Surah An-Nisa Verse 91 - Kannada Translation by Abdussalam Puthige
Surah An-Nisaسَتَجِدُونَ ءَاخَرِينَ يُرِيدُونَ أَن يَأۡمَنُوكُمۡ وَيَأۡمَنُواْ قَوۡمَهُمۡ كُلَّ مَا رُدُّوٓاْ إِلَى ٱلۡفِتۡنَةِ أُرۡكِسُواْ فِيهَاۚ فَإِن لَّمۡ يَعۡتَزِلُوكُمۡ وَيُلۡقُوٓاْ إِلَيۡكُمُ ٱلسَّلَمَ وَيَكُفُّوٓاْ أَيۡدِيَهُمۡ فَخُذُوهُمۡ وَٱقۡتُلُوهُمۡ حَيۡثُ ثَقِفۡتُمُوهُمۡۚ وَأُوْلَـٰٓئِكُمۡ جَعَلۡنَا لَكُمۡ عَلَيۡهِمۡ سُلۡطَٰنٗا مُّبِينٗا
ಒಬ್ಬ ವಿಶ್ವಾಸಿಯು ಇನ್ನೊಬ್ಬ ವಿಶ್ವಾಸಿಯನ್ನು ವಧಿಸಬಾರದು – ಪ್ರಮಾದದ ಹೊರತು. ಇನ್ನು, ಪ್ರಮಾದದಿಂದ ಒಬ್ಬ ವಿಶ್ವಾಸಿಯನ್ನು ವಧಿಸಿದವನು ಒಬ್ಬ ವಿಶ್ವಾಸಿ ದಾಸನನ್ನು ಮುಕ್ತಗೊಳಿಸಬೇಕು ಮತ್ತು ಆತನ (ಹತನ) ಬಂಧುಗಳಿಗೆ ಪರಿಹಾರ ಧನ ನೀಡಬೇಕು – ಅವರೇ (ಬಂಧುಗಳೇ) ಅದನ್ನು ಕ್ಷಮಿಸಿದ್ದರ ಹೊರತು. ಆತನು (ಹಂತಕನು) ನಿಮ್ಮ ಶತ್ರು ಜನಾಂಗದವನಾಗಿದ್ದರೆ ಮತ್ತು ವಿಶ್ವಾಸಿಯೂ ಆಗಿದ್ದರೆ, ಒಬ್ಬ ವಿಶ್ವಾಸಿ ದಾಸನನ್ನು ಮುಕ್ತಗೊಳಿಸಬೇಕು. ಒಂದು ವೇಳೆ ಆತನು, ನಿಮ್ಮ ಜೊತೆ ಸಂಧಾನ ಮಾಡಿಕೊಂಡಿರುವ ಜನಾಂಗದವನಾಗಿದ್ದರೆ, ಆತನ (ಹತನ) ಬಂಧುಗಳಿಗೆ ಕಡ್ಡಾಯವಾಗಿ ಪರಿಹಾರ ಧನ ನೀಡಬೇಕು ಮತ್ತು ಒಬ್ಬ ವಿಶ್ವಾಸಿ ದಾಸನನ್ನು ಮುಕ್ತಗೊಳಿಸಬೇಕು. (ದಾಸ) ಸಿಗದಿದ್ದವನು ಸತತ ಎರಡು ತಿಂಗಳು ಉಪವಾಸ ಆಚರಿಸಬೇಕು – ಇದು ಅಲ್ಲಾಹನು ವಿಧಿಸಿರುವ ಪಶ್ಚಾತ್ತಾಪ ವಿಧಾನ. ಅಲ್ಲಾಹನಂತೂ ಎಲ್ಲವನ್ನೂ ಬಲ್ಲವನೂ ಯುಕ್ತಿವಂತನೂ ಆಗಿದ್ದಾನೆ