Surah Muhammad Verse 4 - Kannada Translation by Abdussalam Puthige
Surah Muhammadفَإِذَا لَقِيتُمُ ٱلَّذِينَ كَفَرُواْ فَضَرۡبَ ٱلرِّقَابِ حَتَّىٰٓ إِذَآ أَثۡخَنتُمُوهُمۡ فَشُدُّواْ ٱلۡوَثَاقَ فَإِمَّا مَنَّۢا بَعۡدُ وَإِمَّا فِدَآءً حَتَّىٰ تَضَعَ ٱلۡحَرۡبُ أَوۡزَارَهَاۚ ذَٰلِكَۖ وَلَوۡ يَشَآءُ ٱللَّهُ لَٱنتَصَرَ مِنۡهُمۡ وَلَٰكِن لِّيَبۡلُوَاْ بَعۡضَكُم بِبَعۡضٖۗ وَٱلَّذِينَ قُتِلُواْ فِي سَبِيلِ ٱللَّهِ فَلَن يُضِلَّ أَعۡمَٰلَهُمۡ
(ಯುದ್ಧದಲ್ಲಿ) ನೀವು ಧಿಕ್ಕಾರಿಗಳನ್ನು ಎದುರಿಸಿದಾಗ, ಕೊರಳುಗಳನ್ನು ಕತ್ತರಿಸಿರಿ. ಅವರನ್ನು ಚೆನ್ನಾಗಿ ಸದೆಬಡಿದ ಬಳಿಕ (ಉಳಿದವರನ್ನು) ಬಿಗಿಯಾಗಿ ಕಟ್ಟಿ ಹಾಕಿರಿ ಆ ಬಳಿಕ ನೀವು (ಅವರ ಮೇಲೆ) ಔದಾರ್ಯ ತೋರಬಹುದು ಅಥವಾ ಪರಿಹಾರ ಪಡೆಯಬಹುದು. ಯುದ್ಧವು ಮುಗಿಯುವ ತನಕ (ಪಾಲಿಸಬೇಕಾದ ನಿಯಮ) ಇದು. ಅಲ್ಲಾಹನು ಬಯಸಿದ್ದರೆ, ಅವರ ವಿರುದ್ಧ ಪ್ರತೀಕಾರ ತೀರಿಸುತ್ತಿದ್ದನು. ಆದರೆ ಅವನು ನಿಮ್ಮಲ್ಲಿ ಕೆಲವರನ್ನು ಮತ್ತೆ ಕೆಲವರ ಮೂಲಕ ಪರೀಕ್ಷಿಸ ಬಯಸುತ್ತಾನೆ. ಅಲ್ಲಾಹನ ಮಾರ್ಗದಲ್ಲಿ ಹತರಾದವರ ಕರ್ಮಗಳು ವ್ಯರ್ಥವಾಗಲಾರವು