Surah Al-Baqara Verse 258 - Kannada Translation by Abdussalam Puthige
Surah Al-Baqaraأَلَمۡ تَرَ إِلَى ٱلَّذِي حَآجَّ إِبۡرَٰهِـۧمَ فِي رَبِّهِۦٓ أَنۡ ءَاتَىٰهُ ٱللَّهُ ٱلۡمُلۡكَ إِذۡ قَالَ إِبۡرَٰهِـۧمُ رَبِّيَ ٱلَّذِي يُحۡيِۦ وَيُمِيتُ قَالَ أَنَا۠ أُحۡيِۦ وَأُمِيتُۖ قَالَ إِبۡرَٰهِـۧمُ فَإِنَّ ٱللَّهَ يَأۡتِي بِٱلشَّمۡسِ مِنَ ٱلۡمَشۡرِقِ فَأۡتِ بِهَا مِنَ ٱلۡمَغۡرِبِ فَبُهِتَ ٱلَّذِي كَفَرَۗ وَٱللَّهُ لَا يَهۡدِي ٱلۡقَوۡمَ ٱلظَّـٰلِمِينَ
ಇಬ್ರಾಹೀಮರೊಡನೆ ಅವರ ಒಡೆಯನ ಕುರಿತು ಜಗಳಕ್ಕಿಳಿದಾತನನ್ನ್ನು ನೀವು ಕಾಣಲಿಲ್ಲವೇ? ಅಲ್ಲಾಹನು ಆತನಿಗೆ ಸಾಮ್ರಾಜ್ಯವನ್ನು ನೀಡಿದ್ದನು. ‘‘ಜೀವಂತ ಗೊಳಿಸುವವನು ಮತ್ತು ಸಾಯಿಸುವವನೇ ನನ್ನ ದೇವರು’’ ಎಂದು ಇಬ್ರಾಹೀಮರು ಹೇಳಿದಾಗ ಆತನು ‘‘ನಾನೂ ಜೀವ ನೀಡುತ್ತೇನೆ ಮತ್ತು ನಾನೂ ಸಾಯಿಸುತ್ತೇನೆ’’ ಎಂದನು. ಆಗ ಇಬ್ರಾಹೀಮರು ‘‘ಅಲ್ಲಾಹನು ಸೂರ್ಯವನ್ನು ಪೂರ್ವದಿಂದ ಉದಯಿಸುತ್ತಾನೆ ನೀನು ಅದನ್ನು ಪಶ್ಚಿಮದಿಂದ ಉದಯಿಸು’’ ಎಂದರು. ಆ ಧಿಕ್ಕಾರಿ ಬೆಚ್ಚಿಬಿದ್ದನು. ಅಲ್ಲಾಹನು ಅಕ್ರಮಿಗಳ ಪಂಗಡಕ್ಕೆ ಮಾರ್ಗದರ್ಶನ ನೀಡುವುದಿಲ್ಲ