Surah Al-Hujraat - Kannada Translation by Abdussalam Puthige
يَـٰٓأَيُّهَا ٱلَّذِينَ ءَامَنُواْ لَا تُقَدِّمُواْ بَيۡنَ يَدَيِ ٱللَّهِ وَرَسُولِهِۦۖ وَٱتَّقُواْ ٱللَّهَۚ إِنَّ ٱللَّهَ سَمِيعٌ عَلِيمٞ
ವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಮತ್ತು ಅವನ ದೂತರನ್ನು ಮೀರಿ ಹೋಗಬೇಡಿ. ಅಲ್ಲಾಹನಿಗೆ ಅಂಜಿರಿ, ಅಲ್ಲಾಹನು ಖಂಡಿತ ಎಲ್ಲವನ್ನೂ ಕೇಳುವವನೂ ಬಲ್ಲವನೂ ಆಗಿದ್ದಾನೆ
Surah Al-Hujraat, Verse 1
يَـٰٓأَيُّهَا ٱلَّذِينَ ءَامَنُواْ لَا تَرۡفَعُوٓاْ أَصۡوَٰتَكُمۡ فَوۡقَ صَوۡتِ ٱلنَّبِيِّ وَلَا تَجۡهَرُواْ لَهُۥ بِٱلۡقَوۡلِ كَجَهۡرِ بَعۡضِكُمۡ لِبَعۡضٍ أَن تَحۡبَطَ أَعۡمَٰلُكُمۡ وَأَنتُمۡ لَا تَشۡعُرُونَ
ವಿಶ್ವಾಸಿಗಳೇ, ಪ್ರವಾದಿಯ ಮಾತಿಗೆ ಎದುರಾಗಿ ನೀವು ಧ್ವನಿ ಏರಿಸಬೇಡಿ ಮತ್ತು ನೀವು ಪರಸ್ಪರರೊಡನೆ ಧ್ವನಿಯೇರಿಸಿ ಮಾತನಾಡುವಂತೆ ಅವರೆದುರು ಧ್ವನಿಯೇರಿಸಿ ಮಾತನಾಡಬೇಡಿ. (ತಪ್ಪಿದರೆ) ನಿಮಗೆ ಅರಿವೇ ಇಲ್ಲದಂತೆ ನಿಮ್ಮ ಕರ್ಮಗಳು ವ್ಯರ್ಥವಾಗಬಹುದು
Surah Al-Hujraat, Verse 2
إِنَّ ٱلَّذِينَ يَغُضُّونَ أَصۡوَٰتَهُمۡ عِندَ رَسُولِ ٱللَّهِ أُوْلَـٰٓئِكَ ٱلَّذِينَ ٱمۡتَحَنَ ٱللَّهُ قُلُوبَهُمۡ لِلتَّقۡوَىٰۚ لَهُم مَّغۡفِرَةٞ وَأَجۡرٌ عَظِيمٌ
ಅಲ್ಲಾಹನ ದೂತರ ಮುಂದೆ ಸೌಮ್ಯ ಧ್ವನಿಯಲ್ಲಿ ಮಾತನಾಡುವವರ ಮನಸ್ಸುಗಳನ್ನು ಅಲ್ಲಾಹನು ಧರ್ಮನಿಷ್ಠೆಯ ವಿಷಯದಲ್ಲಿ ಪರೀಕ್ಷಿಸಿರುವನು. ಅವರಿಗೆ ಕ್ಷಮೆ ಹಾಗೂ ಮಹಾ ಪುರಸ್ಕಾರ ಸಿಗಲಿದೆ
Surah Al-Hujraat, Verse 3
إِنَّ ٱلَّذِينَ يُنَادُونَكَ مِن وَرَآءِ ٱلۡحُجُرَٰتِ أَكۡثَرُهُمۡ لَا يَعۡقِلُونَ
(ದೂತರೇ,) ಕೊಠಡಿಗಳ ಹೊರಗಿನಿಂದ ನಿಮ್ಮನ್ನು ಕೂಗುವವರಲ್ಲಿ ಹೆಚ್ಚಿನವರು ಖಂಡಿತ ಬುದ್ಧಿವಂತರಲ್ಲ
Surah Al-Hujraat, Verse 4
وَلَوۡ أَنَّهُمۡ صَبَرُواْ حَتَّىٰ تَخۡرُجَ إِلَيۡهِمۡ لَكَانَ خَيۡرٗا لَّهُمۡۚ وَٱللَّهُ غَفُورٞ رَّحِيمٞ
ನೀವು ಹೊರಟು ಅವರೆಡೆಗೆ ಹೋಗುವ ತನಕ ಅವರು ಕಾದಿದ್ದರೆ, ಅದು ಅವರ ಪಾಲಿಗೆ ಉತ್ತಮವಾಗಿತ್ತು. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ
Surah Al-Hujraat, Verse 5
يَـٰٓأَيُّهَا ٱلَّذِينَ ءَامَنُوٓاْ إِن جَآءَكُمۡ فَاسِقُۢ بِنَبَإٖ فَتَبَيَّنُوٓاْ أَن تُصِيبُواْ قَوۡمَۢا بِجَهَٰلَةٖ فَتُصۡبِحُواْ عَلَىٰ مَا فَعَلۡتُمۡ نَٰدِمِينَ
ವಿಶ್ವಾಸಿಗಳೇ, ದುಷ್ಟನೊಬ್ಬನು ನಿಮ್ಮ ಬಳಿಗೆ ಒಂದು ಸುದ್ದಿಯನ್ನು ತಂದರೆ ಆ ಕುರಿತು ಸಾಕಷ್ಟು ತನಿಖೆ ನಡೆಸಿರಿ. (ತಪ್ಪಿದರೆ,) ನೀವು ಅರಿವಿಲ್ಲದೆ ಯಾವುದಾದರೂ ಜನಾಂಗಕ್ಕೆ ಹಾನಿ ಮಾಡಿ, ಆ ಬಳಿಕ ನಿಮ್ಮ ಕೃತ್ಯಕ್ಕಾಗಿ ಪಶ್ಚಾತ್ತಾಪ ಪಡಬೇಕಾದೀತು
Surah Al-Hujraat, Verse 6
وَٱعۡلَمُوٓاْ أَنَّ فِيكُمۡ رَسُولَ ٱللَّهِۚ لَوۡ يُطِيعُكُمۡ فِي كَثِيرٖ مِّنَ ٱلۡأَمۡرِ لَعَنِتُّمۡ وَلَٰكِنَّ ٱللَّهَ حَبَّبَ إِلَيۡكُمُ ٱلۡإِيمَٰنَ وَزَيَّنَهُۥ فِي قُلُوبِكُمۡ وَكَرَّهَ إِلَيۡكُمُ ٱلۡكُفۡرَ وَٱلۡفُسُوقَ وَٱلۡعِصۡيَانَۚ أُوْلَـٰٓئِكَ هُمُ ٱلرَّـٰشِدُونَ
ನಿಮಗೆ ತಿಳಿದಿರಲಿ, ಅಲ್ಲಾಹನ ದೂತರು ನಿಮ್ಮ ನಡುವೆ ಇದ್ದಾರೆ. ಹೆಚ್ಚಿನ ವಿಷಯಗಳಲ್ಲಿ ಅವರು ನಿಮ್ಮ ಇಚ್ಛೆಯಂತೆ ನಡೆದರೆ, ನೀವೇ ಸಂಕಟಕ್ಕೆ ಸಿಲುಕುವಿರಿ. ಆದರೆ ಅಲ್ಲಾಹನು ವಿಶ್ವಾಸವನ್ನು ನಿಮಗೆ ಪ್ರಿಯವಾಗಿಸಿರುವನು ಹಾಗೂ ಅದನ್ನು ನಿಮ್ಮ ಮನಸ್ಸುಗಳೊಳಗೆ ಅಲಂಕರಿಸಿರುವನು ಮತ್ತು ಅವನು ಧಿಕ್ಕಾರ ಹಾಗೂ ಪಾಪಕೃತ್ಯಗಳನ್ನು ಹಾಗೂ ಅವಿಧೇಯತೆಯನ್ನು ನಿಮಗೆ ಅಪ್ರಿಯವಾಗಿಸಿರುವನು. ಇಂಥವರೇ, ಸನ್ಮಾರ್ಗದಲ್ಲಿರುವವರು
Surah Al-Hujraat, Verse 7
فَضۡلٗا مِّنَ ٱللَّهِ وَنِعۡمَةٗۚ وَٱللَّهُ عَلِيمٌ حَكِيمٞ
(ಇದು) ಅಲ್ಲಾಹನ ಅನುಗ್ರಹ ಮತ್ತು ಕೊಡುಗೆ. ಅಲ್ಲಾಹನು ಬಲ್ಲವನೂ ಯುಕ್ತಿವಂತನೂ ಆಗಿದ್ದಾನೆ
Surah Al-Hujraat, Verse 8
وَإِن طَآئِفَتَانِ مِنَ ٱلۡمُؤۡمِنِينَ ٱقۡتَتَلُواْ فَأَصۡلِحُواْ بَيۡنَهُمَاۖ فَإِنۢ بَغَتۡ إِحۡدَىٰهُمَا عَلَى ٱلۡأُخۡرَىٰ فَقَٰتِلُواْ ٱلَّتِي تَبۡغِي حَتَّىٰ تَفِيٓءَ إِلَىٰٓ أَمۡرِ ٱللَّهِۚ فَإِن فَآءَتۡ فَأَصۡلِحُواْ بَيۡنَهُمَا بِٱلۡعَدۡلِ وَأَقۡسِطُوٓاْۖ إِنَّ ٱللَّهَ يُحِبُّ ٱلۡمُقۡسِطِينَ
ವಿಶ್ವಾಸಿಗಳಲ್ಲಿನ ಎರಡು ಗುಂಪುಗಳು ಪರಸ್ಪರ ಜಗಳಾಡಿದರೆ ಅವರ ನಡುವೆ ಸಂಧಾನ ಏರ್ಪಡಿಸಿರಿ. ಇನ್ನು, ಅವರಲ್ಲಿನ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಅತಿರೇಕವೆಸಗುತ್ತಿದ್ದರೆ. ಅತಿರೇಕ ಎಸಗುತ್ತಿರುವವರು ಅಲ್ಲಾಹನ ಆದೇಶದೆಡೆಗೆ ಮರಳುವ ತನಕವೂ ಅವರ ವಿರುದ್ಧ ನೀವು ಹೋರಾಡಿರಿ. ಕೊನೆಗೆ ಅವರು (ಅಲ್ಲಾಹನ ಆದೇಶದೆಡೆಗೆ) ಮರಳಿದಾಗ, ಆ ಎರಡು ಗುಂಪುಗಳ ನಡುವೆ ನ್ಯಾಯೋಚಿತ ರೀತಿಯಲ್ಲಿ ಸಂಧಾನವನ್ನು ಏರ್ಪಡಿಸಿರಿ. ಮತ್ತು ನೀವು ಸದಾ ನ್ಯಾಯ ಪಾಲಿಸಿರಿ. ಅಲ್ಲಾಹನು ನ್ಯಾಯವಂತರನ್ನು ಖಂಡಿತ ಪ್ರೀತಿಸುತ್ತಾನೆ
Surah Al-Hujraat, Verse 9
إِنَّمَا ٱلۡمُؤۡمِنُونَ إِخۡوَةٞ فَأَصۡلِحُواْ بَيۡنَ أَخَوَيۡكُمۡۚ وَٱتَّقُواْ ٱللَّهَ لَعَلَّكُمۡ تُرۡحَمُونَ
ವಿಶ್ವಾಸಿಗಳು ಪರಸ್ಪರ ಸಹೋದರರು. ನೀವು ನಿಮ್ಮ ಇಬ್ಬರು ಸಹೋದರರ ನಡುವೆ ಸಂಧಾನ ಏರ್ಪಡಿಸಿರಿ ಮತ್ತು ಅಲ್ಲಾಹನಿಗೆ ಅಂಜಿರಿ. ನೀವು ಅವನ ಕರುಣೆಗೆ ಪಾತ್ರರಾಗಬಹುದು
Surah Al-Hujraat, Verse 10
يَـٰٓأَيُّهَا ٱلَّذِينَ ءَامَنُواْ لَا يَسۡخَرۡ قَوۡمٞ مِّن قَوۡمٍ عَسَىٰٓ أَن يَكُونُواْ خَيۡرٗا مِّنۡهُمۡ وَلَا نِسَآءٞ مِّن نِّسَآءٍ عَسَىٰٓ أَن يَكُنَّ خَيۡرٗا مِّنۡهُنَّۖ وَلَا تَلۡمِزُوٓاْ أَنفُسَكُمۡ وَلَا تَنَابَزُواْ بِٱلۡأَلۡقَٰبِۖ بِئۡسَ ٱلِٱسۡمُ ٱلۡفُسُوقُ بَعۡدَ ٱلۡإِيمَٰنِۚ وَمَن لَّمۡ يَتُبۡ فَأُوْلَـٰٓئِكَ هُمُ ٱلظَّـٰلِمُونَ
ವಿಶ್ವಾಸಿಗಳೇ, (ನಿಮ್ಮಲ್ಲಿನ ಪುರುಷರ) ಒಂದು ಗುಂಪು ಇನ್ನೊಂದು ಗುಂಪನ್ನು ಗೇಲಿ ಮಾಡಬಾರದು. ಏಕೆಂದರೆ, ಅವರು, ಇವರಿಗಿಂತ ಉತ್ತಮರಾಗಿರಬಹುದು. ಹಾಗೆಯೇ, ಸ್ತ್ರೀಯರು ಇತರ ಸ್ತ್ರೀಯರನ್ನು ಗೇಲಿ ಮಾಡಬಾರದು. ಏಕೆಂದರೆ, ಅವರು ಇವರಿಗಿಂತ ಉತ್ತಮರಾಗಿರಬಹುದು. ಇನ್ನು ನೀವು, ಪರಸ್ಪರರ ದೋಷ ಹುಡುಕುತ್ತಿರಬೇಡಿ ಮತ್ತು ಯಾರನ್ನೂ ಅಡ್ಡ ಹೆಸರುಗಳಿಂದ ಕರೆಯಬೇಡಿ. ವಿಶ್ವಾಸಿಗಳಾದ ಬಳಿಕ ದುಷ್ಟ ಕೃತ್ಯಗಳಲ್ಲಿ ಹೆಸರುಗಳಿಸುವುದು ಪಾಪವಾಗಿದೆ. (ತಪ್ಪು ಮಾಡಿ) ಪಶ್ಚಾತ್ತಾಪ ಪಡದವರೇ ಅಕ್ರಮಿಗಳು
Surah Al-Hujraat, Verse 11
يَـٰٓأَيُّهَا ٱلَّذِينَ ءَامَنُواْ ٱجۡتَنِبُواْ كَثِيرٗا مِّنَ ٱلظَّنِّ إِنَّ بَعۡضَ ٱلظَّنِّ إِثۡمٞۖ وَلَا تَجَسَّسُواْ وَلَا يَغۡتَب بَّعۡضُكُم بَعۡضًاۚ أَيُحِبُّ أَحَدُكُمۡ أَن يَأۡكُلَ لَحۡمَ أَخِيهِ مَيۡتٗا فَكَرِهۡتُمُوهُۚ وَٱتَّقُواْ ٱللَّهَۚ إِنَّ ٱللَّهَ تَوَّابٞ رَّحِيمٞ
ವಿಶ್ವಾಸಿಗಳೇ, ಹೆಚ್ಚಿನ ಸಂಶಯಗಳಿಂದ ದೂರವಿರಿ. ಕೆಲವು ಸಂಶಯಗಳು ಪಾಪಗಳಾಗಿವೆ. ಮತ್ತು ನೀವು ಪರಸ್ಪರ ಬೇಹುಗಾರಿಕೆ ನಡೆಸಬೇಡಿ ಹಾಗೂ ನಿಮ್ಮಲ್ಲಿ ಯಾರೂ ಇನ್ನೊಬ್ಬರನ್ನು ಅವರ ಬೆನ್ನ ಹಿಂದೆ ದೂಷಿಸಬಾರದು. ನಿಮ್ಮಲ್ಲಿ ಯಾರಾದರೂ ತನ್ನ ಮೃತ ಸಹೋದರನ ಮಾಂಸ ತಿನ್ನುವುದನ್ನು ಮೆಚ್ಚುತ್ತಾನೆಯೇ? ಖಂಡಿತ, ಅದು ನಿಮಗೆ ತೀರಾ ಅಪ್ರಿಯವಾಗಿದೆ. ಹಾಗಾದರೆ, ಅಲ್ಲಾಹನಿಗೆ ಅಂಜಿರಿ. ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
Surah Al-Hujraat, Verse 12
يَـٰٓأَيُّهَا ٱلنَّاسُ إِنَّا خَلَقۡنَٰكُم مِّن ذَكَرٖ وَأُنثَىٰ وَجَعَلۡنَٰكُمۡ شُعُوبٗا وَقَبَآئِلَ لِتَعَارَفُوٓاْۚ إِنَّ أَكۡرَمَكُمۡ عِندَ ٱللَّهِ أَتۡقَىٰكُمۡۚ إِنَّ ٱللَّهَ عَلِيمٌ خَبِيرٞ
ಮಾನವರೇ, ಖಂಡಿತವಾಗಿಯೂ ನಾವು ನಿಮ್ಮೆಲ್ಲರನ್ನೂ ಒಬ್ಬ ಪುರುಷ ಹಾಗೂ ಒಬ್ಬ ಸ್ತ್ರೀಯಿಂದ ಸೃಷ್ಟಿಸಿರುವೆವು. ತರುವಾಯ, ನೀವು ಪರಸ್ಪರ ಗುರುತಿಸುವಂತಾಗಲು ನಿಮ್ಮನ್ನು (ವಿವಿಧ) ಜನಾಂಗಗಳಾಗಿ ಹಾಗೂ ಪಂಗಡಗಳಾಗಿ ರೂಪಿಸಿರುವೆವು. ಅಲ್ಲಾಹನ ದೃಷ್ಟಿಯಲ್ಲಿ ನಿಮ್ಮ ಪೈಕಿ ಅತ್ಯಧಿಕ ಧರ್ಮನಿಷ್ಠನಾಗಿರುವವನೇ ನಿಮ್ಮಲ್ಲಿನ ಅತ್ಯುತ್ತಮನಾಗಿರುವನು. ಅಲ್ಲಾಹನು ಖಂಡಿತವಾಗಿಯೂ ಬಲ್ಲವನು ಹಾಗೂ ಅರಿವು ಉಳ್ಳವನಾಗಿದ್ದಾನೆ
Surah Al-Hujraat, Verse 13
۞قَالَتِ ٱلۡأَعۡرَابُ ءَامَنَّاۖ قُل لَّمۡ تُؤۡمِنُواْ وَلَٰكِن قُولُوٓاْ أَسۡلَمۡنَا وَلَمَّا يَدۡخُلِ ٱلۡإِيمَٰنُ فِي قُلُوبِكُمۡۖ وَإِن تُطِيعُواْ ٱللَّهَ وَرَسُولَهُۥ لَا يَلِتۡكُم مِّنۡ أَعۡمَٰلِكُمۡ شَيۡـًٔاۚ إِنَّ ٱللَّهَ غَفُورٞ رَّحِيمٌ
ಆ ಹಳ್ಳಿಗರು, ‘‘ನಾವು ವಿಶ್ವಾಸಿಗಳಾದೆವು’’ ಎನ್ನುತ್ತಾರೆ. ಹೇಳಿರಿ; ‘‘ನೀವು ವಿಶ್ವಾಸಿಗಳೇನೂ ಆಗಿಲ್ಲ. ನಾವು ಶರಣಾಗಿರುವೆವು ಎಂದಷ್ಟೆ ಹೇಳಿರಿ. ಏಕೆಂದರೆ ವಿಶ್ವಾಸವು ಇನ್ನೂ ನಿಮ್ಮ ಮನಸ್ಸುಗಳನ್ನು ಪ್ರವೇಶಿಸಿಲ್ಲ. ನೀವು ಅಲ್ಲಾಹ್ ಮತ್ತು ಅವನ ದೂತರ ಆದೇಶಗಳನ್ನು ಪಾಲಿಸಿದರೆ, ನಿಮ್ಮ ಕರ್ಮಗಳಲ್ಲಿ ಏನೂ ಕಡಿತವಾಗದು. ಅಲ್ಲಾಹನು ಖಂಡಿತ ಕ್ಷಮಾಶೀಲನೂ ಕರುಣಾಳುವೂ ಆಗಿದ್ದಾನೆ’’
Surah Al-Hujraat, Verse 14
إِنَّمَا ٱلۡمُؤۡمِنُونَ ٱلَّذِينَ ءَامَنُواْ بِٱللَّهِ وَرَسُولِهِۦ ثُمَّ لَمۡ يَرۡتَابُواْ وَجَٰهَدُواْ بِأَمۡوَٰلِهِمۡ وَأَنفُسِهِمۡ فِي سَبِيلِ ٱللَّهِۚ أُوْلَـٰٓئِكَ هُمُ ٱلصَّـٰدِقُونَ
ನಿಜವಾದ ವಿಶ್ವಾಸಿಗಳು, ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಟ್ಟ ಬಳಿಕ ಎಂದೂ ಸಂಶಯಪಡುವುದಿಲ್ಲ ಮತ್ತು ಅವರು ತಮ್ಮ ಸಂಪತ್ತುಗಳನ್ನೂ ತಮ್ಮ ಜೀವಗಳನ್ನೂ ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡುತ್ತಾರೆ. ಅವರೇ ಸತ್ಯವಂತರು
Surah Al-Hujraat, Verse 15
قُلۡ أَتُعَلِّمُونَ ٱللَّهَ بِدِينِكُمۡ وَٱللَّهُ يَعۡلَمُ مَا فِي ٱلسَّمَٰوَٰتِ وَمَا فِي ٱلۡأَرۡضِۚ وَٱللَّهُ بِكُلِّ شَيۡءٍ عَلِيمٞ
ಹೇಳಿರಿ; ನೀವೇನು, ನಿಮ್ಮ ಧಾರ್ಮಿಕತೆಯನ್ನು ಅಲ್ಲಾಹನಿಗೆ ತಿಳಿಸಬಯಸುವಿರಾ? ಅಲ್ಲಾಹನಂತು ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವನ್ನೂ ಬಲ್ಲವನಾಗಿದ್ದಾನೆ ಮತ್ತು ಅಲ್ಲಾಹನು ಎಲ್ಲ ವಿಷಯಗಳ ಜ್ಞಾನ ಉಳ್ಳವನಾಗಿದ್ದಾನೆ
Surah Al-Hujraat, Verse 16
يَمُنُّونَ عَلَيۡكَ أَنۡ أَسۡلَمُواْۖ قُل لَّا تَمُنُّواْ عَلَيَّ إِسۡلَٰمَكُمۖ بَلِ ٱللَّهُ يَمُنُّ عَلَيۡكُمۡ أَنۡ هَدَىٰكُمۡ لِلۡإِيمَٰنِ إِن كُنتُمۡ صَٰدِقِينَ
(ದೂತರೇ,) ಅವರು, ತಾವು ಮುಸ್ಲಿಮರಾಗಿದ್ದೇವೆಂದು ನಿಮ್ಮ ಮೇಲೆ ಋಣ ಹೊರಿಸುತ್ತಿದ್ದಾರೆ. ಹೇಳಿರಿ; ನೀವು ಮುಸ್ಲಿಮರಾದುದಕ್ಕೆ ನನ್ನ ಮೇಲೇನೂ ಋಣ ಹೊರಿಸಬೇಡಿ. ನೀವು ಸತ್ಯವಂತರಾಗಿದ್ದರೆ, ನಿಮ್ಮನ್ನು ವಿಶ್ವಾಸದೆಡೆಗೆ ಮುನ್ನಡೆಸಿದ್ದಕ್ಕಾಗಿ, ನಿಮ್ಮ ಮೇಲೆ ಅಲ್ಲಾಹನು ತನ್ನ ಋಣವನ್ನು ಹೊರಿಸುತ್ತಾನೆ
Surah Al-Hujraat, Verse 17
إِنَّ ٱللَّهَ يَعۡلَمُ غَيۡبَ ٱلسَّمَٰوَٰتِ وَٱلۡأَرۡضِۚ وَٱللَّهُ بَصِيرُۢ بِمَا تَعۡمَلُونَ
ಅಲ್ಲಾಹನು ಆಕಾಶಗಳ ಮತ್ತು ಭೂಮಿಯ ರಹಸ್ಯಗಳನ್ನೆಲ್ಲಾ ಖಂಡಿತ ಬಲ್ಲನು ಮತ್ತು ಅಲ್ಲಾಹನು ನೀವು ಮಾಡುತ್ತಿರುವ ಎಲ್ಲವನ್ನೂ ನೋಡುತ್ತಿದ್ದಾನೆ
Surah Al-Hujraat, Verse 18