ಪಷ್ಟ ಪುರಾವೆಗಳು ತಮ್ಮ ಬಳಿಗೆ ಬಂದ ಬಳಿಕ ಪರಸ್ಪರ ರಕ್ತಪಾತ ನಡೆಸುತ್ತಿರಲಿಲ್ಲ. ಆದರೂ ಅವರು ಪರಸ್ಪರ ಭಿನ್ನಾಭಿಪ್ರಾಯ ತಾಳಿದರು. ಅವರಲ್ಲಿ ವಿಶ್ವಾಸಿಗಳೂ ಇದ್ದರು ಧಿಕ್ಕಾರಿಗಳೂ ಇದ್ದರು. ಅಲ್ಲಾಹನು ಬಯಸಿದ್ದರೆ ಅವರು ಪರಸ್ಪರ ರಕ್ತಪಾತ ನಡೆಸುತ್ತಿರಲಿಲ್ಲ. ಆದರೆ ಅಲ್ಲಾಹನು ತಾನು ಬಯಸಿದ್ದನ್ನೇ ಮಾಡುತ್ತಾನೆ