Surah Al-Baqara Verse 61 - Kannada Translation by Abdussalam Puthige
Surah Al-Baqaraوَإِذۡ قُلۡتُمۡ يَٰمُوسَىٰ لَن نَّصۡبِرَ عَلَىٰ طَعَامٖ وَٰحِدٖ فَٱدۡعُ لَنَا رَبَّكَ يُخۡرِجۡ لَنَا مِمَّا تُنۢبِتُ ٱلۡأَرۡضُ مِنۢ بَقۡلِهَا وَقِثَّآئِهَا وَفُومِهَا وَعَدَسِهَا وَبَصَلِهَاۖ قَالَ أَتَسۡتَبۡدِلُونَ ٱلَّذِي هُوَ أَدۡنَىٰ بِٱلَّذِي هُوَ خَيۡرٌۚ ٱهۡبِطُواْ مِصۡرٗا فَإِنَّ لَكُم مَّا سَأَلۡتُمۡۗ وَضُرِبَتۡ عَلَيۡهِمُ ٱلذِّلَّةُ وَٱلۡمَسۡكَنَةُ وَبَآءُو بِغَضَبٖ مِّنَ ٱللَّهِۚ ذَٰلِكَ بِأَنَّهُمۡ كَانُواْ يَكۡفُرُونَ بِـَٔايَٰتِ ٱللَّهِ وَيَقۡتُلُونَ ٱلنَّبِيِّـۧنَ بِغَيۡرِ ٱلۡحَقِّۚ ذَٰلِكَ بِمَا عَصَواْ وَّكَانُواْ يَعۡتَدُونَ
ಮತ್ತು (ಸ್ಮರಿಸಿರಿ), ‘‘ಓ ಮೂಸಾ, ಒಂದೇ ಆಹಾರದಲ್ಲಿ ತೃಪ್ತಿಪಟ್ಟುಕೊಳ್ಳಲು ನಮ್ಮಿಂದಾಗದು. ನೀವಿನ್ನು ನಮಗಾಗಿ, ಭೂಮಿಯಲ್ಲಿ ಬೆಳೆಯುವ ಹಸಿರು ತರಕಾರಿ, ಸೌತೆ, ಗೋಧಿ, ತೊಗರಿ, ಈರುಳ್ಳಿ (ಇತ್ಯಾದಿ)ಗಳನ್ನು ಒದಗಿಸಬೇಕೆಂದು ನಿಮ್ಮ ದೇವರನ್ನು ಪ್ರಾರ್ಥಿಸಿರಿ’’- ಎಂದು ನೀವು ಹೇಳಿದ್ದಿರಿ. ಆಗ ಅವರು (ಮೂಸಾ) ‘‘ನೀವೇನು ಶ್ರೇಷ್ಠವಾದ ವಸ್ತುಗಳ ಬದಲಿಗೆ ಕೆಳಸ್ತರದ ವಸ್ತುಗಳನ್ನು ಅಪೇಕ್ಷಿಸುವಿರಾ? ಹಾಗಾದರೆ, ನೀವು (ಯಾವುದಾದರೂ ಬೇರೆ) ನಗರಕ್ಕೆ ಹೊರಟು ಹೋಗಿರಿ, ನೀವು ಬೇಡಿದ್ದು ಅಲ್ಲಿ ನಿಮಗೆ ಸಿಗುವುದು’’ಎಂದಿದ್ದರು. ಕೊನೆಗೆ ಅಪಮಾನ ಹಾಗೂ ದಾರಿದ್ರಗಳು ಅವರನ್ನು (ಇಸ್ರಾಈಲರ ಸಂತತಿಗಳನ್ನು) ಆವರಿಸಿಕೊಂಡವು ಮತ್ತು ಅವರು ಅಲ್ಲಾಹನ ಕ್ರೋಧಕ್ಕೆ ಪಾತ್ರರಾಗಿ ಬಿಟ್ಟರು. ಅದು, ಅವರು ಅಲ್ಲಾಹನ ಪುರಾವೆಗಳನ್ನು ಧಿಕ್ಕರಿಸಿದ ಮತ್ತು ಅನ್ಯಾಯವಾಗಿ ಪ್ರವಾದಿಗಳನ್ನು ಕೊಂದುಬಿಟ್ಟ (ಕೃತ್ಯದ) ಫಲವಾಗಿತ್ತು. ಹಾಗೆಯೇ ಅದು, ಅವರ ಅವಿಧೇಯತೆಯ ಹಾಗೂ ಎಲ್ಲೆ ಮೀರಿದ ನಡವಳಿಕೆಯ ಪರಿಣಾಮವಾಗಿತ್ತು