Surah Aal-e-Imran Verse 153 - Kannada Translation by Abdussalam Puthige
Surah Aal-e-Imran۞إِذۡ تُصۡعِدُونَ وَلَا تَلۡوُۥنَ عَلَىٰٓ أَحَدٖ وَٱلرَّسُولُ يَدۡعُوكُمۡ فِيٓ أُخۡرَىٰكُمۡ فَأَثَٰبَكُمۡ غَمَّۢا بِغَمّٖ لِّكَيۡلَا تَحۡزَنُواْ عَلَىٰ مَا فَاتَكُمۡ وَلَا مَآ أَصَٰبَكُمۡۗ وَٱللَّهُ خَبِيرُۢ بِمَا تَعۡمَلُونَ
ಕೊನೆಗೆ ಅವನು ಸಂಕಟದ ಬಳಿಕ ನಿಮಗೆ ನೆಮ್ಮದಿಯನ್ನು ಇಳಿಸಿಕೊಟ್ಟನು ಮತ್ತು ನಿಮ್ಮಲ್ಲೊಂದು ಗುಂಪನ್ನು ತೂಕಡಿಕೆಯು ಆವರಿಸಿತು. ಆದರೆ ನಿಮ್ಮಲ್ಲಿನ ಇನ್ನೊಂದು ಗುಂಪಿಗೆ ತನ್ನ ಜೀವದ ಚಿಂತೆ ಕಾಡಿತ್ತು. ಅವರಿಗೆ ಅಲ್ಲಾಹನ ಕುರಿತು ಆಧಾರ ರಹಿತವಾದ ಅಪಗ್ರಹಿಕೆಗಳಿದ್ದುವು – ಅಜ್ಞಾನದ ಅಪಗ್ರಹಿಕೆಗಳು. ಅವರು ‘‘ಯಾವ ವಿಷಯದಲ್ಲೂ ನಮಗೇನೂ ಅಧಿಕಾರವಿಲ್ಲವೇ?’’ಎನ್ನುತ್ತಿದ್ದರು. ‘‘ಅಧಿಕಾರವೆಲ್ಲವೂ ಸಂಪೂರ್ಣವಾಗಿ ಅಲ್ಲಾಹನಿಗೇ ಸೇರಿದೆ’’ ಎಂದು ಹೇಳಿರಿ. ಅವರು ಹಲವು ವಿಷಯಗಳನ್ನು ತಮ್ಮ ಮನದೊಳಗೇ ಅಡಗಿಸಿಡುತ್ತಾರೆ ಮತ್ತು ಅವುಗಳನ್ನು ನಿಮ್ಮ ಮುಂದೆ ಪ್ರಕಟಿಸುವುದಿಲ್ಲ. ‘‘(ರಣನೀತಿಯ ನಿರ್ಧಾರದಲ್ಲಿ) ನಮಗೇನಾದರೂ ಅಧಿಕಾರ ಇದ್ದಿದ್ದರೆ ನಾವಿಲ್ಲಿ ಈ ರೀತಿ ಹತರಾಗುತ್ತಿರಲಿಲ್ಲ’’ ಎಂದು ಅವರು ಹೇಳುತ್ತಾರೆ. ‘‘ಒಂದು ವೇಳೆ ನೀವು ನಿಮ್ಮ ಮನೆಗಳಲ್ಲೇ ಇದ್ದಿದ್ದರೂ, ಯಾರ ವಿಧಿಯಲ್ಲಿ ಹತ್ಯೆ ಬರೆದಿದೆಯೋ ಅವರು ಖಂಡಿತ ತಮ್ಮ ಹತ್ಯೆಯ ಸ್ಥಾನಕ್ಕೆ ತಾವೇ ಧಾವಿಸಿ ಹೋಗುತ್ತಿದ್ದರು’’ ಎಂದು ಹೇಳಿರಿ. ಅಲ್ಲಾಹನು ನಿಮ್ಮ ಮನದಲ್ಲಿರುವುದನ್ನು ಪರೀಕ್ಷಿಸಲಿಕ್ಕಾಗಿ ಹಾಗೂ ನಿಮ್ಮ ಮನದಲ್ಲಿರುವುದನ್ನು ಶುದ್ಧೀಕರಿಸಲಿಕ್ಕಾಗಿ (ಇದೆಲ್ಲಾ ಸಂಭವಿಸಿದೆ). ಅಲ್ಲಾಹನು ಮನದಾಳದ ವಿಷಯಗಳನ್ನೂ ಬಲ್ಲವನಾಗಿದ್ದಾನೆ