Surah Al-Muddathir Verse 31 - Kannada Translation by Abdussalam Puthige
Surah Al-Muddathirوَمَا جَعَلۡنَآ أَصۡحَٰبَ ٱلنَّارِ إِلَّا مَلَـٰٓئِكَةٗۖ وَمَا جَعَلۡنَا عِدَّتَهُمۡ إِلَّا فِتۡنَةٗ لِّلَّذِينَ كَفَرُواْ لِيَسۡتَيۡقِنَ ٱلَّذِينَ أُوتُواْ ٱلۡكِتَٰبَ وَيَزۡدَادَ ٱلَّذِينَ ءَامَنُوٓاْ إِيمَٰنٗا وَلَا يَرۡتَابَ ٱلَّذِينَ أُوتُواْ ٱلۡكِتَٰبَ وَٱلۡمُؤۡمِنُونَ وَلِيَقُولَ ٱلَّذِينَ فِي قُلُوبِهِم مَّرَضٞ وَٱلۡكَٰفِرُونَ مَاذَآ أَرَادَ ٱللَّهُ بِهَٰذَا مَثَلٗاۚ كَذَٰلِكَ يُضِلُّ ٱللَّهُ مَن يَشَآءُ وَيَهۡدِي مَن يَشَآءُۚ وَمَا يَعۡلَمُ جُنُودَ رَبِّكَ إِلَّا هُوَۚ وَمَا هِيَ إِلَّا ذِكۡرَىٰ لِلۡبَشَرِ
ನಾವು ಮಲಕ್ಗಳನ್ನೇ ನರಕದ ಕಾವಲುಗಾರರಾಗಿಸಿರುವೆವು ಮತ್ತು ಅವರ ಸಂಖ್ಯೆಯನ್ನು ಧಿಕ್ಕಾರಿಗಳ ಪಾಲಿಗೆ ಪರೀಕ್ಷೆಯಾಗಿಸಿರುವೆವು – ಗ್ರಂಥದವರು ನಂಬಲೆಂದು ಹಾಗೂ ವಿಶ್ವಾಸಿಗಳ ವಿಶ್ವಾಸವು ಹೆಚ್ಚಲೆಂದು ಮತ್ತು ಗ್ರಂಥದವರಾಗಲಿ ವಿಶ್ವಾಸಿಗಳಾಗಲಿ ಸಂಶಯಕ್ಕೆ ತುತ್ತಾಗಬಾರದೆಂದು ಮತ್ತು ಮನಸ್ಸಿನಲ್ಲಿ ರೋಗವಿರುವವರು ಹಾಗೂ ಧಿಕ್ಕಾರಿಗಳು ‘‘ಈ ಉದಾಹರಣೆಯ ಮೂಲಕ ಅಲ್ಲಾಹನು ಬಯಸುವುದೇನನ್ನು?’’ ಎಂದು ಕೇಳಲೆಂದು. ಈ ರೀತಿ ಅಲ್ಲಾಹನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ನಿಮ್ಮ ಒಡೆಯನ ಪಡೆಗಳ ಕುರಿತು ಅವನ ಹೊರತು ಬೇರೆ ಯಾರಿಗೂ ತಿಳಿಯದು. ಇದು ಮಾನವರಿಗಾಗಿರುವ ಉಪದೇಶ ಮಾತ್ರವಾಗಿದೆ