Surah Az-Zumar Verse 69 - Kannada Translation by Abdussalam Puthige
Surah Az-Zumarوَأَشۡرَقَتِ ٱلۡأَرۡضُ بِنُورِ رَبِّهَا وَوُضِعَ ٱلۡكِتَٰبُ وَجِاْيٓءَ بِٱلنَّبِيِّـۧنَ وَٱلشُّهَدَآءِ وَقُضِيَ بَيۡنَهُم بِٱلۡحَقِّ وَهُمۡ لَا يُظۡلَمُونَ
(ಅಂದು) ಧಿಕ್ಕಾರಿಗಳನ್ನು ದಂಡು ದಂಡುಗಳಾಗಿ ಅಟ್ಟಿಸಿಕೊಂಡು ನರಕದೆಡೆಗೆ ಸಾಗಿಸಲಾಗುವುದು. ಅವರು ಅಲ್ಲಿಗೆ ತಲುಪಿದಾಗ ನರಕದ ಬಾಗಿಲುಗಳನ್ನು ತೆರೆದು ಬಿಡಲಾಗುವುದು. ಆಗ ಅಲ್ಲಿನ (ನರಕದ) ಪಾಲಕರು ಅವರೊಡನೆ, ‘‘ನಿಮ್ಮ ಒಡೆಯನ ವಚನಗಳನ್ನು ನಿಮಗೆ ಓದಿ ಕೇಳಿಸುವ ಮತ್ತು ಈ ದಿನವನ್ನು ಎದುರಿಸಲಿಕ್ಕಿದೆ ಎಂದು ನಿಮ್ಮನ್ನು ಎಚ್ಚರಿಸುವ ದೂತರು ಯಾರೂ ನಿಮ್ಮ ಬಳಿಗೆ ಬಂದಿರಲಿಲ್ಲವೇ?’’ ಎಂದು ಕೇಳುವರು. ಅವರು ‘‘ಖಂಡಿತ ಬಂದಿದ್ದರು’’ ಎನ್ನುವರು. ಆದರೆ, ಅದಾಗಲೇ ಧಿಕ್ಕಾರಿಗಳ ವಿರುದ್ಧ ಶಿಕ್ಷೆಯ ಆದೇಶವು ಜಾರಿಯಾಗಿರುವುದು