Surah Al-Araf Verse 156 - Kannada Translation by Abdussalam Puthige
Surah Al-Araf۞وَٱكۡتُبۡ لَنَا فِي هَٰذِهِ ٱلدُّنۡيَا حَسَنَةٗ وَفِي ٱلۡأٓخِرَةِ إِنَّا هُدۡنَآ إِلَيۡكَۚ قَالَ عَذَابِيٓ أُصِيبُ بِهِۦ مَنۡ أَشَآءُۖ وَرَحۡمَتِي وَسِعَتۡ كُلَّ شَيۡءٖۚ فَسَأَكۡتُبُهَا لِلَّذِينَ يَتَّقُونَ وَيُؤۡتُونَ ٱلزَّكَوٰةَ وَٱلَّذِينَ هُم بِـَٔايَٰتِنَا يُؤۡمِنُونَ
ಅವರು ನಿರಕ್ಷರಿ ಪ್ರವಾದಿಯನ್ನು ಅನುಸರಿಸುತ್ತಾರೆ. ಅವರ (ಆ ಪ್ರವಾದಿಯ) ಕುರಿತು ತಮ್ಮ ಬಳಿ ಇರುವ ತೌರಾತ್ ಮತ್ತು ಇಂಜೀಲ್ಗಳಲ್ಲಿ (ಈ ರೀತಿ) ಬರೆದಿರುವುದನ್ನು ಅವರು ಕಾಣುತ್ತಾರೆ; ‘‘ಅವರು (ಆ ಪ್ರವಾದಿ) ಅವರಿಗೆ, ಒಳಿತನ್ನು ಆದೇಶಿಸುವರು, ಅವರನ್ನು ಕೆಡುಕಿನಿಂದ ತಡೆಯುವರು, ನಿರ್ಮಲವಾದವುಗಳನ್ನು ಅವರ ಪಾಲಿಗೆ ಸಮ್ಮತಗೊಳಿಸುವರು, ಮಲಿನ ವಸ್ತುಗಳನ್ನು ಅವರ ಪಾಲಿಗೆ ನಿಷೇಧಿಸುವರು, ಅವರಿಂದ ಅವರ ಭಾರಗಳನ್ನು ಇಳಿಸುವರು ಮತ್ತು ಅವರ ಮೇಲಿದ್ದ ನೊಗಗಳನ್ನು ಕಳಚುವರು – ಅವರಲ್ಲಿ ನಂಬಿಕೆ ಇಟ್ಟು ಅವರನ್ನು ಸಮರ್ಥಿಸುವವರು, ಅವರಿಗೆ ನೆರವಾಗುವವರು ಮತ್ತು ಅವರ ಜೊತೆಗೆ ಇಳಿಸಲಾಗಿರುವ ಪ್ರಕಾಶವನ್ನು ಅನುಸರಿಸುವವರೇ ವಿಜಯಿಗಳು.’’