UAE Prayer Times

  • Dubai
  • Abu Dhabi
  • Sharjah
  • Ajman
  • Fujairah
  • Umm Al Quwain
  • Ras Al Khaimah
  • Quran Translations

Surah At-Taubah - Kannada Translation by Abdussalam Puthige


بَرَآءَةٞ مِّنَ ٱللَّهِ وَرَسُولِهِۦٓ إِلَى ٱلَّذِينَ عَٰهَدتُّم مِّنَ ٱلۡمُشۡرِكِينَ

ಮಹಾನ್ ಹಜ್ಜ್ ಯಾತ್ರೆಯ ದಿನ, ಅಲ್ಲಾಹ್ ಮತ್ತು ಅವನ ದೂತರ ಕಡೆಯಿಂದ, ಸಕಲ ಮಾನವರಿಗಾಗಿರುವ ಘೋಷಣೆ ಇದು; ಬಹುದೇವಾರಾಧಕರ ವಿಷಯದಲ್ಲಿ ಅಲ್ಲಾಹ್ ಮತ್ತು ಅವನ ದೂತರು ಹೊಣೆ ಮುಕ್ತರು. ನೀವೀಗ ಪಶ್ಚಾತ್ತಾಪ ಪಟ್ಟರೆ ಅದು ನಿಮ್ಮ ಪಾಲಿಗೆ ಉತ್ತಮ. ಇನ್ನು ನೀವು ಕಡೆಗಣಿಸುವಿರಾದರೆ, ನಿಮಗೆ ತಿಳಿದಿರಲಿ; ಅಲ್ಲಾಹನನ್ನು ಸೋಲಿಸಲು ನಿಮ್ಮಿಂದಾಗದು. ಧಿಕ್ಕಾರಿಗಳಿಗೆ ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ
Surah At-Taubah, Verse 1


فَسِيحُواْ فِي ٱلۡأَرۡضِ أَرۡبَعَةَ أَشۡهُرٖ وَٱعۡلَمُوٓاْ أَنَّكُمۡ غَيۡرُ مُعۡجِزِي ٱللَّهِ وَأَنَّ ٱللَّهَ مُخۡزِي ٱلۡكَٰفِرِينَ

ಬಹುದೇವಾರಾಧಕರ ಪೈಕಿ ನೀವು ಕರಾರು ಮಾಡಿಕೊಂಡಿರುವ ಮತ್ತು ಆ ಬಳಿಕ ನಿಮಗೆ ಯಾವುದೇ ಹಕ್ಕುಚ್ಯುತಿ ಮಾಡಿಲ್ಲದ ಹಾಗೂ ನಿಮ್ಮ ವಿರುದ್ಧ ಯಾರಿಗೂ ನೆರವು ನೀಡಿಲ್ಲದ ಜನಾಂಗಗಳ ಕರಾರುಗಳನ್ನು ಅವುಗಳ ಅವಧಿಯ ತನಕ ಪೂರ್ತಿಗೊಳಿಸಿರಿ. ಖಂಡಿತವಾಗಿಯೂ ಅಲ್ಲಾಹನು ಧರ್ಮನಿಷ್ಠರನ್ನು ಪ್ರೀತಿಸುತ್ತಾನೆ
Surah At-Taubah, Verse 2


وَأَذَٰنٞ مِّنَ ٱللَّهِ وَرَسُولِهِۦٓ إِلَى ٱلنَّاسِ يَوۡمَ ٱلۡحَجِّ ٱلۡأَكۡبَرِ أَنَّ ٱللَّهَ بَرِيٓءٞ مِّنَ ٱلۡمُشۡرِكِينَ وَرَسُولُهُۥۚ فَإِن تُبۡتُمۡ فَهُوَ خَيۡرٞ لَّكُمۡۖ وَإِن تَوَلَّيۡتُمۡ فَٱعۡلَمُوٓاْ أَنَّكُمۡ غَيۡرُ مُعۡجِزِي ٱللَّهِۗ وَبَشِّرِ ٱلَّذِينَ كَفَرُواْ بِعَذَابٍ أَلِيمٍ

(ನಾಲ್ಕು) ಪವಿತ್ರ ತಿಂಗಳುಗಳು ಮುಗಿದಾಗ, ಆ ಬಹುದೇವಾರಾಧಕರನ್ನು ಕಂಡಲ್ಲಿ ಕೊಲ್ಲಿರಿ, ಅವರನ್ನು ಹಿಡಿಯಿರಿ, ಸುತ್ತುವರಿಯಿರಿ ಮತ್ತು ಪ್ರತಿಯೊಂದು ಆಯಕಟ್ಟಿನ ಸ್ಥಳದಲ್ಲಿ ಅವರಿಗಾಗಿ ಹೊಂಚಿನಲ್ಲಿರಿ. ತರುವಾಯ, ಅವರು ಪಶ್ಚಾತ್ತಾಪ ಪಟ್ಟರೆ, ನಮಾಝ್‌ಅನ್ನು ಪಾಲಿಸುವವರಾದರೆ ಮತ್ತು ಝಕಾತ್‌ಅನ್ನು ಪಾವತಿಸಿದರೆ, ಅವರಿಗೆ ಅವರ ದಾರಿಯನ್ನು ಬಿಟ್ಟು ಕೊಡಿರಿ. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಮತ್ತು ಕರುಣಾಮಯಿಯಾಗಿದ್ದಾನೆ
Surah At-Taubah, Verse 3


إِلَّا ٱلَّذِينَ عَٰهَدتُّم مِّنَ ٱلۡمُشۡرِكِينَ ثُمَّ لَمۡ يَنقُصُوكُمۡ شَيۡـٔٗا وَلَمۡ يُظَٰهِرُواْ عَلَيۡكُمۡ أَحَدٗا فَأَتِمُّوٓاْ إِلَيۡهِمۡ عَهۡدَهُمۡ إِلَىٰ مُدَّتِهِمۡۚ إِنَّ ٱللَّهَ يُحِبُّ ٱلۡمُتَّقِينَ

ಇನ್ನು ಬಹುದೇವಾರಾಧಕರ ಪೈಕಿ ಯಾರಾದರೂ ನಿಮ್ಮ ಆಶ್ರಯ ಬಯಸಿದರೆ, ಅವನು ಅಲ್ಲಾಹನ ವಾಣಿಯನ್ನು ಕೇಳುವ ತನಕ ಅವನಿಗೆ ಆಶ್ರಯ ನೀಡಿರಿ. ಆ ಬಳಿಕ ಅವನನ್ನು ಅವನ ಸುರಕ್ಷಿತ ಸ್ಥಳಕ್ಕೆ ತಲುಪಿಸಿರಿ. ಇದೇಕೆಂದರೆ, ಅವರು ಅರಿವಿಲ್ಲದವರು
Surah At-Taubah, Verse 4


فَإِذَا ٱنسَلَخَ ٱلۡأَشۡهُرُ ٱلۡحُرُمُ فَٱقۡتُلُواْ ٱلۡمُشۡرِكِينَ حَيۡثُ وَجَدتُّمُوهُمۡ وَخُذُوهُمۡ وَٱحۡصُرُوهُمۡ وَٱقۡعُدُواْ لَهُمۡ كُلَّ مَرۡصَدٖۚ فَإِن تَابُواْ وَأَقَامُواْ ٱلصَّلَوٰةَ وَءَاتَوُاْ ٱلزَّكَوٰةَ فَخَلُّواْ سَبِيلَهُمۡۚ إِنَّ ٱللَّهَ غَفُورٞ رَّحِيمٞ

ನೀವು ‘ಮಸ್ಜಿದುಲ್ ಹರಾಮ್’ನಲ್ಲಿ ಕರಾರು ಮಾಡಿಕೊಂಡಿರುವವರ ಹೊರತು (ಇತರ) ಬಹುದೇವಾರಾಧಕರಿಗೆ ಅಲ್ಲಾಹನ ಜೊತೆಗಾಗಲಿ ಅವನ ದೂತರ ಜೊತೆಗಾಗಲಿ ಯಾವುದೇ ಕರಾರು ಇರಲು ಹೇಗೆ ತಾನೇ ಸಾಧ್ಯ? ಅವರು ನಿಮ್ಮ ಜೊತೆ ನೇರವಾಗಿರುವ ತನಕ ನೀವು ಅವರ ಜೊತೆ ನೇರವಾಗಿರಿ. ಖಂಡಿತವಾಗಿಯೂ ಅಲ್ಲಾಹನು, ಸತ್ಯನಿಷ್ಠರನ್ನು ಪ್ರೀತಿಸುತ್ತಾನೆ
Surah At-Taubah, Verse 5


وَإِنۡ أَحَدٞ مِّنَ ٱلۡمُشۡرِكِينَ ٱسۡتَجَارَكَ فَأَجِرۡهُ حَتَّىٰ يَسۡمَعَ كَلَٰمَ ٱللَّهِ ثُمَّ أَبۡلِغۡهُ مَأۡمَنَهُۥۚ ذَٰلِكَ بِأَنَّهُمۡ قَوۡمٞ لَّا يَعۡلَمُونَ

ಹೇಗಿದೆ (ಅವರ ಈ ಧೋರಣೆ)? ಅವರಿಗೆ ನಿಮ್ಮ ಮೇಲೆ ಪ್ರಾಬಲ್ಯ ಸಿಕ್ಕಿದರೆ ಅವರು ನಿಮ್ಮ ಜೊತೆಗಿನ ಬಾಂಧವ್ಯವನ್ನಾಗಲಿ, ಕರಾರನ್ನಾಗಲಿ ಲೆಕ್ಕಿಸುವವರಲ್ಲ. ಅವರು ಕೇವಲ ತಮ್ಮ ಮಾತುಗಳಿಂದ ನಿಮ್ಮನ್ನು ಒಲಿಸಿಕೊಳ್ಳುತ್ತಾರೆ. ಆದರೆ ಅವರ ಮನಸ್ಸುಗಳು ಒಪ್ಪುವುದಿಲ್ಲ. ಅವರಲ್ಲಿ ಹೆಚ್ಚಿನವರು ವಚನ ಭ್ರಷ್ಟರಾಗಿದ್ದಾರೆ
Surah At-Taubah, Verse 6


كَيۡفَ يَكُونُ لِلۡمُشۡرِكِينَ عَهۡدٌ عِندَ ٱللَّهِ وَعِندَ رَسُولِهِۦٓ إِلَّا ٱلَّذِينَ عَٰهَدتُّمۡ عِندَ ٱلۡمَسۡجِدِ ٱلۡحَرَامِۖ فَمَا ٱسۡتَقَٰمُواْ لَكُمۡ فَٱسۡتَقِيمُواْ لَهُمۡۚ إِنَّ ٱللَّهَ يُحِبُّ ٱلۡمُتَّقِينَ

ಅವರು ಅಲ್ಲಾಹನ ವಚನಗಳನ್ನು ತೀರಾ ಸಣ್ಣ ಬೆಲೆಗೆ ಮಾರುತ್ತಾರೆ ಮತ್ತು (ಜನರನ್ನು) ಅವನ ಮಾರ್ಗದಿಂದ ತಡೆಯುತ್ತಾರೆ. ಖಂಡಿತವಾಗಿಯೂ ಅವರು ಮಾಡುತ್ತಿರುವುದೆಲ್ಲವೂ ತೀರಾ ಕೆಟ್ಟದಾಗಿದೆ
Surah At-Taubah, Verse 7


كَيۡفَ وَإِن يَظۡهَرُواْ عَلَيۡكُمۡ لَا يَرۡقُبُواْ فِيكُمۡ إِلّٗا وَلَا ذِمَّةٗۚ يُرۡضُونَكُم بِأَفۡوَٰهِهِمۡ وَتَأۡبَىٰ قُلُوبُهُمۡ وَأَكۡثَرُهُمۡ فَٰسِقُونَ

ಯಾವುದೇ ವಿಶ್ವಾಸಿಯ ವಿಷಯದಲ್ಲಿ ಅವರು ಬಾಂಧವ್ಯವನ್ನಾಗಲಿ ಕರಾರನ್ನಾಗಲಿ ಲೆಕ್ಕಿಸುವುದಿಲ್ಲ. ಅವರೇ ನಿಜವಾಗಿ ಎಲ್ಲೆ ಮೀರುವವರು
Surah At-Taubah, Verse 8


ٱشۡتَرَوۡاْ بِـَٔايَٰتِ ٱللَّهِ ثَمَنٗا قَلِيلٗا فَصَدُّواْ عَن سَبِيلِهِۦٓۚ إِنَّهُمۡ سَآءَ مَا كَانُواْ يَعۡمَلُونَ

ಇಷ್ಟಾಗಿಯೂ, ಅವರು ಪಶ್ಚಾತ್ತಾಪ ಪಟ್ಟರೆ, ನಮಾಝ್‌ಅನ್ನು ಪಾಲಿಸಿದರೆ ಮತ್ತು ಝಕಾತ್ ಅನ್ನು ಪಾವತಿಸಿದರೆ, ಅವರು ಧರ್ಮದಲ್ಲಿ ನಿಮ್ಮ ಸಹೋದರರು. ನಾವಂತು, ಅರಿಯುವವರಿಗಾಗಿ ನಮ್ಮ ವಚನಗಳನ್ನು ವಿವರಿಸುತ್ತೇವೆ
Surah At-Taubah, Verse 9


لَا يَرۡقُبُونَ فِي مُؤۡمِنٍ إِلّٗا وَلَا ذِمَّةٗۚ وَأُوْلَـٰٓئِكَ هُمُ ٱلۡمُعۡتَدُونَ

ಇನ್ನು ಅವರು, ಕರಾರು ಮಾಡಿಕೊಂಡ ಬಳಿಕ ತಮ್ಮ ಪ್ರತಿಜ್ಞೆಗಳನ್ನು ಮುರಿದರೆ ಮತ್ತು ಧರ್ಮದ ವಿಷಯದಲ್ಲಿ ನಿಮ್ಮನ್ನು ನಿಂದಿಸಿದರೆ, ಸತ್ಯಧಿಕ್ಕಾರದ ನೇತಾರರ ವಿರುದ್ಧ ಸಮರ ಹೂಡಿರಿ. ಅವರ ಪ್ರತಿಜ್ಞೆಗಳಂತು ಖಂಡಿತ ನಂಬಲರ್ಹವಲ್ಲ. (ಯುದ್ಧಕ್ಕೆ ಅಂಜಿ) ಅವರು ದೂರ ಉಳಿಯಬಹುದು
Surah At-Taubah, Verse 10


فَإِن تَابُواْ وَأَقَامُواْ ٱلصَّلَوٰةَ وَءَاتَوُاْ ٱلزَّكَوٰةَ فَإِخۡوَٰنُكُمۡ فِي ٱلدِّينِۗ وَنُفَصِّلُ ٱلۡأٓيَٰتِ لِقَوۡمٖ يَعۡلَمُونَ

ನೀವೇನು, ತಮ್ಮ ಕರಾರನ್ನು ಮುರಿದ ಹಾಗೂ ದೇವದೂತರನ್ನು (ನಾಡಿನಿಂದ) ಹೊರ ಹಾಕಲು ನಿರ್ಧರಿಸಿದ ಹಾಗೂ ನಿಮಗಿಂತ ಮೊದಲು ತಾವೇ (ಆಕ್ರಮಣ) ಆರಂಭಿಸಿದ ಜನರ ವಿರುದ್ಧ ಯುದ್ಧ ಮಾಡುವುದಿಲ್ಲವೇ? ನೀವೇನು ಅವರಿಗೆ ಅಂಜುವಿರಾ? ನಿಜವಾಗಿ, ನೀವು ವಿಶ್ವಾಸಿಗಳಾಗಿದ್ದರೆ, ನಿಮ್ಮ ಅಂಜಿಕೆಗೆ ಅಲ್ಲಾಹನೇ ಹೆಚ್ಚು ಅರ್ಹನು
Surah At-Taubah, Verse 11


وَإِن نَّكَثُوٓاْ أَيۡمَٰنَهُم مِّنۢ بَعۡدِ عَهۡدِهِمۡ وَطَعَنُواْ فِي دِينِكُمۡ فَقَٰتِلُوٓاْ أَئِمَّةَ ٱلۡكُفۡرِ إِنَّهُمۡ لَآ أَيۡمَٰنَ لَهُمۡ لَعَلَّهُمۡ يَنتَهُونَ

ನೀವು ಅವರ (ಶತ್ರು ಪಡೆಗಳ) ವಿರುದ್ಧ ಹೋರಾಡಿರಿ. ಅಲ್ಲಾಹನು ನಿಮ್ಮ ಕೈಗಳಿಂದ ಅವರನ್ನು ಶಿಕ್ಷಿಸುವನು ಮತ್ತು ಅವರನ್ನು ಅಪಮಾನಿಸುವನು. ಹಾಗೆಯೇ ಅವನು ಅವರ ವಿರುದ್ಧ ನಿಮಗೆ ನೆರವಾಗುವನು ಮತ್ತು ವಿಶ್ವಾಸಿಗಳ ಮನಸ್ಸುಗಳನ್ನು ತಣಿಸಿಬಿಡುವನು
Surah At-Taubah, Verse 12


أَلَا تُقَٰتِلُونَ قَوۡمٗا نَّكَثُوٓاْ أَيۡمَٰنَهُمۡ وَهَمُّواْ بِإِخۡرَاجِ ٱلرَّسُولِ وَهُم بَدَءُوكُمۡ أَوَّلَ مَرَّةٍۚ أَتَخۡشَوۡنَهُمۡۚ فَٱللَّهُ أَحَقُّ أَن تَخۡشَوۡهُ إِن كُنتُم مُّؤۡمِنِينَ

ಅವನು ಅವರ ಮನಸ್ಸುಗಳಲ್ಲಿರುವ ಕ್ರೋಧವನ್ನು ನಿವಾರಿಸುವನು. ಇನ್ನು, ಅಲ್ಲಾಹನು ತಾನಿಚ್ಛಿಸುವವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಅರಿವುಳ್ಳವನೂ ಯುಕ್ತಿವಂತನೂ ಆಗಿರುತ್ತಾನೆ
Surah At-Taubah, Verse 13


قَٰتِلُوهُمۡ يُعَذِّبۡهُمُ ٱللَّهُ بِأَيۡدِيكُمۡ وَيُخۡزِهِمۡ وَيَنصُرۡكُمۡ عَلَيۡهِمۡ وَيَشۡفِ صُدُورَ قَوۡمٖ مُّؤۡمِنِينَ

ಅಲ್ಲಾಹನು, ನಿಮ್ಮ ಪೈಕಿ ಹೋರಾಡುವವರು ಯಾರು ಮತ್ತು ಅಲ್ಲಾಹ್, ಅವನ ದೂತ ಹಾಗೂ ವಿಶ್ವಾಸಿಗಳ ಹೊರತು ಯಾರನ್ನೂ ತಮ್ಮ ಪೋಷಕರಾಗಿಸಿಕೊಳ್ಳದವರು ಯಾರು, ಎಂಬುದನ್ನು ಅರಿಯದೆಯೇ ನಿಮ್ಮನ್ನು ಬಿಟ್ಟು ಬಿಡಲಾಗುವುದೆಂದು ನೀವು ನಂಬಿರುವಿರಾ? ನೀವು ಮಾಡುತ್ತಿರುವ ಎಲ್ಲವನ್ನೂ ಅಲ್ಲಾಹನು ಚೆನ್ನಾಗಿ ಬಲ್ಲನು
Surah At-Taubah, Verse 14


وَيُذۡهِبۡ غَيۡظَ قُلُوبِهِمۡۗ وَيَتُوبُ ٱللَّهُ عَلَىٰ مَن يَشَآءُۗ وَٱللَّهُ عَلِيمٌ حَكِيمٌ

ಬಹುದೇವಾರಾಧಕರು, ತಾವು ದೇವ ಧಿಕ್ಕಾರಿಗಳೆಂಬುದಕ್ಕೆ ತಾವೇ ಸಾಕ್ಷಿಗಳಾಗಿರುವಾಗ, ಅಲ್ಲಾಹನ ಭವನಗಳ (ಮಸೀದಿಗಳ) ಅಧಿಕಾರಿಗಳಾಗಲು ಅವರು ಅರ್ಹರಲ್ಲ. ಅವರ ಕರ್ಮಗಳೆಲ್ಲಾ ವ್ಯರ್ಥವಾದವು. ಅವರು ನರಕಾಗ್ನಿಯಲ್ಲಿ ಸದಾಕಾಲ ಇರುವರು
Surah At-Taubah, Verse 15


أَمۡ حَسِبۡتُمۡ أَن تُتۡرَكُواْ وَلَمَّا يَعۡلَمِ ٱللَّهُ ٱلَّذِينَ جَٰهَدُواْ مِنكُمۡ وَلَمۡ يَتَّخِذُواْ مِن دُونِ ٱللَّهِ وَلَا رَسُولِهِۦ وَلَا ٱلۡمُؤۡمِنِينَ وَلِيجَةٗۚ وَٱللَّهُ خَبِيرُۢ بِمَا تَعۡمَلُونَ

ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ನಂಬಿಕೆ ಉಳ್ಳವರು, ನಮಾಝ್‌ಅನ್ನು ಪಾಲಿಸುವವರು, ಝಕಾತ್‌ಅನ್ನು ಪಾವತಿಸುವವರು ಮತ್ತು ಅಲ್ಲಾಹನ ಹೊರತು ಇನ್ನಾರನ್ನೂ ಅಂಜದವರು ಮಾತ್ರ ಅಲ್ಲಾಹನ ಭವನಗಳ ಅಧಿಕಾರಿಗಳಾಗಬಲ್ಲರು. ಅಂಥವರು ಸರಿದಾರಿಯಲ್ಲಿರುವರೆಂದು ನಿರೀಕ್ಷಿಸಬಹುದು
Surah At-Taubah, Verse 16


مَا كَانَ لِلۡمُشۡرِكِينَ أَن يَعۡمُرُواْ مَسَٰجِدَ ٱللَّهِ شَٰهِدِينَ عَلَىٰٓ أَنفُسِهِم بِٱلۡكُفۡرِۚ أُوْلَـٰٓئِكَ حَبِطَتۡ أَعۡمَٰلُهُمۡ وَفِي ٱلنَّارِ هُمۡ خَٰلِدُونَ

ನೀವೇನು, ಹಜ್ಜ್ ಯಾತ್ರಿಕರಿಗೆ ನೀರು ಕುಡಿಸುವುದು ಮತ್ತು ‘ಮಸ್ಜಿದುಲ್ ಹರಾಮ್’ನ ಅಧಿಕಾರಿಗಳಾಗಿರುವುದು (ಇಷ್ಟನ್ನು ಮಾಡಿದವನು)- ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ವಿಶ್ವಾಸ ವಿಟ್ಟಾತನಿಗೆ ಹಾಗೂ ಅಲ್ಲಾಹನ ಮಾರ್ಗದಲ್ಲಿ ಹೋರಾಡಿದಾತನಿಗೆ ಸಮಾನನೆಂದು ನಂಬಿರುವಿರಾ? ಅಲ್ಲಾಹನ ದೃಷ್ಟಿಯಲ್ಲಿ ಅವು ಸಮಾನವಾಗಲಾರವು. ಅಲ್ಲಾಹನಂತು, ಅಕ್ರಮಿಗಳಿಗೆ ಮಾರ್ಗದರ್ಶನ ನೀಡುವುದಿಲ್ಲ
Surah At-Taubah, Verse 17


إِنَّمَا يَعۡمُرُ مَسَٰجِدَ ٱللَّهِ مَنۡ ءَامَنَ بِٱللَّهِ وَٱلۡيَوۡمِ ٱلۡأٓخِرِ وَأَقَامَ ٱلصَّلَوٰةَ وَءَاتَى ٱلزَّكَوٰةَ وَلَمۡ يَخۡشَ إِلَّا ٱللَّهَۖ فَعَسَىٰٓ أُوْلَـٰٓئِكَ أَن يَكُونُواْ مِنَ ٱلۡمُهۡتَدِينَ

ವಿಶ್ವಾಸವಿಟ್ಟವರು, ವಲಸೆ ಹೋದವರು ಮತ್ತು ತಮ್ಮ ಸಂಪತ್ತು ಹಾಗೂ ಜೀವಗಳೊಂದಿಗೆ ಅಲ್ಲಾಹನ ಮಾರ್ಗದಲ್ಲಿ ಹೋರಾಡಿದವರು – ಅವರಿಗೆ ಅಲ್ಲಾಹನ ಬಳಿ ಉನ್ನತ ಸ್ಥಾನವಿದೆ. ಅವರೇ ನಿಜವಾಗಿ ವಿಜಯಿಗಳು
Surah At-Taubah, Verse 18


۞أَجَعَلۡتُمۡ سِقَايَةَ ٱلۡحَآجِّ وَعِمَارَةَ ٱلۡمَسۡجِدِ ٱلۡحَرَامِ كَمَنۡ ءَامَنَ بِٱللَّهِ وَٱلۡيَوۡمِ ٱلۡأٓخِرِ وَجَٰهَدَ فِي سَبِيلِ ٱللَّهِۚ لَا يَسۡتَوُۥنَ عِندَ ٱللَّهِۗ وَٱللَّهُ لَا يَهۡدِي ٱلۡقَوۡمَ ٱلظَّـٰلِمِينَ

ಅವರ ಒಡೆಯನು ಅವರಿಗೆ ತನ್ನ ವತಿಯಿಂದ ಅನುಗ್ರಹದ, ಮೆಚ್ಚುಗೆಯ ಹಾಗೂ ಸ್ವರ್ಗೋದ್ಯಾನಗಳ ಶುಭವಾರ್ತೆ ನೀಡುತ್ತಾನೆ. ಅಲ್ಲಿ ಅವರಿಗೆ ಶಾಶ್ವತ ಕೊಡುಗೆಗಳಿವೆ
Surah At-Taubah, Verse 19


ٱلَّذِينَ ءَامَنُواْ وَهَاجَرُواْ وَجَٰهَدُواْ فِي سَبِيلِ ٱللَّهِ بِأَمۡوَٰلِهِمۡ وَأَنفُسِهِمۡ أَعۡظَمُ دَرَجَةً عِندَ ٱللَّهِۚ وَأُوْلَـٰٓئِكَ هُمُ ٱلۡفَآئِزُونَ

ಅವರು ಸದಾಕಾಲ ಅದರಲ್ಲಿರುವರು. ಖಂಡಿತವಾಗಿಯೂ ಅಲ್ಲಾಹನ ಬಳಿ ಮಹಾನ್ ಪ್ರತಿಫಲವಿದೆ
Surah At-Taubah, Verse 20


يُبَشِّرُهُمۡ رَبُّهُم بِرَحۡمَةٖ مِّنۡهُ وَرِضۡوَٰنٖ وَجَنَّـٰتٖ لَّهُمۡ فِيهَا نَعِيمٞ مُّقِيمٌ

ವಿಶ್ವಾಸಿಗಳೇ, ನಿಮ್ಮ ತಂದೆ – ತಾತಂದಿರು ಮತ್ತು ನಿಮ್ಮ ಸಹೋದರರು, ವಿಶ್ವಾಸಕ್ಕೆದುರಾಗಿ ಧಿಕ್ಕಾರವನ್ನೇ ಪ್ರೀತಿಸುವವರಾಗಿದ್ದರೆ, ಅವರನ್ನು ನೀವು ನಿಮ್ಮ ಪೋಷಕರಾಗಿ ಪರಿಗಣಿಸಬೇಡಿ. ನಿಮ್ಮ ಪೈಕಿ, ಅವರನ್ನು ಪರಮ ಆಪ್ತರಾಗಿಸಿಕೊಂಡವರೇ ಅಕ್ರಮಿಗಳು
Surah At-Taubah, Verse 21


خَٰلِدِينَ فِيهَآ أَبَدًاۚ إِنَّ ٱللَّهَ عِندَهُۥٓ أَجۡرٌ عَظِيمٞ

ಒಂದು ವೇಳೆ ನಿಮ್ಮ ತಂದೆ – ತಾತಂದಿರು, ನಿಮ್ಮ ಪುತ್ರರು, ನಿಮ್ಮ ಸಹೋದರರು, ನಿಮ್ಮ ಪತ್ನಿಯರು, ನಿಮ್ಮ ಬಂಧುಗಳು, ನೀವು ಸಂಪಾದಿಸಿರುವ ಸಂಪತ್ತು, ನಷ್ಟವಾದೀತೆಂದು ನೀವು ಅಂಜುವ ವ್ಯಾಪಾರ ಮತ್ತು ನೀವು ಪ್ರೀತಿಸುವ ನಿವಾಸಗಳು – ನಿಮಗೆ ಅಲ್ಲಾಹನಿಗಿಂತ, ಅವನ ದೂತರಿಗಿಂತ ಮತ್ತು ಅವನ ಮಾರ್ಗದಲ್ಲಿನ ಹೋರಾಟಕ್ಕಿಂತ ಪ್ರಿಯವಾಗಿದ್ದರೆ – ಅಲ್ಲಾಹನು ತನ್ನ ಆದೇಶವನ್ನು ಪ್ರಕಟಿಸುವ ತನಕ ಕಾಯಿರಿ. ಅಲ್ಲಾಹನು ಭ್ರಷ್ಟ ಜನರಿಗೆ ಸರಿದಾರಿ ತೋರುವುದಿಲ್ಲ
Surah At-Taubah, Verse 22


يَـٰٓأَيُّهَا ٱلَّذِينَ ءَامَنُواْ لَا تَتَّخِذُوٓاْ ءَابَآءَكُمۡ وَإِخۡوَٰنَكُمۡ أَوۡلِيَآءَ إِنِ ٱسۡتَحَبُّواْ ٱلۡكُفۡرَ عَلَى ٱلۡإِيمَٰنِۚ وَمَن يَتَوَلَّهُم مِّنكُمۡ فَأُوْلَـٰٓئِكَ هُمُ ٱلظَّـٰلِمُونَ

ಈ ಹಿಂದೆ ಹಲವು ರಣರಂಗಗಳಲ್ಲಿ ಅಲ್ಲಾಹನು ನಿಮಗೆ ನೆರವಾಗಿರುವನು. ‘ಹುನೈನ್’ನ ದಿನ-ನೀವು ನಿಮ್ಮ ಸಂಖ್ಯಾಬಲದ ಕುರಿತು ಸಂತುಷ್ಟರಾಗಿದ್ದಿರಿ. ಆದರೆ ಅದು (ಸಂಖ್ಯಾಬಲ) ನಿಮಗೆ ಯಾವ ಹಿತವನ್ನೂ ಮಾಡಲಿಲ್ಲ ಮತ್ತು ಭೂಮಿಯು ತನ್ನೆಲ್ಲಾ ವೈಶಾಲ್ಯದ ಹೊರತಾಗಿಯೂ ನಿಮ್ಮ ಪಾಲಿಗೆ ತೀರಾ ಸೀಮಿತವಾಗಿ ಬಿಟ್ಟಿತು. ಕೊನೆಗೆ ನೀವು ಬೆನ್ನು ತೋರಿಸಿ ಪಲಾಯನ ಮಾಡಿದಿರಿ
Surah At-Taubah, Verse 23


قُلۡ إِن كَانَ ءَابَآؤُكُمۡ وَأَبۡنَآؤُكُمۡ وَإِخۡوَٰنُكُمۡ وَأَزۡوَٰجُكُمۡ وَعَشِيرَتُكُمۡ وَأَمۡوَٰلٌ ٱقۡتَرَفۡتُمُوهَا وَتِجَٰرَةٞ تَخۡشَوۡنَ كَسَادَهَا وَمَسَٰكِنُ تَرۡضَوۡنَهَآ أَحَبَّ إِلَيۡكُم مِّنَ ٱللَّهِ وَرَسُولِهِۦ وَجِهَادٖ فِي سَبِيلِهِۦ فَتَرَبَّصُواْ حَتَّىٰ يَأۡتِيَ ٱللَّهُ بِأَمۡرِهِۦۗ وَٱللَّهُ لَا يَهۡدِي ٱلۡقَوۡمَ ٱلۡفَٰسِقِينَ

ಕೊನೆಗೆ ಅಲ್ಲಾಹನು ತನ್ನ ದೂತರಿಗೆ ಹಾಗೂ ವಿಶ್ವಾಸಿಗಳಿಗೆ ತನ್ನ ಕಡೆಯಿಂದ ಸಾಂತ್ವನವನ್ನು ಇಳಿಸಿಕೊಟ್ಟನು ಮತ್ತು ನೀವು ಕಾಣದ ಪಡೆಗಳನ್ನು ಇಳಿಸಿ ಧಿಕ್ಕಾರಿಗಳನ್ನು ಶಿಕ್ಷಿಸಿದನು. ಇದುವೇ ಧಿಕ್ಕಾರಿಗಳಿಗಿರುವ ಪ್ರತಿಫಲ
Surah At-Taubah, Verse 24


لَقَدۡ نَصَرَكُمُ ٱللَّهُ فِي مَوَاطِنَ كَثِيرَةٖ وَيَوۡمَ حُنَيۡنٍ إِذۡ أَعۡجَبَتۡكُمۡ كَثۡرَتُكُمۡ فَلَمۡ تُغۡنِ عَنكُمۡ شَيۡـٔٗا وَضَاقَتۡ عَلَيۡكُمُ ٱلۡأَرۡضُ بِمَا رَحُبَتۡ ثُمَّ وَلَّيۡتُم مُّدۡبِرِينَ

ತರುವಾಯ ಅಲ್ಲಾಹನು ತಾನಿಚ್ಛಿಸಿದವರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ
Surah At-Taubah, Verse 25


ثُمَّ أَنزَلَ ٱللَّهُ سَكِينَتَهُۥ عَلَىٰ رَسُولِهِۦ وَعَلَى ٱلۡمُؤۡمِنِينَ وَأَنزَلَ جُنُودٗا لَّمۡ تَرَوۡهَا وَعَذَّبَ ٱلَّذِينَ كَفَرُواْۚ وَذَٰلِكَ جَزَآءُ ٱلۡكَٰفِرِينَ

ವಿಶ್ವಾಸಿಗಳೇ, ಬಹುದೇವಾರಾಧಕರು ಮಲಿನರು. ಈ ವರ್ಷದ ಬಳಿಕ ಅವರು ‘ಮಸ್ಜಿದುಲ್ ಹರಾಮ್’ನ ಹತ್ತಿರ ಬರಬಾರದು. ನಿಮಗೆ ದಾರಿದ್ರದ ಭಯವಿದ್ದರೆ, ಅಲ್ಲಾಹನಿಚ್ಛಿಸಿದರೆ, ಅವನು ತನ್ನ ಅನುಗ್ರಹದಿಂದ ನಿಮ್ಮನ್ನು ಸಂಪನ್ನರಾಗಿಸುವನು. ಖಂಡಿತವಾಗಿಯೂ ಅವನು ಎಲ್ಲವನ್ನೂ ಅರಿತಿರುವವನೂ ಯುಕ್ತಿವಂತನೂ ಆಗಿರುವನು
Surah At-Taubah, Verse 26


ثُمَّ يَتُوبُ ٱللَّهُ مِنۢ بَعۡدِ ذَٰلِكَ عَلَىٰ مَن يَشَآءُۗ وَٱللَّهُ غَفُورٞ رَّحِيمٞ

ಅಲ್ಲಾಹನಲ್ಲಿ ಹಾಗೂ ಅಂತಿಮ ದಿನದಲ್ಲಿ ವಿಶ್ವಾಸವಿಡದ ಮತ್ತು ಅಲ್ಲಾಹ್ ಮತ್ತವನ ದೂತರು ನಿಷೇಧಿಸಿರುವುದನ್ನು ನಿಷಿದ್ಧವೆಂದು ಪರಿಗಣಿಸದವರ ವಿರುದ್ಧ ಹಾಗೂ ಗ್ರಂಥನೀಡಲ್ಪಟ್ಟವರ ಪೈಕಿ, ಸತ್ಯ ಧರ್ಮವನ್ನು ಸ್ವೀಕರಿಸದವರ ವಿರುದ್ಧ ಯುದ್ಧ ಸಾರಿರಿ – ಅವರು ತಮ್ಮ ಕೈಯಿಂದ ‘ಜಿಝಿಯಾ’ (ದಂಡ) ಪಾವತಿಸಿ, ಅಧೀನರಾಗಿ ಬಿಡುವ ತನಕ
Surah At-Taubah, Verse 27


يَـٰٓأَيُّهَا ٱلَّذِينَ ءَامَنُوٓاْ إِنَّمَا ٱلۡمُشۡرِكُونَ نَجَسٞ فَلَا يَقۡرَبُواْ ٱلۡمَسۡجِدَ ٱلۡحَرَامَ بَعۡدَ عَامِهِمۡ هَٰذَاۚ وَإِنۡ خِفۡتُمۡ عَيۡلَةٗ فَسَوۡفَ يُغۡنِيكُمُ ٱللَّهُ مِن فَضۡلِهِۦٓ إِن شَآءَۚ إِنَّ ٱللَّهَ عَلِيمٌ حَكِيمٞ

ಯಹೂದಿಗಳು, ಉಝೈರ್ ಅಲ್ಲಾಹನ ಪುತ್ರರೆಂದು ಹೇಳುತ್ತಾರೆ ಮತ್ತು ಕ್ರೈಸ್ತರು ಮಸೀಹರು ಅಲ್ಲಾಹನ ಪುತ್ರರೆಂದು ಹೇಳುತ್ತಾರೆ. ಇದು ಕೇವಲ ಅವರ ಬಾಯಿ ಮಾತು. ಅವರು ಗತಕಾಲದ ಧಿಕ್ಕಾರಿಗಳ ಮಾತನ್ನೇ ಅನುಕರಿಸುತ್ತಿದ್ದಾರೆ. ಅವರ ಮೇಲೆ ಅಲ್ಲಾಹನ ಪ್ರಹಾರವಿದೆ. ಅವರು ದಾರಿಗೆಟ್ಟು ಅದೆಲ್ಲಿ ಅಲೆಯುತ್ತಿದ್ದಾರೆ
Surah At-Taubah, Verse 28


قَٰتِلُواْ ٱلَّذِينَ لَا يُؤۡمِنُونَ بِٱللَّهِ وَلَا بِٱلۡيَوۡمِ ٱلۡأٓخِرِ وَلَا يُحَرِّمُونَ مَا حَرَّمَ ٱللَّهُ وَرَسُولُهُۥ وَلَا يَدِينُونَ دِينَ ٱلۡحَقِّ مِنَ ٱلَّذِينَ أُوتُواْ ٱلۡكِتَٰبَ حَتَّىٰ يُعۡطُواْ ٱلۡجِزۡيَةَ عَن يَدٖ وَهُمۡ صَٰغِرُونَ

ಅವರು ಅಲ್ಲಾಹನ ಹೊರತಾಗಿ, ತಮ್ಮ ವಿದ್ವಾಂಸರನ್ನು, ಸನ್ಯಾಸಿಗಳನ್ನು ಮತ್ತು ಮರ್ಯಮರ ಪುತ್ರ ಮಸೀಹರನ್ನು ದೇವರಾಗಿಸಿಕೊಂಡಿದ್ದಾರೆ. ನಿಜವಾಗಿ ಅವರಿಗೆ, ಒಬ್ಬ ದೇವರ ಹೊರತು ಬೇರೆ ಯಾರನ್ನೂ ಪೂಜಿಸಬಾರದೆಂದು ಆದೇಶಿಸಲಾಗಿದೆ. ಅವನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ. ಅವರು ಪಾಲುಗೊಳಿಸುವ ಎಲ್ಲದರಿಂದ ಅವನು ಸಂಪೂರ್ಣ ಮುಕ್ತನು
Surah At-Taubah, Verse 29


وَقَالَتِ ٱلۡيَهُودُ عُزَيۡرٌ ٱبۡنُ ٱللَّهِ وَقَالَتِ ٱلنَّصَٰرَى ٱلۡمَسِيحُ ٱبۡنُ ٱللَّهِۖ ذَٰلِكَ قَوۡلُهُم بِأَفۡوَٰهِهِمۡۖ يُضَٰهِـُٔونَ قَوۡلَ ٱلَّذِينَ كَفَرُواْ مِن قَبۡلُۚ قَٰتَلَهُمُ ٱللَّهُۖ أَنَّىٰ يُؤۡفَكُونَ

ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿಯಿಂದ ಊದಿ ನಂದಿಸ ಬಯಸುತ್ತಾರೆ. ಅಲ್ಲಾಹನು ಮಾತ್ರ ತನ್ನ ಪ್ರಕಾಶವನ್ನು ಪರಿಪೂರ್ಣವಾಗಿ ವ್ಯಾಪಿಸದೆ ಬಿಡಲಾರನು – ಧಿಕ್ಕಾರಿಗಳಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ
Surah At-Taubah, Verse 30


ٱتَّخَذُوٓاْ أَحۡبَارَهُمۡ وَرُهۡبَٰنَهُمۡ أَرۡبَابٗا مِّن دُونِ ٱللَّهِ وَٱلۡمَسِيحَ ٱبۡنَ مَرۡيَمَ وَمَآ أُمِرُوٓاْ إِلَّا لِيَعۡبُدُوٓاْ إِلَٰهٗا وَٰحِدٗاۖ لَّآ إِلَٰهَ إِلَّا هُوَۚ سُبۡحَٰنَهُۥ عَمَّا يُشۡرِكُونَ

ಅವನೇ, ತನ್ನ ದೂತನನ್ನು ಮಾರ್ಗದರ್ಶನದೊಂದಿಗೆ ಹಾಗೂ ಎಲ್ಲ ಧರ್ಮಗಳಿಗೆದುರಾಗಿ ಬೆಳಗಲು ಸತ್ಯ ಧರ್ಮದೊಂದಿಗೆ ಕಳುಹಿಸಿದವನು. ಬಹುದೇವಾರಾಧಕರಿಗೆ ಅದು ಎಷ್ಟೇ ಅಪ್ರಿಯವಾಗಿದ್ದರೂ ಸರಿಯೇ
Surah At-Taubah, Verse 31


يُرِيدُونَ أَن يُطۡفِـُٔواْ نُورَ ٱللَّهِ بِأَفۡوَٰهِهِمۡ وَيَأۡبَى ٱللَّهُ إِلَّآ أَن يُتِمَّ نُورَهُۥ وَلَوۡ كَرِهَ ٱلۡكَٰفِرُونَ

ವಿಶ್ವಾಸಿಗಳೇ, ಖಂಡಿತವಾಗಿಯೂ ಧರ್ಮಗುರುಗಳು ಮತ್ತು ಸನ್ಯಾಸಿಗಳಲ್ಲಿ ಹೆಚ್ಚಿನವರು ಜನರ ಸಂಪತ್ತನ್ನು ಅಕ್ರಮ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. (ಅವರಿಗೂ) ಚಿನ್ನ ಹಾಗೂ ಬೆಳ್ಳಿಯನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚುಮಾಡದೆ ಅವುಗಳನ್ನು ಸಂಗ್ರಹಿಸಿಟ್ಟುಕೊಳ್ಳುವವರಿಗೂ ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ
Surah At-Taubah, Verse 32


هُوَ ٱلَّذِيٓ أَرۡسَلَ رَسُولَهُۥ بِٱلۡهُدَىٰ وَدِينِ ٱلۡحَقِّ لِيُظۡهِرَهُۥ عَلَى ٱلدِّينِ كُلِّهِۦ وَلَوۡ كَرِهَ ٱلۡمُشۡرِكُونَ

ಅವುಗಳನ್ನು (ಆ ಚಿನ್ನ, ಬೆಳ್ಳಿಗಳನ್ನು) ನರಕಾಗ್ನಿಯಲ್ಲಿ ಉರಿಸಲಾಗುವ ದಿನ, ಅದರಿಂದ ಅವರ ಹಣೆಗಳಿಗೆ, ಮಗ್ಗುಲುಗಳಿಗೆ ಮತ್ತು ಬೆನ್ನುಗಳಿಗೆ ಬರೆ ಎಳೆಯಲಾಗುವುದು – ಇದುವೇ ನೀವು ನಿಮಗಾಗಿ ಸಂಗ್ರಹಿಸಿಟ್ಟ ಸಂಪತ್ತು . ಇದೀಗ ಸವಿಯಿರಿ ನೀವು ಸಂಗ್ರಹಿಸಿದ್ದನ್ನು
Surah At-Taubah, Verse 33


۞يَـٰٓأَيُّهَا ٱلَّذِينَ ءَامَنُوٓاْ إِنَّ كَثِيرٗا مِّنَ ٱلۡأَحۡبَارِ وَٱلرُّهۡبَانِ لَيَأۡكُلُونَ أَمۡوَٰلَ ٱلنَّاسِ بِٱلۡبَٰطِلِ وَيَصُدُّونَ عَن سَبِيلِ ٱللَّهِۗ وَٱلَّذِينَ يَكۡنِزُونَ ٱلذَّهَبَ وَٱلۡفِضَّةَ وَلَا يُنفِقُونَهَا فِي سَبِيلِ ٱللَّهِ فَبَشِّرۡهُم بِعَذَابٍ أَلِيمٖ

ಖಂಡಿತವಾಗಿಯೂ ಅಲ್ಲಾಹನ ಬಳಿ, (ವರ್ಷದಲ್ಲಿ) ತಿಂಗಳುಗಳ ಸಂಖ್ಯೆ ಹನ್ನೆರಡು. ಅವನು, ಆಕಾಶಗಳನ್ನು ಹಾಗೂ ಭೂಮಿಯನ್ನು ಸೃಷ್ಟಿಸಿದ ದಿನವೇ ಹಾಗೆಂದು ವಿಧಿಸಿರುವನು. ಅವುಗಳಲ್ಲಿ ನಾಲ್ಕು, ಪಾವನ ತಿಂಗಳುಗಳು. ಇದುವೇ ಸರಿಯಾದ ಧರ್ಮ. ಆ ತಿಂಗಳುಗಳಲ್ಲಿ ನೀವು ಸ್ವತಃ ನಿಮ್ಮ ಮೇಲೆ ಅಕ್ರಮವೆಸಗಬೇಡಿ. ಮತ್ತು ಬಹುದೇವಾರಾಧಕರೆಲ್ಲ ಒಂದಾಗಿ ನಿಮ್ಮ ವಿರುದ್ಧ ಹೋರಾಡುವಂತೆ, ನೀವೆಲ್ಲ ಒಂದಾಗಿ ಅವರ ವಿರುದ್ಧ ಹೋರಾಡಿರಿ. ನಿಮಗೆ ತಿಳಿದಿರಲಿ, ಅಲ್ಲಾಹನು ಧರ್ಮನಿಷ್ಠರ ಜೊತೆಗಿದ್ದಾನೆ
Surah At-Taubah, Verse 34


يَوۡمَ يُحۡمَىٰ عَلَيۡهَا فِي نَارِ جَهَنَّمَ فَتُكۡوَىٰ بِهَا جِبَاهُهُمۡ وَجُنُوبُهُمۡ وَظُهُورُهُمۡۖ هَٰذَا مَا كَنَزۡتُمۡ لِأَنفُسِكُمۡ فَذُوقُواْ مَا كُنتُمۡ تَكۡنِزُونَ

ಪವಿತ್ರ ತಿಂಗಳ ಮುಂದೂಡಿಕೆಯು, ಧಿಕ್ಕಾರದ (ಧೋರಣೆಯ) ಮೇಲಿನ ಇನ್ನೊಂದು ಹೆಚ್ಚಳವಾಗಿದೆ. ಅಲ್ಲಾಹನು ನಿಷಿದ್ಧ ಗೊಳಿಸಿರುವ ತಿಂಗಳುಗಳ ಎಣಿಕೆ ಪೂರ್ತಿಗೊಳಿಸಲಿಕ್ಕಾಗಿ, ಅವರು ಆ ತಿಂಗಳನ್ನು ಒಂದು ವರ್ಷ ಸಮ್ಮತವಾಗಿಸುತ್ತಾರೆ ಮತ್ತು ಇನ್ನೊಂದು ವರ್ಷ ಅದನ್ನು ನಿಷಿದ್ಧವಾಗಿಸುತ್ತಾರೆ – ಈ ರೀತಿ ಅವರು ಅಲ್ಲಾಹನು ನಿಷೇಧಿಸಿರುವುದನ್ನು ಸಮ್ಮತವಾಗಿಸುತ್ತಾರೆ. ಅವರ ಪಾಲಿಗೆ ಅವರ ಕೆಟ್ಟ ಕರ್ಮಗಳನ್ನು ಚಂದಗಾಣಿಸಲಾಗಿದೆ. ಅಲ್ಲಾಹನು ಧಿಕ್ಕಾರಿಗಳಿಗೆ ಸರಿ ದಾರಿಯನ್ನು ತೋರಿಸುವುದಿಲ್ಲ
Surah At-Taubah, Verse 35


إِنَّ عِدَّةَ ٱلشُّهُورِ عِندَ ٱللَّهِ ٱثۡنَا عَشَرَ شَهۡرٗا فِي كِتَٰبِ ٱللَّهِ يَوۡمَ خَلَقَ ٱلسَّمَٰوَٰتِ وَٱلۡأَرۡضَ مِنۡهَآ أَرۡبَعَةٌ حُرُمٞۚ ذَٰلِكَ ٱلدِّينُ ٱلۡقَيِّمُۚ فَلَا تَظۡلِمُواْ فِيهِنَّ أَنفُسَكُمۡۚ وَقَٰتِلُواْ ٱلۡمُشۡرِكِينَ كَآفَّةٗ كَمَا يُقَٰتِلُونَكُمۡ كَآفَّةٗۚ وَٱعۡلَمُوٓاْ أَنَّ ٱللَّهَ مَعَ ٱلۡمُتَّقِينَ

ವಿಶ್ವಾಸಿಗಳೇ, ನಿಮಗೇನಾಗಿದೆ? ಅಲ್ಲಾಹನ ಮಾರ್ಗದಲ್ಲಿ ಹೊರಡಿರಿ ಎಂದು ನಿಮ್ಮೊಡನೆ ಹೇಳಲಾದಾಗ ನೀವು ನೆಲಕ್ಕೆ ಅಂಟಿರುತ್ತೀರಿ. ನೀವೇನು ಪರಲೋಕದೆದುರು, ಇಹಲೋಕದ ಜೀವನವನ್ನೇ ಮೆಚ್ಚಿಕೊಂಡಿರುವಿರಾ? ನಿಜವಾಗಿ ಪರಲೋಕಕ್ಕೆ ಹೋಲಿಸಿದರೆ ಇಹಲೋಕದ ಬದುಕು ತೀರಾ ಕ್ಷುಲ್ಲಕ
Surah At-Taubah, Verse 36


إِنَّمَا ٱلنَّسِيٓءُ زِيَادَةٞ فِي ٱلۡكُفۡرِۖ يُضَلُّ بِهِ ٱلَّذِينَ كَفَرُواْ يُحِلُّونَهُۥ عَامٗا وَيُحَرِّمُونَهُۥ عَامٗا لِّيُوَاطِـُٔواْ عِدَّةَ مَا حَرَّمَ ٱللَّهُ فَيُحِلُّواْ مَا حَرَّمَ ٱللَّهُۚ زُيِّنَ لَهُمۡ سُوٓءُ أَعۡمَٰلِهِمۡۗ وَٱللَّهُ لَا يَهۡدِي ٱلۡقَوۡمَ ٱلۡكَٰفِرِينَ

ನೀವು (ಅಲ್ಲಾಹನ ಮಾರ್ಗದಲ್ಲಿ) ಹೊರಡದಿದ್ದರೆ, ಅವನು ನಿಮಗೆ ಯಾತನಾಮಯ ಶಿಕ್ಷೆಯನ್ನು ನೀಡುವನು ಮತ್ತು ನಿಮ್ಮ ಬದಲಿಗೆ ಬೇರೊಂದು ಜನಾಂಗವನ್ನು ಮುಂದೆ ತರುವನು. ಅವನಿಗೆ ಯಾವ ನಷ್ಟವನ್ನುಂಟುಮಾಡಲಿಕ್ಕೂ ನಿಮ್ಮಿಂದಾಗದು. ಅಲ್ಲಾಹನಂತು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ
Surah At-Taubah, Verse 37


يَـٰٓأَيُّهَا ٱلَّذِينَ ءَامَنُواْ مَا لَكُمۡ إِذَا قِيلَ لَكُمُ ٱنفِرُواْ فِي سَبِيلِ ٱللَّهِ ٱثَّاقَلۡتُمۡ إِلَى ٱلۡأَرۡضِۚ أَرَضِيتُم بِٱلۡحَيَوٰةِ ٱلدُّنۡيَا مِنَ ٱلۡأٓخِرَةِۚ فَمَا مَتَٰعُ ٱلۡحَيَوٰةِ ٱلدُّنۡيَا فِي ٱلۡأٓخِرَةِ إِلَّا قَلِيلٌ

ನೀವು ಅವರಿಗೆ (ದೇವದೂತರಿಗೆ) ನೆರವಾಗದಿದ್ದರೆ, (ನಿಮಗೆ ತಿಳಿದಿರಲಿ,) ಧಿಕ್ಕಾರಿಗಳು ಅವರನ್ನು (ನಾಡಿನಿಂದ) ಹೊರಹಾಕಿದಾಗ ಅಲ್ಲಾಹನು ಅವರಿಗೆ ನೆರವಾಗಿರುವನು. (ಅಂದು) ಅವರು (ದೂತರು) ಇಬ್ಬರಲ್ಲಿ ಎರಡನೆಯವರಾಗಿದ್ದರು. ಅವರಿಬ್ಬರೂ ಗುಹೆಯಲ್ಲಿದ್ದಾಗ, ಅವರು (ದೂತರು) ತಮ್ಮ ಸಂಗಾತಿಯೊಡನೆ, ‘‘ಅಂಜಬೇಡ, ಖಂಡಿತವಾಗಿಯೂ ಅಲ್ಲಾಹನು ನಮ್ಮ ಜೊತೆಗಿದ್ದಾನೆ.’’ಎಂದಿದ್ದರು. ಕೊನೆಗೆ ಅಲ್ಲಾಹನು ಅವರಿಗೆ ಮನಃಶಾಂತಿಯನ್ನು ಇಳಿಸಿಕೊಟ್ಟನು ಮತ್ತು ನಿಮಗೆ ಕಾಣಿಸದ ಪಡೆಗಳ ಮೂಲಕ ಅವರಿಗೆ ಬಲ ಒದಗಿಸಿದನು. ಅಲ್ಲದೆ ಅವನು ಧಿಕ್ಕಾರಿಗಳ ಮಾತನ್ನು ಸೋಲಿಸಿದನು, ಅಲ್ಲಾಹನ ಮಾತೇ ಮೇಲಾಯಿತು. ಅಲ್ಲಾಹನು ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ
Surah At-Taubah, Verse 38


إِلَّا تَنفِرُواْ يُعَذِّبۡكُمۡ عَذَابًا أَلِيمٗا وَيَسۡتَبۡدِلۡ قَوۡمًا غَيۡرَكُمۡ وَلَا تَضُرُّوهُ شَيۡـٔٗاۗ وَٱللَّهُ عَلَىٰ كُلِّ شَيۡءٖ قَدِيرٌ

ಹಗುರವಾಗಿ ಅಥವಾ ಭಾರವಾಗಿ ನೀವು ಹೊರಡಿರಿ, ಮತ್ತು ನಿಮ್ಮ ಸಂಪತ್ತುಗಳನ್ನೂ ಜೀವಗಳನ್ನೂ ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ಅರಿಯುವವರಾಗಿದ್ದರೆ, ಇದುವೇ ನಿಮ್ಮ ಪಾಲಿಗೆ ಉತ್ತಮವಾಗಿದೆ
Surah At-Taubah, Verse 39


إِلَّا تَنصُرُوهُ فَقَدۡ نَصَرَهُ ٱللَّهُ إِذۡ أَخۡرَجَهُ ٱلَّذِينَ كَفَرُواْ ثَانِيَ ٱثۡنَيۡنِ إِذۡ هُمَا فِي ٱلۡغَارِ إِذۡ يَقُولُ لِصَٰحِبِهِۦ لَا تَحۡزَنۡ إِنَّ ٱللَّهَ مَعَنَاۖ فَأَنزَلَ ٱللَّهُ سَكِينَتَهُۥ عَلَيۡهِ وَأَيَّدَهُۥ بِجُنُودٖ لَّمۡ تَرَوۡهَا وَجَعَلَ كَلِمَةَ ٱلَّذِينَ كَفَرُواْ ٱلسُّفۡلَىٰۗ وَكَلِمَةُ ٱللَّهِ هِيَ ٱلۡعُلۡيَاۗ وَٱللَّهُ عَزِيزٌ حَكِيمٌ

ಲಾಭವು ತಕ್ಷಣದ್ದಾಗಿದ್ದರೆ ಮತ್ತು ಪ್ರಯಾಣವು ಸುಲಭದ್ದಾಗಿದ್ದರೆ ಅವರು ಖಂಡಿತ ನಿಮ್ಮ ಜೊತೆ ಬರುತ್ತಿದ್ದರು. ಆದರೆ ಅವರ ಪಾಲಿಗೆ ದಾರಿಯು ತುಂಬಾ ಉದ್ದವಾಯಿತು. ಇದೀಗ ಅವರು ಅಲ್ಲಾಹನ ಹೆಸರಲ್ಲಿ ಆಣೆ ಹಾಕಿ ‘‘ನಮಗೆ ಸಾಧ್ಯವಿದ್ದಿದ್ದರೆ ನಾವು ಖಂಡಿತ ನಿಮ್ಮ ಜೊತೆ ಬರುತ್ತಿದ್ದೆವು’’ ಎಂದು ಹೇಳುವರು, ನಿಜವಾಗಿ ಅವರು ತಮ್ಮನ್ನು ತಾವೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಅವರು ಸುಳ್ಳು ಹೇಳುವವರೆಂಬುದು ಅಲ್ಲಾಹನಿಗೆ ತಿಳಿದಿದೆ
Surah At-Taubah, Verse 40


ٱنفِرُواْ خِفَافٗا وَثِقَالٗا وَجَٰهِدُواْ بِأَمۡوَٰلِكُمۡ وَأَنفُسِكُمۡ فِي سَبِيلِ ٱللَّهِۚ ذَٰلِكُمۡ خَيۡرٞ لَّكُمۡ إِن كُنتُمۡ تَعۡلَمُونَ

(ದೂತರೇ,) ಅಲ್ಲಾಹನು ನಿಮ್ಮನ್ನು ಕ್ಷಮಿಸಲಿ. (ಅವರಲ್ಲಿ) ಸತ್ಯವಂತರು ಯಾರು ಎಂಬುದು ನಿಮಗೆ ಸ್ಪಷ್ಟವಾಗುವ ಮುನ್ನ ಹಾಗೂ ಸುಳ್ಳರನ್ನು ನೀವು ಅರಿಯುವ ಮುನ್ನ ನೀವು ಅವರಿಗೆ ಅನುಮತಿ ನೀಡಿದ್ದೇಕೆ
Surah At-Taubah, Verse 41


لَوۡ كَانَ عَرَضٗا قَرِيبٗا وَسَفَرٗا قَاصِدٗا لَّٱتَّبَعُوكَ وَلَٰكِنۢ بَعُدَتۡ عَلَيۡهِمُ ٱلشُّقَّةُۚ وَسَيَحۡلِفُونَ بِٱللَّهِ لَوِ ٱسۡتَطَعۡنَا لَخَرَجۡنَا مَعَكُمۡ يُهۡلِكُونَ أَنفُسَهُمۡ وَٱللَّهُ يَعۡلَمُ إِنَّهُمۡ لَكَٰذِبُونَ

ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ನಂಬಿಕೆ ಉಳ್ಳವರು ತಮ್ಮ ಸಂಪತ್ತುಗಳನ್ನೂ ಜೀವಗಳನ್ನೂ ತೊಡಗಿಸಿ ಹೋರಾಡುವ ವಿಷಯದಲ್ಲಿ ನಿಮ್ಮ ಬಳಿ ವಿನಾಯಿತಿ ಕೇಳುವುದಿಲ್ಲ. ಧರ್ಮನಿಷ್ಠರನ್ನು ಅಲ್ಲಾಹನು ಚೆನ್ನಾಗಿ ಬಲ್ಲನು
Surah At-Taubah, Verse 42


عَفَا ٱللَّهُ عَنكَ لِمَ أَذِنتَ لَهُمۡ حَتَّىٰ يَتَبَيَّنَ لَكَ ٱلَّذِينَ صَدَقُواْ وَتَعۡلَمَ ٱلۡكَٰذِبِينَ

ನಿಮ್ಮ ಬಳಿ ವಿನಾಯಿತಿಯನ್ನು ಅಪೇಕ್ಷಿಸುವವರು ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ನಂಬಿಕೆ ಇಲ್ಲದವರಾಗಿದ್ದಾರೆ. ಅವರ ಮನಸ್ಸುಗಳು ಸಂಶಯ ಪೀಡಿತವಾಗಿದೆ. ಅವರು ತಮ್ಮ ಸಂಶಯದಲ್ಲೇ ದಾರಿತಪ್ಪಿ ಅಲೆಯುತ್ತಿದ್ದಾರೆ
Surah At-Taubah, Verse 43


لَا يَسۡتَـٔۡذِنُكَ ٱلَّذِينَ يُؤۡمِنُونَ بِٱللَّهِ وَٱلۡيَوۡمِ ٱلۡأٓخِرِ أَن يُجَٰهِدُواْ بِأَمۡوَٰلِهِمۡ وَأَنفُسِهِمۡۗ وَٱللَّهُ عَلِيمُۢ بِٱلۡمُتَّقِينَ

ಅವರು ನಿಜಕ್ಕೂ ಹೊರಡ ಬಯಸಿದ್ದರೆ, ಅದಕ್ಕಾಗಿ ಏನಾದರೂ ಸಾಧನ ಸಿದ್ಧ ಪಡಿಸುತ್ತಿದ್ದರು. ಅವರು ಎದ್ದೇಳುವುದು ಅಲ್ಲಾಹನಿಗೆ ಅಪ್ರಿಯವಾಗಿತ್ತು. ಅವನು ಅವರನ್ನು ತಡೆದನು ಮತ್ತು ಕುಳಿತಿರುವವರ ಜೊತೆ ಕುಳಿತಿರಿ ಎಂದನು
Surah At-Taubah, Verse 44


إِنَّمَا يَسۡتَـٔۡذِنُكَ ٱلَّذِينَ لَا يُؤۡمِنُونَ بِٱللَّهِ وَٱلۡيَوۡمِ ٱلۡأٓخِرِ وَٱرۡتَابَتۡ قُلُوبُهُمۡ فَهُمۡ فِي رَيۡبِهِمۡ يَتَرَدَّدُونَ

ಒಂದು ವೇಳೆ ಅವರು ನಿಮ್ಮ ಜೊತೆಗೆ ಹೊರಟಿದ್ದರೂ, ಅವರು ನಿಮ್ಮ ಪಾಲಿಗೆ ಗೊಂದಲವನ್ನಷ್ಟೇ ಹೆಚ್ಚಿಸುತ್ತಿದ್ದರು ಮತ್ತು ನಿಮ್ಮ ನಡುವೆ ಹತಾಶೆಯನ್ನು ಬಿತ್ತಲಿಕ್ಕೆಂದೇ ಆಚೀಚೆ ಓಡಾಡುತ್ತಿದ್ದರು. ನಿಮ್ಮಲ್ಲಿ, ಅವರಿಗಾಗಿ ಕೇಳುವವರು (ಅವರ ಗೂಢಚರರು) ಇದ್ದಾರೆ. ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು
Surah At-Taubah, Verse 45


۞وَلَوۡ أَرَادُواْ ٱلۡخُرُوجَ لَأَعَدُّواْ لَهُۥ عُدَّةٗ وَلَٰكِن كَرِهَ ٱللَّهُ ٱنۢبِعَاثَهُمۡ فَثَبَّطَهُمۡ وَقِيلَ ٱقۡعُدُواْ مَعَ ٱلۡقَٰعِدِينَ

ಈ ಹಿಂದೆಯೂ ಅವರು ಗೊಂದಲ ಉಂಟುಮಾಡಲು ಮತ್ತು ನಿಮಗಾಗಿ ಬಿಕ್ಕಟ್ಟುಗಳನ್ನು ಸೃಷ್ಟಿಸಲು ಶ್ರಮಿಸಿದ್ದರು. ಕೊನೆಗೆ ಸತ್ಯವು ಬಂದು ಬಿಟ್ಟಿತು, ಅಲ್ಲಾಹನ ಆದೇಶವು ಸ್ಪಷ್ಟವಾಗಿ ಪ್ರಕಟವಾಯಿತು ಮತ್ತು ಅವರು ತೀರಾ ಅತೃಪ್ತರಾದರು
Surah At-Taubah, Verse 46


لَوۡ خَرَجُواْ فِيكُم مَّا زَادُوكُمۡ إِلَّا خَبَالٗا وَلَأَوۡضَعُواْ خِلَٰلَكُمۡ يَبۡغُونَكُمُ ٱلۡفِتۡنَةَ وَفِيكُمۡ سَمَّـٰعُونَ لَهُمۡۗ وَٱللَّهُ عَلِيمُۢ بِٱلظَّـٰلِمِينَ

ಅವರಲ್ಲಿ (ಒಬ್ಬನು), ನನಗೆ ಅನುಮತಿ ನೀಡಿರಿ ಮತ್ತು ನನ್ನನ್ನು ಪರೀಕ್ಷಿಸಬೇಡಿ ಎನ್ನುತ್ತಾನೆ. ಅವರೇನು ಈಗಾಗಲೇ ಪರೀಕ್ಷೆಗೆ ಗುರಿಯಾಗಿಲ್ಲವೇ? ಖಂಡಿತವಾಗಿಯೂ ನರಕವು ಧಿಕ್ಕಾರಿಗಳನ್ನು ಸುತ್ತು ವರಿದಿದೆ
Surah At-Taubah, Verse 47


لَقَدِ ٱبۡتَغَوُاْ ٱلۡفِتۡنَةَ مِن قَبۡلُ وَقَلَّبُواْ لَكَ ٱلۡأُمُورَ حَتَّىٰ جَآءَ ٱلۡحَقُّ وَظَهَرَ أَمۡرُ ٱللَّهِ وَهُمۡ كَٰرِهُونَ

ನಿಮಗೇನಾದರೂ ಹಿತವಾದರೆ ಅವರಿಗೆ ಅದು ಅಪ್ರಿಯವೆನಿಸುತ್ತದೆ. ಇನ್ನು ನಿಮಗೇನಾದರೂ ಸಂಕಟ ಉಂಟಾದರೆ ಅವರು, ‘ನಾವು ಈ ಮೊದಲೇ ನಮಗೆ ಬೇಕಾದ ಮುಂಜಾಗ್ರತೆ ಮಾಡಿಕೊಂಡಿದ್ದೆವು’ ಎಂದು ಸಂಭ್ರಮಿಸುತ್ತಾ ಮರಳಿ ಹೋಗುತ್ತಾರೆ
Surah At-Taubah, Verse 48


وَمِنۡهُم مَّن يَقُولُ ٱئۡذَن لِّي وَلَا تَفۡتِنِّيٓۚ أَلَا فِي ٱلۡفِتۡنَةِ سَقَطُواْۗ وَإِنَّ جَهَنَّمَ لَمُحِيطَةُۢ بِٱلۡكَٰفِرِينَ

ಹೇಳಿರಿ; ‘‘ಅಲ್ಲಾಹನು ನಮಗಾಗಿ ಬರೆದಿಟ್ಟಿರುವುದರ ಹೊರತು ಬೇರಾವ ಸಂಕಟವೂ ನಮಗೆ ಎದುರಾಗುವುದಿಲ್ಲ. ಅವನೇ ನಮ್ಮ ರಕ್ಷಕನು. ಧರ್ಮ ವಿಶ್ವಾಸಿಗಳು ಅಲ್ಲಾಹನಲ್ಲೇ ಸಂಪೂರ್ಣ ಭರವಸೆ ಇಟ್ಟಿರುತ್ತಾರೆ’’
Surah At-Taubah, Verse 49


إِن تُصِبۡكَ حَسَنَةٞ تَسُؤۡهُمۡۖ وَإِن تُصِبۡكَ مُصِيبَةٞ يَقُولُواْ قَدۡ أَخَذۡنَآ أَمۡرَنَا مِن قَبۡلُ وَيَتَوَلَّواْ وَّهُمۡ فَرِحُونَ

ಹೇಳಿರಿ; ನಮ್ಮ ಕುರಿತಂತೆ ನೀವು ಎರಡು ಒಳಿತುಗಳ ಪೈಕಿ ಒಂದನ್ನಲ್ಲದೆ ಬೇರೇನನ್ನಾದರೂ ನಿರೀಕ್ಷಿಸಬಲ್ಲಿರಾ? ನಿಮ್ಮ ಕುರಿತಂತೆ ನಮ್ಮ ನಿರೀಕ್ಷೆ ಇಷ್ಟೇ; ಒಂದೋ ಅಲ್ಲಾಹನು ತನ್ನ ಕಡೆಯಿಂದ ಶಿಕ್ಷೆ ನೀಡುವ ಮೂಲಕ ನಿಮ್ಮನ್ನು ಪೀಡಿಸುವನು, ಅಥವಾ, ಅವನು ನಮ್ಮ ಕೈಗಳಿಂದ ನಿಮ್ಮನ್ನು ದಂಡಿಸುವನು. ನೀವೀಗ ಕಾಯಿರಿ. ನಿಮ್ಮ ಜೊತೆ ನಾವೂ ಕಾಯುವೆವು
Surah At-Taubah, Verse 50


قُل لَّن يُصِيبَنَآ إِلَّا مَا كَتَبَ ٱللَّهُ لَنَا هُوَ مَوۡلَىٰنَاۚ وَعَلَى ٱللَّهِ فَلۡيَتَوَكَّلِ ٱلۡمُؤۡمِنُونَ

ಹೇಳಿರಿ; ನೀವು ಮನಸಾರೆ ಖರ್ಚು ಮಾಡಿದರೂ, ಒಲ್ಲದ ಮನಸ್ಸಿನಿಂದ ಖರ್ಚು ಮಾಡಿದರೂ ಅದನ್ನು ನಿಮ್ಮಿಂದ ಸ್ವೀಕರಿಸಲಾಗದು. ಏಕೆಂದರೆ ನೀವು ಅವಿಧೇಯರು
Surah At-Taubah, Verse 51


قُلۡ هَلۡ تَرَبَّصُونَ بِنَآ إِلَّآ إِحۡدَى ٱلۡحُسۡنَيَيۡنِۖ وَنَحۡنُ نَتَرَبَّصُ بِكُمۡ أَن يُصِيبَكُمُ ٱللَّهُ بِعَذَابٖ مِّنۡ عِندِهِۦٓ أَوۡ بِأَيۡدِينَاۖ فَتَرَبَّصُوٓاْ إِنَّا مَعَكُم مُّتَرَبِّصُونَ

ಅವರು ಮಾಡಿದ ಖರ್ಚು ಅವರಿಂದ ಸ್ವೀಕೃತವಾಗದೆ ಇರುವುದಕ್ಕೆ ಕಾರಣವಿಷ್ಟೇ; ಅವರು ಅಲ್ಲಾಹ್ ಮತ್ತು ಅವನ ರಸೂಲರನ್ನು ಧಿಕ್ಕರಿಸುತ್ತಾರೆ, ತೀರಾ ಆಲಸ್ಯದೊಂದಿಗೆ ನಮಾಝ್‌ಗೆ ಬರುತ್ತಾರೆ ಮತ್ತು ತೀರಾ ಒಲ್ಲದ ಮನಸ್ಸಿನಿಂದ ಖರ್ಚು ಮಾಡುತ್ತಾರೆ
Surah At-Taubah, Verse 52


قُلۡ أَنفِقُواْ طَوۡعًا أَوۡ كَرۡهٗا لَّن يُتَقَبَّلَ مِنكُمۡ إِنَّكُمۡ كُنتُمۡ قَوۡمٗا فَٰسِقِينَ

ಅವರ ಸಂಪತ್ತುಗಳು ಮತ್ತು ಅವರ ಸಂತಾನಗಳು ನಿಮ್ಮನ್ನು ಬೆರಗುಗೊಳಿಸದಿರಲಿ. ಅಲ್ಲಾಹನು ಆ ಮೂಲಕ ಇಹಲೋಕ ಜೀವನದಲ್ಲಿ ಅವರನ್ನು ಶಿಕ್ಷಿಸ ಬಯಸುತ್ತಾನೆ. ಮತ್ತು ಅವರು ಧಿಕ್ಕಾರಿಗಳಾಗಿರುವ ಸ್ಥಿತಿಯಲ್ಲೇ ಅವರ ಪ್ರಾಣಗಳು ಹೊರಟು ಹೋಗಬೇಕೆಂದು ಬಯಸುತ್ತಾನೆ
Surah At-Taubah, Verse 53


وَمَا مَنَعَهُمۡ أَن تُقۡبَلَ مِنۡهُمۡ نَفَقَٰتُهُمۡ إِلَّآ أَنَّهُمۡ كَفَرُواْ بِٱللَّهِ وَبِرَسُولِهِۦ وَلَا يَأۡتُونَ ٱلصَّلَوٰةَ إِلَّا وَهُمۡ كُسَالَىٰ وَلَا يُنفِقُونَ إِلَّا وَهُمۡ كَٰرِهُونَ

ಅವರು, ತಾವು ನಿಸ್ಸಂದೇಹವಾಗಿಯೂ ನಿಮ್ಮವರೆಂದು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ಆದರೆ ಅವರು ನಿಮ್ಮವರಲ್ಲ. ನಿಜವಾಗಿ ಅವರು ಭೀತರಾಗಿದ್ದಾರೆ
Surah At-Taubah, Verse 54


فَلَا تُعۡجِبۡكَ أَمۡوَٰلُهُمۡ وَلَآ أَوۡلَٰدُهُمۡۚ إِنَّمَا يُرِيدُ ٱللَّهُ لِيُعَذِّبَهُم بِهَا فِي ٱلۡحَيَوٰةِ ٱلدُّنۡيَا وَتَزۡهَقَ أَنفُسُهُمۡ وَهُمۡ كَٰفِرُونَ

ಅವರಿಗೆ ಒಂದು ಅಭಯ ಸ್ಥಾನವಾಗಲಿ, ಗುಹೆಯಾಗಲಿ, ಅಡಗುದಾಣವಾಗಲಿ ದೊರೆತರೆ ಅವರೆಲ್ಲಾ ಒಂದಾಗಿ ಅದರೆಡೆಗೆ ಧಾವಿಸುವರು
Surah At-Taubah, Verse 55


وَيَحۡلِفُونَ بِٱللَّهِ إِنَّهُمۡ لَمِنكُمۡ وَمَا هُم مِّنكُمۡ وَلَٰكِنَّهُمۡ قَوۡمٞ يَفۡرَقُونَ

(ದೂತರೇ,) ಅವರಲ್ಲೊಬ್ಬನು, ದಾನಗಳ ವಿಷಯದಲ್ಲಿ ನಿಮ್ಮನ್ನು ಮೂದಲಿಸುತ್ತಾನೆ. ಅದರಲ್ಲಿ ಅವರಿಗೊಂದು ಪಾಲು ಸಿಕ್ಕಿದರೆ ಅವರು ಸಂತುಷ್ಟರಾಗುತ್ತಾರೆ. ಇನ್ನು, ಅದರಿಂದ ಅವರಿಗೇನೂ ಸಿಗದಿದ್ದರೆ ಅವರು ಕೋಪಗೊಳ್ಳುತ್ತಾರೆ
Surah At-Taubah, Verse 56


لَوۡ يَجِدُونَ مَلۡجَـًٔا أَوۡ مَغَٰرَٰتٍ أَوۡ مُدَّخَلٗا لَّوَلَّوۡاْ إِلَيۡهِ وَهُمۡ يَجۡمَحُونَ

ಅವರು, ತಮಗೆ ಅಲ್ಲಾಹನು ಮತ್ತವನ ದೂತರು ನೀಡಿದ್ದರಲ್ಲಿ ತೃಪ್ತರಾಗಿ, ‘‘ನಮಗೆ ಅಲ್ಲಾಹನೇ ಸಾಕು. ಮುಂದೆಯೂ ಅಲ್ಲಾಹನು ತನ್ನ ಅನುಗ್ರಹದಿಂದ ನಮಗೆ ನೀಡುವನು ಮತ್ತು ಅವನ ದೂತರೂ ನೀಡುವರು. ನಾವು ಖಂಡಿತ ಅಲ್ಲಾಹನಲ್ಲಿ ಒಲವು ಉಳ್ಳವರಾಗಿದ್ದೇವೆ’’-ಎಂದಿದ್ದರೆ ಎಷ್ಟು ಚೆನ್ನಾಗಿತ್ತು
Surah At-Taubah, Verse 57


وَمِنۡهُم مَّن يَلۡمِزُكَ فِي ٱلصَّدَقَٰتِ فَإِنۡ أُعۡطُواْ مِنۡهَا رَضُواْ وَإِن لَّمۡ يُعۡطَوۡاْ مِنۡهَآ إِذَا هُمۡ يَسۡخَطُونَ

ನಿಜವಾಗಿ ದಾನಗಳು (ಝಕಾತ್) ಇರುವುದು – ಬಡವರಿಗಾಗಿ, ದೀನರಿಗಾಗಿ, ಅದರ ವಿತರಕರಿಗಾಗಿ, ಯಾರ ಮನ ಒಲಿಸಬೇಕಾಗಿದೆಯೋ ಅವರಿಗಾಗಿ, ಕೊರಳು ಬಿಡಿಸುವುದಕ್ಕಾಗಿ (ದಾಸ್ಯ ವಿಮೋಚನೆಗಾಗಿ), ಸಾಲಗಾರರಿಗಾಗಿ, ಅಲ್ಲಾಹನ ಮಾರ್ಗದಲ್ಲಿ ವ್ಯಯಿಸುವುದಕ್ಕಾಗಿ ಮತ್ತು ಪ್ರಯಾಣಿಕರಿಗಾಗಿ. ಇದು ಅಲ್ಲಾಹನು ವಿಧಿಸಿರುವ ಕಡ್ಡಾಯ ನಿಯಮ. ಅಲ್ಲಾಹನು ಎಲ್ಲವನ್ನೂ ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ
Surah At-Taubah, Verse 58


وَلَوۡ أَنَّهُمۡ رَضُواْ مَآ ءَاتَىٰهُمُ ٱللَّهُ وَرَسُولُهُۥ وَقَالُواْ حَسۡبُنَا ٱللَّهُ سَيُؤۡتِينَا ٱللَّهُ مِن فَضۡلِهِۦ وَرَسُولُهُۥٓ إِنَّآ إِلَى ٱللَّهِ رَٰغِبُونَ

ಅವರಲ್ಲಿ ಕೆಲವರು ದೂತರನ್ನು ಪೀಡಿಸುತ್ತಾರೆ. ಅವರು ‘‘ಇವರು ದುರ್ಬಲ ಕಿವಿಯ ವ್ಯಕ್ತಿ’’ ಎನ್ನುತ್ತಾರೆ. ಹೇಳಿರಿ; (ಅವರ) ಕಿವಿ ದುರ್ಬಲವಾಗಿರುವುದು ನಿಮ್ಮ ಹಿತಕ್ಕಾಗಿ ಮಾತ್ರ. ಅವರು (ದೂತರು) ಅಲ್ಲಾಹನಲ್ಲಿ ನಂಬಿಕೆ ಉಳ್ಳವರು ಹಾಗೂ ಸತ್ಯವಿಶ್ವಾಸಿಗಳಲ್ಲೂ ನಂಬಿಕೆ ಉಳ್ಳವರು. ನಿಮ್ಮ ಪೈಕಿ ವಿಶ್ವಾಸಿಗಳಾಗಿರುವವರ ಪಾಲಿಗೆ ಅವರು ಅನುಗ್ರಹವಾಗಿದ್ದಾರೆ. ಅಲ್ಲಾಹನ ದೂತರನ್ನು ಪೀಡಿಸುವವರಿಗೆ ಕಠಿಣ ಶಿಕ್ಷೆ ಕಾದಿದೆ
Surah At-Taubah, Verse 59


۞إِنَّمَا ٱلصَّدَقَٰتُ لِلۡفُقَرَآءِ وَٱلۡمَسَٰكِينِ وَٱلۡعَٰمِلِينَ عَلَيۡهَا وَٱلۡمُؤَلَّفَةِ قُلُوبُهُمۡ وَفِي ٱلرِّقَابِ وَٱلۡغَٰرِمِينَ وَفِي سَبِيلِ ٱللَّهِ وَٱبۡنِ ٱلسَّبِيلِۖ فَرِيضَةٗ مِّنَ ٱللَّهِۗ وَٱللَّهُ عَلِيمٌ حَكِيمٞ

ಅವರು ನಿಮ್ಮನ್ನು (ಮುಸ್ಲಿಮರನ್ನು) ಮೆಚ್ಚಿಸಲಿಕ್ಕಾಗಿ ಅಲ್ಲಾಹನ ಆಣೆ ಹಾಕುತ್ತಲಿರುತ್ತಾರೆ. ನಿಜವಾಗಿ, ಅವರು ವಿಶ್ವಾಸಿಗಳಾಗಿದ್ದರೆ (ಅವರಿಗೆ ತಿಳಿದಿರಲಿ;) ಅಲ್ಲಾಹ್ ಮತ್ತು ಅವನ ದೂತರು ಮೆಚ್ಚಿಸಲ್ಪಡುವುದಕ್ಕೆ ಹೆಚ್ಚು ಅರ್ಹರಾಗಿದ್ದಾರೆ
Surah At-Taubah, Verse 60


وَمِنۡهُمُ ٱلَّذِينَ يُؤۡذُونَ ٱلنَّبِيَّ وَيَقُولُونَ هُوَ أُذُنٞۚ قُلۡ أُذُنُ خَيۡرٖ لَّكُمۡ يُؤۡمِنُ بِٱللَّهِ وَيُؤۡمِنُ لِلۡمُؤۡمِنِينَ وَرَحۡمَةٞ لِّلَّذِينَ ءَامَنُواْ مِنكُمۡۚ وَٱلَّذِينَ يُؤۡذُونَ رَسُولَ ٱللَّهِ لَهُمۡ عَذَابٌ أَلِيمٞ

ಅಲ್ಲಾಹ್ ಮತ್ತು ಅವನ ದೂತರ ವಿರುದ್ಧ ಘರ್ಷಣೆಗೆ ಇಳಿಯುವವನಿಗಾಗಿ ನರಕಾಗ್ನಿಯು ಖಂಡಿತ ಸಿದ್ಧವಾಗಿದೆ ಮತ್ತು ಅವನು ಅದರಲ್ಲಿ ಸದಾಕಾಲ ಇರುವನೆಂದು ಅವರಿಗೆ ತಿಳಿಯದೇ? ಅದು ನಿಜಕ್ಕೂ ಮಹಾ ಅಪಮಾನವಾಗಿದೆ
Surah At-Taubah, Verse 61


يَحۡلِفُونَ بِٱللَّهِ لَكُمۡ لِيُرۡضُوكُمۡ وَٱللَّهُ وَرَسُولُهُۥٓ أَحَقُّ أَن يُرۡضُوهُ إِن كَانُواْ مُؤۡمِنِينَ

ತಮ್ಮ ಮನದೊಳಗಿರುವುದನ್ನೆಲ್ಲಾ ಅವರಿಗೆ (ವಿಶ್ವಾಸಿಗಳಿಗೆ)ತಿಳಿಸಿ ಬಿಡುವ ಅಧ್ಯಾಯವೇನಾದರೂ ಇಳಿದು ಬಂದೀತೆಂಬ ಭಯ ಕಪಟಿಗಳಿಗೆ ಇದೆ. ಹೇಳಿರಿ; ನೀವು ಅಪಹಾಸ್ಯ ಮಾಡುತ್ತಲಿರಿ. ನೀವು ಅಂಜುತ್ತಿರುವುದನ್ನು ಅಲ್ಲಾಹನು ಖಂಡಿತ ಬಹಿರಂಗ ಪಡಿಸುವನು
Surah At-Taubah, Verse 62


أَلَمۡ يَعۡلَمُوٓاْ أَنَّهُۥ مَن يُحَادِدِ ٱللَّهَ وَرَسُولَهُۥ فَأَنَّ لَهُۥ نَارَ جَهَنَّمَ خَٰلِدٗا فِيهَاۚ ذَٰلِكَ ٱلۡخِزۡيُ ٱلۡعَظِيمُ

ನೀವು ಅವರೊಡನೆ ಈ ಕುರಿತು ಕೇಳಿದರೆ, ನಾವಂತು ಕೇವಲ ತಮಾಷೆಮಾಡುತ್ತಿದ್ದೆವು ಹಾಗೂ ಆಟವಾಡುತ್ತಿದ್ದೆವು ಎಂದು ಅವರು ಹೇಳುತ್ತಾರೆ. ಹೇಳಿರಿ; ನೀವೇನು ಅಲ್ಲಾಹ್ ಮತ್ತವನ ವಚನಗಳ ಜೊತೆ ಹಾಗೂ ದೂತರ ಜೊತೆ ಅಪಹಾಸ್ಯ ಮಾಡುತ್ತೀರಾ
Surah At-Taubah, Verse 63


يَحۡذَرُ ٱلۡمُنَٰفِقُونَ أَن تُنَزَّلَ عَلَيۡهِمۡ سُورَةٞ تُنَبِّئُهُم بِمَا فِي قُلُوبِهِمۡۚ قُلِ ٱسۡتَهۡزِءُوٓاْ إِنَّ ٱللَّهَ مُخۡرِجٞ مَّا تَحۡذَرُونَ

ನೀವಿನ್ನು ನೆಪಗಳನ್ನು ಹುಡುಕಬೇಡಿ. ನೀವು ವಿಶ್ವಾಸಿಗಳಾದ ಬಳಿಕ ಧಿಕ್ಕಾರಿಗಳಾಗಿರುವಿರಿ. ನಾವೀಗ ನಿಮ್ಮಲ್ಲಿನ ಒಂದು ಗುಂಪನ್ನು ಕ್ಷಮಿಸಿದರೂ ಇನ್ನೊಂದು ಗುಂಪನ್ನು ಖಂಡಿತ ಶಿಕ್ಷಿಸುವೆವು – ಏಕೆಂದರೆ ಅವರು ಅಪರಾಧಿಗಳಾಗಿರುವರು
Surah At-Taubah, Verse 64


وَلَئِن سَأَلۡتَهُمۡ لَيَقُولُنَّ إِنَّمَا كُنَّا نَخُوضُ وَنَلۡعَبُۚ قُلۡ أَبِٱللَّهِ وَءَايَٰتِهِۦ وَرَسُولِهِۦ كُنتُمۡ تَسۡتَهۡزِءُونَ

ಕಪಟಿ ಪುರುಷರು ಮತ್ತು ಕಪಟಿ ಸ್ತ್ರೀಯರು ಪರಸ್ಪರ ತುಂಬಾ ಆಪ್ತರು. ಅವರು ಕೆಡುಕನ್ನು ಆದೇಶಿಸುತ್ತಾರೆ ಮತ್ತು ಒಳಿತಿನಿಂದ ತಡೆಯುತ್ತಾರೆ. ಹಾಗೆಯೇ ಅವರು ತಮ್ಮ ಕೈಗಳನ್ನು ಕಟ್ಟಿರುತ್ತಾರೆ (ತೀರಾ ಜಿಪುಣರಾಗಿರುತ್ತಾರೆ). ಅವರು ಅಲ್ಲಾಹನನ್ನು ಮರೆತಿದ್ದಾರೆ ಮತ್ತು ಅಲ್ಲಾಹನು ಅವರನ್ನು ಮರೆತಿದ್ದಾನೆ. ಖಂಡಿತವಾಗಿಯೂ ಕಪಟಿಗಳೇ ನಿಜವಾದ ಅವಿಧೇಯರಾಗಿದ್ದಾರೆ
Surah At-Taubah, Verse 65


لَا تَعۡتَذِرُواْ قَدۡ كَفَرۡتُم بَعۡدَ إِيمَٰنِكُمۡۚ إِن نَّعۡفُ عَن طَآئِفَةٖ مِّنكُمۡ نُعَذِّبۡ طَآئِفَةَۢ بِأَنَّهُمۡ كَانُواْ مُجۡرِمِينَ

ಅಲ್ಲಾಹನು ಕಪಟಿ ಪುರುಷರಿಗೆ, ಕಪಟಿ ಸ್ತ್ರೀಯರಿಗೆ ಮತ್ತು ಧರ್ಮ ಧಿಕ್ಕಾರಿಗಳಿಗೆ ನರಕಾಗ್ನಿಯ ವಾಗ್ದಾನ ನೀಡಿರುತ್ತಾನೆ. ಅವರು ಸದಾಕಾಲ ಅದರಲ್ಲೇ ಇರುವರು. ಅವರಿಗೆ ಅದುವೇ ಸಾಕು. ಅವರ ಮೇಲೆ ಅಲ್ಲಾಹನ ಶಾಪವಿದೆ ಮತ್ತು ಅವರಿಗೆ ಶಾಶ್ವತ ಶಿಕ್ಷೆ ಇದೆ
Surah At-Taubah, Verse 66


ٱلۡمُنَٰفِقُونَ وَٱلۡمُنَٰفِقَٰتُ بَعۡضُهُم مِّنۢ بَعۡضٖۚ يَأۡمُرُونَ بِٱلۡمُنكَرِ وَيَنۡهَوۡنَ عَنِ ٱلۡمَعۡرُوفِ وَيَقۡبِضُونَ أَيۡدِيَهُمۡۚ نَسُواْ ٱللَّهَ فَنَسِيَهُمۡۚ إِنَّ ٱلۡمُنَٰفِقِينَ هُمُ ٱلۡفَٰسِقُونَ

ನಿಮ್ಮ ಹಿಂದಿನವರಂತೆ – ಅವರು ನಿಮಗಿಂತ ಹೆಚ್ಚು ಶಕ್ತಿಶಾಲಿಗಳಾಗಿದ್ದರು ಮತ್ತು ನಿಮಗಿಂತ ಹೆಚ್ಚು ಸಂಪತ್ತು ಹಾಗೂ ಸಂತಾನಗಳು ಅವರ ಬಳಿ ಇದ್ದವು. ಅವರು ತಮ್ಮ ಪಾಲನ್ನು ಭೋಗಿಸಿದರು. ಆ ನಿಮ್ಮ ಹಿಂದಿನವರು ತಮ್ಮ ಪಾಲನ್ನು ಭೋಗಿಸಿದಂತೆ, ನೀವು ನಿಮ್ಮ ಪಾಲನ್ನು ಭೋಗಿಸಿದಿರಿ ಮತ್ತು ಅವರಂತೆ ನೀವೂ ವ್ಯರ್ಥ ಚಟುವಟಿಕೆಗಳಲ್ಲಿ ನಿರತರಾಗಿ ಬಿಟ್ಟಿರಿ. ಅವರ ಕರ್ಮಗಳೆಲ್ಲಾ ಇಹಲೋಕದಲ್ಲೂ ಪರಲೋಕದಲ್ಲೂ ವ್ಯರ್ಥವಾದವು. ಅವರೇ ನಿಜವಾಗಿ ನಷ್ಟ ಅನುಭವಿಸುವವರು
Surah At-Taubah, Verse 67


وَعَدَ ٱللَّهُ ٱلۡمُنَٰفِقِينَ وَٱلۡمُنَٰفِقَٰتِ وَٱلۡكُفَّارَ نَارَ جَهَنَّمَ خَٰلِدِينَ فِيهَاۚ هِيَ حَسۡبُهُمۡۚ وَلَعَنَهُمُ ٱللَّهُۖ وَلَهُمۡ عَذَابٞ مُّقِيمٞ

ಅವರ ಹಿಂದಿನ, ನೂಹರ ಜನಾಂಗ, ಆದ್ ಹಾಗೂ ಸಮೂದ್ ಜನಾಂಗ, ಇಬ್ರಾಹೀಮರ ಜನಾಂಗ, ಮದ್‌ಯನ್‌ನವರು ಮತ್ತು ಪಲ್ಲಟಗೊಳಿಸಲಾದ ನಾಡುಗಳ ಸುದ್ದಿಯು ಅವರಿಗೆ ತಲುಪಿಲ್ಲವೇ? ಅವರ ಬಳಿಗೆ ಅವರ ದೇವದೂತರು ಸ್ಪಷ್ಟ ಪುರಾವೆಗಳೊಂದಿಗೆ ಬಂದಿದ್ದರು. ಅಲ್ಲಾಹನು ಅವರ ಮೇಲೆ ಅಕ್ರಮವೆಸಗಿರಲಿಲ್ಲ. ಅವರು ತಾವೇ ತಮ್ಮ ಮೇಲೆ ಅಕ್ರಮವೆಸಗಿಕೊಂಡರು
Surah At-Taubah, Verse 68


كَٱلَّذِينَ مِن قَبۡلِكُمۡ كَانُوٓاْ أَشَدَّ مِنكُمۡ قُوَّةٗ وَأَكۡثَرَ أَمۡوَٰلٗا وَأَوۡلَٰدٗا فَٱسۡتَمۡتَعُواْ بِخَلَٰقِهِمۡ فَٱسۡتَمۡتَعۡتُم بِخَلَٰقِكُمۡ كَمَا ٱسۡتَمۡتَعَ ٱلَّذِينَ مِن قَبۡلِكُم بِخَلَٰقِهِمۡ وَخُضۡتُمۡ كَٱلَّذِي خَاضُوٓاْۚ أُوْلَـٰٓئِكَ حَبِطَتۡ أَعۡمَٰلُهُمۡ فِي ٱلدُّنۡيَا وَٱلۡأٓخِرَةِۖ وَأُوْلَـٰٓئِكَ هُمُ ٱلۡخَٰسِرُونَ

ವಿಶ್ವಾಸಿ ಪುರುಷರು ಮತ್ತು ವಿಶ್ವಾಸಿ ಸ್ತ್ರೀಯರು ಪರಸ್ಪರ ಪೋಷಕರಾಗಿರುತ್ತಾರೆ. ಅವರು ಒಳಿತನ್ನು ಆದೇಶಿಸುತ್ತಾರೆ ಹಾಗೂ ಕೆಡುಕಿನಿಂದ ತಡೆಯುತ್ತಾರೆ ಮತ್ತು ಅವರು ನಮಾಝ್‌ಅನ್ನು ಪಾಲಿಸುತ್ತಾರೆ ಹಾಗೂ ಝಕಾತ್‌ಅನ್ನು ಪಾವತಿಸುತ್ತಾರೆ. ಹಾಗೆಯೇ ಅವರು ಅಲ್ಲಾಹ್ ಹಾಗೂ ಅವರ ದೂತರ ಆಜ್ಞಾಪಾಲನೆ ಮಾಡುತ್ತಾರೆ. ಅವರ ಮೇಲೆ ಅಲ್ಲಾಹನು ಕರುಣೆ ತೋರುವನು.ಖಂಡಿತವಾಗಿಯೂ ಅಲ್ಲಾಹನು ಪ್ರಬಲನೂ ಯುಕ್ತಿವಂತನೂ ಆಗಿರುತ್ತಾನೆ
Surah At-Taubah, Verse 69


أَلَمۡ يَأۡتِهِمۡ نَبَأُ ٱلَّذِينَ مِن قَبۡلِهِمۡ قَوۡمِ نُوحٖ وَعَادٖ وَثَمُودَ وَقَوۡمِ إِبۡرَٰهِيمَ وَأَصۡحَٰبِ مَدۡيَنَ وَٱلۡمُؤۡتَفِكَٰتِۚ أَتَتۡهُمۡ رُسُلُهُم بِٱلۡبَيِّنَٰتِۖ فَمَا كَانَ ٱللَّهُ لِيَظۡلِمَهُمۡ وَلَٰكِن كَانُوٓاْ أَنفُسَهُمۡ يَظۡلِمُونَ

ಅಲ್ಲಾಹನು ವಿಶ್ವಾಸಿ ಪುರುಷರು ಮತ್ತು ವಿಶ್ವಾಸಿ ಸ್ತ್ರೀಯರಿಗೆ, ತಳದಲ್ಲಿ ನದಿಗಳು ಹರಿಯುವಂತಹ ಸ್ವರ್ಗ ತೋಟಗಳ ವಾಗ್ದಾನ ನೀಡಿರುವನು. ಅವರು ಅವುಗಳಲ್ಲಿ ಸದಾಕಾಲ ಇರುವರು. (ಹಾಗೆಯೇ, ಅವರಿಗಾಗಿ) ಶಾಶ್ವತ ತೋಟಗಳಲ್ಲಿ ನಿರ್ಮಲ ನಿವಾಸಗಳಿವೆ. ಇದೆಲ್ಲಕ್ಕಿಂತ ಮಿಗಿಲಾಗಿ – ಅಲ್ಲಾಹನ ಮೆಚ್ಚುಗೆ. ಇದು ನಿಜಕ್ಕೂ ಮಹಾ ವಿಜಯವಾಗಿದೆ
Surah At-Taubah, Verse 70


وَٱلۡمُؤۡمِنُونَ وَٱلۡمُؤۡمِنَٰتُ بَعۡضُهُمۡ أَوۡلِيَآءُ بَعۡضٖۚ يَأۡمُرُونَ بِٱلۡمَعۡرُوفِ وَيَنۡهَوۡنَ عَنِ ٱلۡمُنكَرِ وَيُقِيمُونَ ٱلصَّلَوٰةَ وَيُؤۡتُونَ ٱلزَّكَوٰةَ وَيُطِيعُونَ ٱللَّهَ وَرَسُولَهُۥٓۚ أُوْلَـٰٓئِكَ سَيَرۡحَمُهُمُ ٱللَّهُۗ إِنَّ ٱللَّهَ عَزِيزٌ حَكِيمٞ

ದೂತರೇ, ಧಿಕ್ಕಾರಿಗಳು ಮತ್ತು ಕಪಟಿಗಳ ವಿರುದ್ಧ ಹೋರಾಡಿರಿ ಹಾಗೂ ಅವರ ಪಾಲಿಗೆ ಕಠಿಣರಾಗಿರಿ. ನರಕವೇ ಅವರ ನೆಲೆಯಾಗಿದೆ. ಅದು, ತುಂಬಾ ಕೆಟ್ಟ ನೆಲೆಯಾಗಿದೆ
Surah At-Taubah, Verse 71


وَعَدَ ٱللَّهُ ٱلۡمُؤۡمِنِينَ وَٱلۡمُؤۡمِنَٰتِ جَنَّـٰتٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَا وَمَسَٰكِنَ طَيِّبَةٗ فِي جَنَّـٰتِ عَدۡنٖۚ وَرِضۡوَٰنٞ مِّنَ ٱللَّهِ أَكۡبَرُۚ ذَٰلِكَ هُوَ ٱلۡفَوۡزُ ٱلۡعَظِيمُ

ತಾವು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ನಿಜವಾಗಿ ಅವರು ಧಿಕ್ಕಾರದ ಮಾತನ್ನು ಹೇಳಿದ್ದಾರೆ ಹಾಗೂ ಅವರು ಮುಸ್ಲಿಮರಾದ ಬಳಿಕ ಧಿಕ್ಕಾರಿಗಳಾಗಿದ್ದಾರೆ. ಅವರು, ತಮಗೆ ಸಾಧಿಸಲಾಗದ್ದನ್ನು (ದೂತರ ಹತ್ಯೆಯನ್ನು) ಯೋಜಿಸಿದ್ದರು. ನಿಜವಾಗಿ ಅವರು, ಅಲ್ಲಾಹ್ ಮತ್ತು ಅವನ ದೂತರು ತಮ್ಮ ಔದಾರ್ಯದಿಂದ ಅವರನ್ನು ಸಂಪನ್ನಗೊಳಿಸಿದ್ದಕ್ಕಾಗಿಯಷ್ಟೇ ಪ್ರತೀಕಾರವೆಸಗಿರುವರು. ಇದೀಗ ಅವರು ಪಶ್ಚಾತ್ತಾಪ ಪಟ್ಟರೆ ಅವರಿಗೆ ಹಿತವಾದೀತು. ಅವರು ತಿರುಗಿನಿಂತರೆ ಅಲ್ಲಾಹನು ಅವರಿಗೆ ಈ ಲೋಕದಲ್ಲೂ ಪರಲೋಕದಲ್ಲೂ ಬಹಳ ಕಠಿಣ ಶಿಕ್ಷೆ ನೀಡುವನು. ಭೂಮಿಯಲ್ಲಿ ಅವರಿಗೆ ರಕ್ಷಕನಾಗಿ ಹಾಗೂ ಸಹಾಯಕನಾಗಿ ಯಾರೂ ಸಿಗಲಾರರು
Surah At-Taubah, Verse 72


يَـٰٓأَيُّهَا ٱلنَّبِيُّ جَٰهِدِ ٱلۡكُفَّارَ وَٱلۡمُنَٰفِقِينَ وَٱغۡلُظۡ عَلَيۡهِمۡۚ وَمَأۡوَىٰهُمۡ جَهَنَّمُۖ وَبِئۡسَ ٱلۡمَصِيرُ

ಅವರಲ್ಲಿ ಕೆಲವರು – ಅವನು (ಅಲ್ಲಾಹನು) ತನ್ನ ಅನುಗ್ರಹದಿಂದ ನಮಗೆ ದಯಪಾಲಿಸಿದರೆ ನಾವು ಖಂಡಿತ ದಾನ ಮಾಡುವೆವು ಮತ್ತು ಖಂಡಿತ ನಾವು ಸಜ್ಜನರ ಸಾಲಿಗೆ ಸೇರುವೆವು ಎಂದು ಅಲ್ಲಾಹನೊಡನೆ ಕರಾರು ಮಾಡಿರುವರು
Surah At-Taubah, Verse 73


يَحۡلِفُونَ بِٱللَّهِ مَا قَالُواْ وَلَقَدۡ قَالُواْ كَلِمَةَ ٱلۡكُفۡرِ وَكَفَرُواْ بَعۡدَ إِسۡلَٰمِهِمۡ وَهَمُّواْ بِمَا لَمۡ يَنَالُواْۚ وَمَا نَقَمُوٓاْ إِلَّآ أَنۡ أَغۡنَىٰهُمُ ٱللَّهُ وَرَسُولُهُۥ مِن فَضۡلِهِۦۚ فَإِن يَتُوبُواْ يَكُ خَيۡرٗا لَّهُمۡۖ وَإِن يَتَوَلَّوۡاْ يُعَذِّبۡهُمُ ٱللَّهُ عَذَابًا أَلِيمٗا فِي ٱلدُّنۡيَا وَٱلۡأٓخِرَةِۚ وَمَا لَهُمۡ فِي ٱلۡأَرۡضِ مِن وَلِيّٖ وَلَا نَصِيرٖ

ಆದರೆ ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿದಾಗ, ಅವರು ಅದರಲ್ಲಿ ಜಿಪುಣತೆ ತೋರಿದರು. ಅವರು ತಿರುಗಿ ನಿಂತರು ಮತ್ತು ವಿಮುಖರಾದರು
Surah At-Taubah, Verse 74


۞وَمِنۡهُم مَّنۡ عَٰهَدَ ٱللَّهَ لَئِنۡ ءَاتَىٰنَا مِن فَضۡلِهِۦ لَنَصَّدَّقَنَّ وَلَنَكُونَنَّ مِنَ ٱلصَّـٰلِحِينَ

ಕೊನೆಗೆ ಅಲ್ಲಾಹನು, ಅವರು ತನ್ನನ್ನು ಭೇಟಿಯಾಗುವ ದಿನದ ತನಕ ಅವರ ಮನಸ್ಸುಗಳಲ್ಲಿ ಕಾಪಟ್ಯವನ್ನು ತುಂಬಿ ಬಿಟ್ಟನು – ಅವರು ಅಲ್ಲಾಹನ ಜೊತೆ ತಾವು ಮಾಡಿದ ವಾಗ್ದಾನಗಳನ್ನು ಉಲ್ಲಂಘಿಸಿದ್ದರ ಮತ್ತು ಸುಳ್ಳು ಹೇಳುತ್ತಿದ್ದುದರ ಫಲಿತಾಂಶವಿದು
Surah At-Taubah, Verse 75


فَلَمَّآ ءَاتَىٰهُم مِّن فَضۡلِهِۦ بَخِلُواْ بِهِۦ وَتَوَلَّواْ وَّهُم مُّعۡرِضُونَ

ಅಲ್ಲಾಹನು ಅವರ ಗುಟ್ಟುಗಳನ್ನೂ ಗುಪ್ತ ಮಾತುಕತೆಗಳನ್ನೂ ಬಲ್ಲನೆಂಬುದು ಮತ್ತು ಅಲ್ಲಾಹನು ಎಲ್ಲ ಗುಪ್ತ ವಿಚಾರಗಳನ್ನೂ ಚೆನ್ನಾಗಿ ಬಲ್ಲವನೆಂಬುದು ಅವರಿಗೆ ತಿಳಿಯದೇ
Surah At-Taubah, Verse 76


فَأَعۡقَبَهُمۡ نِفَاقٗا فِي قُلُوبِهِمۡ إِلَىٰ يَوۡمِ يَلۡقَوۡنَهُۥ بِمَآ أَخۡلَفُواْ ٱللَّهَ مَا وَعَدُوهُ وَبِمَا كَانُواْ يَكۡذِبُونَ

ತಮ್ಮ ಸ್ವಂತ ಇಚ್ಛೆಯಿಂದ ದಾನ ನೀಡುವ ವಿಶ್ವಾಸಿಗಳನ್ನು ದೂಷಿಸುವವರು ಮತ್ತು (ದಾನ ಮಾಡುವುದಕ್ಕೆ) ತಮ್ಮ ಶ್ರಮದ ಫಲದ ಹೊರತು ಬೇರೇನೂ ಇಲ್ಲದವರನ್ನು ಗೇಲಿ ಮಾಡುವವರು – ಅವರನ್ನು ಅಲ್ಲಾಹನು ಗೇಲಿಮಾಡುವನು ಮತ್ತು ಅವರಿಗೆ ಕಠಿಣ ಶಿಕ್ಷೆ ಕಾದಿದೆ
Surah At-Taubah, Verse 77


أَلَمۡ يَعۡلَمُوٓاْ أَنَّ ٱللَّهَ يَعۡلَمُ سِرَّهُمۡ وَنَجۡوَىٰهُمۡ وَأَنَّ ٱللَّهَ عَلَّـٰمُ ٱلۡغُيُوبِ

ನೀವು ಅವರನ್ನು ಕ್ಷವಿಸಬೇಕೆಂದು ಪ್ರಾರ್ಥಿಸಿದರೂ ಪ್ರಾರ್ಥಿಸದಿದ್ದರೂ (ಪರಿಣಾಮ ಒಂದೇ). ಅವರನ್ನು ಕ್ಷಮಿಸಬೇಕೆಂದು ನೀವು ಎಪ್ಪತ್ತು ಬಾರಿ ಪ್ರಾರ್ಥಿಸಿದರೂ ಅಲ್ಲಾಹನು ಅವರನ್ನು ಖಂಡಿತ ಕ್ಷಮಿಸಲಾರನು. ಏಕೆಂದರೆ ಅವರು ಅಲ್ಲಾಹ್ ಮತ್ತು ಅವನ ದೂತರನ್ನು ಧಿಕ್ಕರಿಸಿದವರಾಗಿದ್ದಾರೆ. ಅಲ್ಲಾಹನು ಅವಿಧೇಯರಿಗೆ ಸನ್ಮಾರ್ಗವನ್ನು ತೋರಿಸುವುದಿಲ್ಲ
Surah At-Taubah, Verse 78


ٱلَّذِينَ يَلۡمِزُونَ ٱلۡمُطَّوِّعِينَ مِنَ ٱلۡمُؤۡمِنِينَ فِي ٱلصَّدَقَٰتِ وَٱلَّذِينَ لَا يَجِدُونَ إِلَّا جُهۡدَهُمۡ فَيَسۡخَرُونَ مِنۡهُمۡ سَخِرَ ٱللَّهُ مِنۡهُمۡ وَلَهُمۡ عَذَابٌ أَلِيمٌ

(ಯುದ್ಧದಿಂದ ತಪ್ಪಿಸಿಕೊಳ್ಳಲು) ಹಿಂದೆ ಉಳಿದುಕೊಂಡವರು, ತಾವು ಅಲ್ಲಾಹನ ದೂತರ ಹಿಂದೆ, ತಮ್ಮ ನೆಲೆಗಳಲ್ಲೇ ಉಳಿದಿರುವೆವೆಂದು ಸಂಭ್ರಮಿಸಿದರು. ಅವರಿಗೆ ತಮ್ಮ ಸಂಪತ್ತುಗಳನ್ನು ಹಾಗೂ ತಮ್ಮ ಜೀವಗಳನ್ನು ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡುವುದು ಅಪ್ರಿಯವಾಯಿತು ಮತ್ತು ಅವರು ‘‘ಬಿಸಿಲಲ್ಲಿ ಹೊರಡಬೇಡಿ’’ ಎಂದರು. ಹೇಳಿರಿ; ನರಕದ ಬೆಂಕಿಯು ಅದಕ್ಕಿಂತಲೂ ಬಿಸಿಯಾಗಿರುವುದು. ಅವರು ಅರ್ಥಮಾಡಿಕೊಂಡಿದ್ದರೆ ಎಷ್ಟು ಚೆನ್ನಾಗಿತ್ತು
Surah At-Taubah, Verse 79


ٱسۡتَغۡفِرۡ لَهُمۡ أَوۡ لَا تَسۡتَغۡفِرۡ لَهُمۡ إِن تَسۡتَغۡفِرۡ لَهُمۡ سَبۡعِينَ مَرَّةٗ فَلَن يَغۡفِرَ ٱللَّهُ لَهُمۡۚ ذَٰلِكَ بِأَنَّهُمۡ كَفَرُواْ بِٱللَّهِ وَرَسُولِهِۦۗ وَٱللَّهُ لَا يَهۡدِي ٱلۡقَوۡمَ ٱلۡفَٰسِقِينَ

ಅವರು ಕಡಿಮೆ ನಗಬೇಕು ಮತ್ತು ಹೆಚ್ಚು ಅಳಬೇಕು. ಹಾಗಿದೆ, ಅವರ ಗಳಿಕೆಯ ಫಲ
Surah At-Taubah, Verse 80


فَرِحَ ٱلۡمُخَلَّفُونَ بِمَقۡعَدِهِمۡ خِلَٰفَ رَسُولِ ٱللَّهِ وَكَرِهُوٓاْ أَن يُجَٰهِدُواْ بِأَمۡوَٰلِهِمۡ وَأَنفُسِهِمۡ فِي سَبِيلِ ٱللَّهِ وَقَالُواْ لَا تَنفِرُواْ فِي ٱلۡحَرِّۗ قُلۡ نَارُ جَهَنَّمَ أَشَدُّ حَرّٗاۚ لَّوۡ كَانُواْ يَفۡقَهُونَ

ಒಂದು ವೇಳೆ ಅಲ್ಲಾಹನು ನಿಮ್ಮನ್ನು ಅವರಲ್ಲಿನ ಒಂದು ಗುಂಪಿನೆಡೆಗೆ ಮರಳಿಸಿದರೆ, ಅವರು (ಹೋರಾಟಕ್ಕೆ) ಹೊರಡಲು ನಿಮ್ಮ ಅನುಮತಿ ಕೇಳುವರು. ಹೇಳಿರಿ; ನೀವೆಂದೂ ನನ್ನ ಜೊತೆ ಹೊರಡುವಂತಿಲ್ಲ ಮತ್ತು ನೀವೆಂದೂ ನನ್ನ ಜೊತೆ ಸೇರಿ ಶತ್ರುವಿನ ವಿರುದ್ಧ ಹೋರಾಡುವಂತಿಲ್ಲ. ನೀವು ಮೊದಲ ಬಾರಿ ಕುಳಿತಿರಲು ಇಷ್ಟ ಪಟ್ಟವರು. ಇದೀಗ ನೀವು ಹಿಂದೆ ಉಳಿದಿರುವವರ ಜೊತೆಗೇ ಕುಳಿತಿರಿ
Surah At-Taubah, Verse 81


فَلۡيَضۡحَكُواْ قَلِيلٗا وَلۡيَبۡكُواْ كَثِيرٗا جَزَآءَۢ بِمَا كَانُواْ يَكۡسِبُونَ

ಅವರ ಪೈಕಿ ಯಾವುದೇ ಮೃತನ ಅಂತಿಮ ನಮಾಝ್‌ಅನ್ನು ನೀವು ಎಂದೂ ಸಲ್ಲಿಸಬೇಡಿ ಮತ್ತು ಅವನ ಗೋರಿಯ ಬಳಿಯೂ ನಿಲ್ಲಬೇಡಿ. ಅವರು ಅಲ್ಲಾಹ್ ಮತ್ತು ಅವನ ದೂತನನ್ನು ಧಿಕ್ಕರಿಸಿದವರಾಗಿದ್ದಾರೆ ಮತ್ತು ಅವರು ಅವಿಧೇಯರಾಗಿಯೇ ಮೃತರಾಗಿದ್ದಾರೆ
Surah At-Taubah, Verse 82


فَإِن رَّجَعَكَ ٱللَّهُ إِلَىٰ طَآئِفَةٖ مِّنۡهُمۡ فَٱسۡتَـٔۡذَنُوكَ لِلۡخُرُوجِ فَقُل لَّن تَخۡرُجُواْ مَعِيَ أَبَدٗا وَلَن تُقَٰتِلُواْ مَعِيَ عَدُوًّاۖ إِنَّكُمۡ رَضِيتُم بِٱلۡقُعُودِ أَوَّلَ مَرَّةٖ فَٱقۡعُدُواْ مَعَ ٱلۡخَٰلِفِينَ

ಅವರ ಸಂಪತ್ತುಗಳಾಗಲಿ, ಸಂತಾನಗಳಾಗಲಿ ನಿಮ್ಮನ್ನು ಬೆರಗು ಗೊಳಿಸದಿರಲಿ. ಅಲ್ಲಾಹನು ಆ ಮೂಲಕ ಇಹಲೋಕ ಜೀವನದಲ್ಲಿ ಅವರನ್ನು ಶಿಕ್ಷಿಸ ಬಯಸುತ್ತಾನೆ ಮತ್ತು ಅವನು ಧರ್ಮ ಧಿಕ್ಕಾರಿಗಳಾಗಿರುವ ಸ್ಥಿತಿಯಲ್ಲಿ ಅವರ ಜೀವಗಳು ಹೊರಟು ಹೋಗಬೇಕೆಂದು ಬಯಸುತ್ತಾನೆ
Surah At-Taubah, Verse 83


وَلَا تُصَلِّ عَلَىٰٓ أَحَدٖ مِّنۡهُم مَّاتَ أَبَدٗا وَلَا تَقُمۡ عَلَىٰ قَبۡرِهِۦٓۖ إِنَّهُمۡ كَفَرُواْ بِٱللَّهِ وَرَسُولِهِۦ وَمَاتُواْ وَهُمۡ فَٰسِقُونَ

ಅಲ್ಲಾಹನಲ್ಲಿ ವಿಶ್ವಾಸವಿಡಿರಿ ಮತ್ತು ಅವನ ದೂತರ ಜೊತೆ ಸೇರಿ ಹೋರಾಡಿರಿ ಎಂದು ಹೇಳುವ ಅಧ್ಯಾಯವೊಂದನ್ನು ಇಳಿಸಲಾದಾಗ ಅವರಲ್ಲಿನ ಸ್ಥಿತಿವಂತರು ನಿಮ್ಮೊಡನೆ ಅನುಮತಿ ಕೇಳುತ್ತಾರೆ ಮತ್ತು ಕುಳಿತಿರುವವರ ಜೊತೆಗಿರಲು ನಮ್ಮನ್ನು ಬಿಟ್ಟು ಬಿಡಿ ಎನ್ನುತ್ತಾರೆ
Surah At-Taubah, Verse 84


وَلَا تُعۡجِبۡكَ أَمۡوَٰلُهُمۡ وَأَوۡلَٰدُهُمۡۚ إِنَّمَا يُرِيدُ ٱللَّهُ أَن يُعَذِّبَهُم بِهَا فِي ٱلدُّنۡيَا وَتَزۡهَقَ أَنفُسُهُمۡ وَهُمۡ كَٰفِرُونَ

ಅವರು ಹಿಂದೆ ಉಳಿದಿರುವವರ ಜೊತೆ ಇರುವುದನ್ನು ಮೆಚ್ಚಿಕೊಂಡರು. ಅವರ ಮನಸ್ಸುಗಳಿಗೆ ಮುದ್ರೆ ಒತ್ತಲಾಯಿತು. ಅವರು ಏನನ್ನೂ ಅರಿಯುವವರಲ್ಲ
Surah At-Taubah, Verse 85


وَإِذَآ أُنزِلَتۡ سُورَةٌ أَنۡ ءَامِنُواْ بِٱللَّهِ وَجَٰهِدُواْ مَعَ رَسُولِهِ ٱسۡتَـٔۡذَنَكَ أُوْلُواْ ٱلطَّوۡلِ مِنۡهُمۡ وَقَالُواْ ذَرۡنَا نَكُن مَّعَ ٱلۡقَٰعِدِينَ

ಆದರೆ ದೇವ ದೂತರು ಹಾಗೂ ಅವರ ಜೊತೆಗಿರುವ ವಿಶ್ವಾಸಿಗಳು ತಮ್ಮ ಸಂಪತ್ತು ಹಾಗೂ ತಮ್ಮ ಜೀವಗಳನ್ನು ತೊಡಗಿಸಿ ಹೋರಾಡಿದರು. ಒಳಿತುಗಳು ಅವರಿಗೇ ಸೇರಿವೆ ಮತ್ತು ಅವರೇ ವಿಜಯಿಗಳು
Surah At-Taubah, Verse 86


رَضُواْ بِأَن يَكُونُواْ مَعَ ٱلۡخَوَالِفِ وَطُبِعَ عَلَىٰ قُلُوبِهِمۡ فَهُمۡ لَا يَفۡقَهُونَ

ಅಲ್ಲಾಹನು ಅವರಿಗಾಗಿ, ತಳದಲ್ಲಿ ನದಿಗಳು ಹರಿಯುವ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿರುವನು. ಅವರು ಅವುಗಳಲ್ಲಿ ಸದಾ ಕಾಲ ಇರುವರು. ನಿಜಕ್ಕೂ ಇದುವೇ ಮಹಾ ವಿಜಯವಾಗಿದೆ
Surah At-Taubah, Verse 87


لَٰكِنِ ٱلرَّسُولُ وَٱلَّذِينَ ءَامَنُواْ مَعَهُۥ جَٰهَدُواْ بِأَمۡوَٰلِهِمۡ وَأَنفُسِهِمۡۚ وَأُوْلَـٰٓئِكَ لَهُمُ ٱلۡخَيۡرَٰتُۖ وَأُوْلَـٰٓئِكَ هُمُ ٱلۡمُفۡلِحُونَ

ತಮಗೆ ಅನುಮತಿ ನೀಡಬೇಕೆಂದು ಕೋರಿ ನೆಪ ಹೂಡುವ ಕೆಲವು ಹಳ್ಳಿಗರು ಬಂದರು ಮತ್ತು ಅಲ್ಲಾಹನೊಡನೆ ಹಾಗೂ ಆತನ ದೂತನೊಡನೆ ಸುಳ್ಳು ಹೇಳಿದವರು (ಯುದ್ಧದಿಂದ ತಪ್ಪಿಸಿ) ಕುಳಿತಿದ್ದರು. ಅವರಲ್ಲಿನ ಧಿಕ್ಕಾರಿಗಳಿಗೆ ಬಹುಬೇಗನೇ ಭಾರೀ ಕಠಿಣ ಶಿಕ್ಷೆ ಎದುರಾಗಲಿದೆ
Surah At-Taubah, Verse 88


أَعَدَّ ٱللَّهُ لَهُمۡ جَنَّـٰتٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَاۚ ذَٰلِكَ ٱلۡفَوۡزُ ٱلۡعَظِيمُ

ದುರ್ಬಲರು, ರೋಗಿಗಳು ಹಾಗೂ ಖರ್ಚುಮಾಡಲಿಕ್ಕೇನೂ ಇಲ್ಲದವರು ಅಲ್ಲಾಹನ ಹಾಗೂ ಅವನ ದೂತನ ಹಿತೈಷಿಗಳಾಗಿದ್ದರೆ (ಅವರು ಹೋರಾಟದಿಂದ ದೂರ ಉಳಿದರೆ) ಅವರ ಮೇಲೇನೂ ದೋಷವಿಲ್ಲ. ಹಾಗೆಯೇ ಸತ್ಕರ್ಮಿಗಳ ಮೇಲೂ ದೋಷವೇನಿಲ್ಲ. ಅಲ್ಲಾಹನು ಖಂಡಿತ ಕ್ಷಮಿಸುವವನೂ ಕರಣಾಳುವೂ ಆಗಿದ್ದಾನೆ
Surah At-Taubah, Verse 89


وَجَآءَ ٱلۡمُعَذِّرُونَ مِنَ ٱلۡأَعۡرَابِ لِيُؤۡذَنَ لَهُمۡ وَقَعَدَ ٱلَّذِينَ كَذَبُواْ ٱللَّهَ وَرَسُولَهُۥۚ سَيُصِيبُ ٱلَّذِينَ كَفَرُواْ مِنۡهُمۡ عَذَابٌ أَلِيمٞ

ಹಾಗೆಯೇ, ತಮಗೆ ಸವಾರಿ ಬೇಕೆಂದು ನಿಮ್ಮ ಬಳಿಗೆ ಕೆಲವರು ಬಂದಿದ್ದರು. ನಿಮ್ಮನ್ನು (ಹೊತ್ತು ಸಾಗಿಸಲು) ಸವಾರಿಗೊಳಿಸಲು ನನಗೇನೂ ಸಿಗುತ್ತಿಲ್ಲ ಎಂದು ನೀವು ಅವರೊಡನೆ ಹೇಳಿದ್ದಿರಿ. ಅವರ ಮೇಲೂ ಯಾವುದೇ ದೋಷವಿಲ್ಲ. ಅವರು ಮರಳಿ ಹೋಗುತ್ತಿದ್ದಾಗ (ಅಲ್ಲಾಹನ ಮಾರ್ಗದಲ್ಲಿ) ಖರ್ಚುಮಾಡಲು ತಮ್ಮ ಬಳಿ ಏನೂ ಇಲ್ಲ ಎಂಬ ದುಃಖದಿಂದ ಅವರ ಕಣ್ಣುಗಳಿಂದ ಕಣ್ಣೀರು ಹರಿಯುತ್ತಿತ್ತು
Surah At-Taubah, Verse 90


لَّيۡسَ عَلَى ٱلضُّعَفَآءِ وَلَا عَلَى ٱلۡمَرۡضَىٰ وَلَا عَلَى ٱلَّذِينَ لَا يَجِدُونَ مَا يُنفِقُونَ حَرَجٌ إِذَا نَصَحُواْ لِلَّهِ وَرَسُولِهِۦۚ مَا عَلَى ٱلۡمُحۡسِنِينَ مِن سَبِيلٖۚ وَٱللَّهُ غَفُورٞ رَّحِيمٞ

ನಿಜವಾಗಿ ದೋಷವಿರುವುದು, ತಾವು ಸಾಕಷ್ಟು ಸಂಪನ್ನರಾಗಿದ್ದರೂ ನಿಮ್ಮೊಡನೆ ಅನುಮತಿ ಕೇಳಿದವರ ಮೇಲೆ. ಅವರು ಹಿಂದುಳಿಯುವವರ ಜೊತೆಗೆ ಇರುವುದನ್ನೇ ಮೆಚ್ಚಿಕೊಂಡರು. ಅಲ್ಲಾಹನು ಅವರ ಮನಸ್ಸುಗಳ ಮೇಲೆ ಮುದ್ರೆ ಒತ್ತಿರುವನು. ಅವರು ಏನನ್ನೂ ಅರಿಯುವುದಿಲ್ಲ
Surah At-Taubah, Verse 91


وَلَا عَلَى ٱلَّذِينَ إِذَا مَآ أَتَوۡكَ لِتَحۡمِلَهُمۡ قُلۡتَ لَآ أَجِدُ مَآ أَحۡمِلُكُمۡ عَلَيۡهِ تَوَلَّواْ وَّأَعۡيُنُهُمۡ تَفِيضُ مِنَ ٱلدَّمۡعِ حَزَنًا أَلَّا يَجِدُواْ مَا يُنفِقُونَ

ನೀವು ಅವರೆಡೆಗೆ ಮರಳಿದಾಗ, ಅವರು ವಿವಿಧ ನೆಪಗಳೊಂದಿಗೆ ನಿಮ್ಮ ಬಳಿಗೆ ಬರುವರು. ಹೇಳಿರಿ; ನೀವು ನೆಪಗಳನ್ನೊಡ್ಡಬೇಡಿ. ನಾವು ನಿಮ್ಮನ್ನು ನಂಬುವುದಿಲ್ಲ. ಏಕೆಂದರೆ ನಿಮ್ಮ ವಿಷಯವನ್ನು ಅಲ್ಲಾಹನು ನಮಗೆ ತಿಳಿಸಿರುವನು. ಅಲ್ಲಾಹನು ಮತ್ತು ಅವನ ದೂತರು ನಿಮ್ಮ ಕರ್ಮಗಳನ್ನು ನೋಡುವರು. ಕೊನೆಗೆ, ಗುಪ್ತವಾಗಿರುವ ಹಾಗೂ ಬಹಿರಂಗವಾಗಿರುವ ಎಲ್ಲವನ್ನೂ ಬಲ್ಲವನ ಕಡೆಗೆ ನಿಮ್ಮನ್ನು ಮರಳಿಸಲಾಗುವುದು. ನೀವು ಏನೆಲ್ಲಾ ಮಾಡುತ್ತಿದ್ದಿರಿ ಎಂಬುದನ್ನು ಅವನು ನಿಮಗೆ ತಿಳಿಸುವನು
Surah At-Taubah, Verse 92


۞إِنَّمَا ٱلسَّبِيلُ عَلَى ٱلَّذِينَ يَسۡتَـٔۡذِنُونَكَ وَهُمۡ أَغۡنِيَآءُۚ رَضُواْ بِأَن يَكُونُواْ مَعَ ٱلۡخَوَالِفِ وَطَبَعَ ٱللَّهُ عَلَىٰ قُلُوبِهِمۡ فَهُمۡ لَا يَعۡلَمُونَ

ನೀವು ಅವರೆಡೆಗೆ ಮರಳಿದಾಗ, ಅವರನ್ನು ಬಿಟ್ಟು ಬಿಡಬೇಕೆಂದು ಅವರು ನಿಮ್ಮ ಬಳಿ ಅಲ್ಲಾಹನ ಹೆಸರಲ್ಲಿ ಆಣೆಗಳನ್ನು ಹಾಕಿ ಬೇಡುವರು. ನೀವು ಅವರನ್ನು ಬಿಟ್ಟು ಬಿಡಿರಿ. ಅವರು ಮಲಿನರು. ನರಕವೇ ಅವರ ನೆಲೆ. ಅದುವೇ ಅವರು ಸಂಪಾದಿಸಿದ್ದರ ಫಲ
Surah At-Taubah, Verse 93


يَعۡتَذِرُونَ إِلَيۡكُمۡ إِذَا رَجَعۡتُمۡ إِلَيۡهِمۡۚ قُل لَّا تَعۡتَذِرُواْ لَن نُّؤۡمِنَ لَكُمۡ قَدۡ نَبَّأَنَا ٱللَّهُ مِنۡ أَخۡبَارِكُمۡۚ وَسَيَرَى ٱللَّهُ عَمَلَكُمۡ وَرَسُولُهُۥ ثُمَّ تُرَدُّونَ إِلَىٰ عَٰلِمِ ٱلۡغَيۡبِ وَٱلشَّهَٰدَةِ فَيُنَبِّئُكُم بِمَا كُنتُمۡ تَعۡمَلُونَ

ಅವರ ಕುರಿತು ನೀವು ಸಂತುಷ್ಟರಾಗಬೇಕೆಂದು ಅವರು ನಿಮ್ಮೆದುರು ಆಣೆಗಳನ್ನು ಹಾಕುತ್ತಾರೆ. ಒಂದು ವೇಳೆ ನೀವು ಅವರ ಕುರಿತು ಸಂತುಷ್ಟರಾಗಿ ಬಿಟ್ಟರೂ ಅಲ್ಲಾಹನು ಮಾತ್ರ ಅವಿಧೇಯರ ಕುರಿತು ಖಂಡಿತ ಸಂತುಷ್ಟನಾಗುವುದಿಲ್ಲ
Surah At-Taubah, Verse 94


سَيَحۡلِفُونَ بِٱللَّهِ لَكُمۡ إِذَا ٱنقَلَبۡتُمۡ إِلَيۡهِمۡ لِتُعۡرِضُواْ عَنۡهُمۡۖ فَأَعۡرِضُواْ عَنۡهُمۡۖ إِنَّهُمۡ رِجۡسٞۖ وَمَأۡوَىٰهُمۡ جَهَنَّمُ جَزَآءَۢ بِمَا كَانُواْ يَكۡسِبُونَ

ಅಲೆಮಾರಿ ಅರಬರು ಧಿಕ್ಕಾರ ಹಾಗೂ ಕಾಪಟ್ಯದಲ್ಲಿ ಹೆಚ್ಚು ಕಠೋರರಾಗಿರುತ್ತಾರೆ. ಅಲ್ಲಾಹನು ತನ್ನ ದೂತರಿಗೆ ಇಳಿಸಿಕೊಟ್ಟಿರುವ, ಆದೇಶಗಳ ಕುರಿತು ಅವರಿಗೆ ತಿಳಿಯದೆ ಇರುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲಾಹನಂತು ಎಲ್ಲವನ್ನೂ ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ
Surah At-Taubah, Verse 95


يَحۡلِفُونَ لَكُمۡ لِتَرۡضَوۡاْ عَنۡهُمۡۖ فَإِن تَرۡضَوۡاْ عَنۡهُمۡ فَإِنَّ ٱللَّهَ لَا يَرۡضَىٰ عَنِ ٱلۡقَوۡمِ ٱلۡفَٰسِقِينَ

ಅಲೆಮಾರಿಗಳಲ್ಲಿ ಕೆಲವರು, ತಾವು (ಅಲ್ಲಾಹನ ಮಾರ್ಗದಲ್ಲಿ) ಮಾಡುವ ಖರ್ಚನ್ನು ದಂಡವೆಂದು ಪರಿಗಣಿಸುತ್ತಾರೆ ಮತ್ತು ಅವರು ನಿಮ್ಮ ಮೇಲೆ ವಿಪತ್ತುಗಳು ಬಂದೆರಗುವುದಕ್ಕಾಗಿ ಕಾಯುತ್ತಿದ್ದಾರೆ. ಕೆಟ್ಟ ವಿಪತ್ತುಗಳೆಲ್ಲಾ ಅವರ ಮೇಲೆಯೇ ಎರಗಲಿವೆ. ಅಲ್ಲಾಹನು ಎಲ್ಲವನ್ನೂ ಕೇಳುವವನು ಮತ್ತು ಬಲ್ಲವನಾಗಿದ್ದಾನೆ
Surah At-Taubah, Verse 96


ٱلۡأَعۡرَابُ أَشَدُّ كُفۡرٗا وَنِفَاقٗا وَأَجۡدَرُ أَلَّا يَعۡلَمُواْ حُدُودَ مَآ أَنزَلَ ٱللَّهُ عَلَىٰ رَسُولِهِۦۗ وَٱللَّهُ عَلِيمٌ حَكِيمٞ

ಹಾಗೆಯೇ, ಅಲೆಮಾರಿಗಳಲ್ಲಿ, ಅಲ್ಲಾಹ್ ಮತ್ತು ಪರಲೋಕದಲ್ಲಿ ನಂಬಿಕೆ ಉಳ್ಳವರೂ ಇದ್ದಾರೆ. ಅವರು ತಾವು ಮಾಡುವ ಖರ್ಚನ್ನು ಅಲ್ಲಾಹನ ಸಾಮೀಪ್ಯವನ್ನು ಸಂಪಾದಿಸುವುದಕ್ಕೆ ಹಾಗೂ ದೇವದೂತರ ಪ್ರಾರ್ಥನೆಯನ್ನು ಪಡೆಯುವುದಕ್ಕೆ ಸಾಧನವೆಂದು ಪರಿಗಣಿಸುತ್ತಾರೆ. ತಿಳಿದಿರಲಿ! ಖಂಡಿತವಾಗಿಯೂ ಅದು ಅವರ ಪಾಲಿಗೆ ಸಾಮೀಪ್ಯದ ಸಾಧನವಾಗಿದೆ. ಅಲ್ಲಾಹನು ಅವರನ್ನು ತನ್ನ ಅನುಗ್ರಹದೊಳಗೆ ಸೇರಿಸುವನು. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಮತ್ತು ಕರುಣಾಳುವಾಗಿದ್ದಾನೆ
Surah At-Taubah, Verse 97


وَمِنَ ٱلۡأَعۡرَابِ مَن يَتَّخِذُ مَا يُنفِقُ مَغۡرَمٗا وَيَتَرَبَّصُ بِكُمُ ٱلدَّوَآئِرَۚ عَلَيۡهِمۡ دَآئِرَةُ ٱلسَّوۡءِۗ وَٱللَّهُ سَمِيعٌ عَلِيمٞ

ಮುಹಾಜಿರ್ ಮತ್ತು ಅನ್ಸಾರ್‌ಗಳ ಪೈಕಿ (ಸತ್ಯ ಸ್ವೀಕಾರದಲ್ಲಿ) ಇತರೆಲ್ಲರಿಗಿಂತ ಮೊದಲಿಗರಾದವರು ಮತ್ತು ಅತ್ಯುತ್ತಮ ರೀತಿಯಲ್ಲಿ ಅವರನ್ನು ಅನುಸರಿಸಿದವರು – ಅವರಿಂದ ಅಲ್ಲಾಹನು ಸಂತುಷ್ಟನಾದನು ಮತ್ತು ಅವರು ಅಲ್ಲಾಹನಿಂದ ಸಂತುಷ್ಟರಾದರು. ಅವನು ಅವರಿಗಾಗಿ, ತಳಭಾಗದಲ್ಲಿ ನದಿಗಳು ಹರಿಯುತ್ತಿರುವಂತಹ ಸ್ವರ್ಗ ತೋಟಗಳನ್ನು ಸಿಧ್ಧಗೊಳಿಸಿಟ್ಟಿರುವನು. ಅವರು ಅವುಗಳಲ್ಲಿ ಸದಾಕಾಲ ಇರುವರು. ಇದು ನಿಜಕ್ಕೂ ಮಹಾ ವಿಜಯವಾಗಿದೆ
Surah At-Taubah, Verse 98


وَمِنَ ٱلۡأَعۡرَابِ مَن يُؤۡمِنُ بِٱللَّهِ وَٱلۡيَوۡمِ ٱلۡأٓخِرِ وَيَتَّخِذُ مَا يُنفِقُ قُرُبَٰتٍ عِندَ ٱللَّهِ وَصَلَوَٰتِ ٱلرَّسُولِۚ أَلَآ إِنَّهَا قُرۡبَةٞ لَّهُمۡۚ سَيُدۡخِلُهُمُ ٱللَّهُ فِي رَحۡمَتِهِۦٓۚ إِنَّ ٱللَّهَ غَفُورٞ رَّحِيمٞ

ನಿಮ್ಮ ಸುತ್ತ ಮುತ್ತಲಿರುವ ಅಲೆಮಾರಿಗಳ ಪೈಕಿ ಕೆಲವರು ಕಪಟಿಗಳು. ಹಾಗೆಯೇ ಮದೀನಾದವರಲ್ಲೂ ಕೆಲವರು ಕಾಪಟ್ಯಕ್ಕೆ ಅಂಟಿಕೊಂಡಿರುವರು. ನೀವು ಅವರನ್ನು ಬಲ್ಲವರಲ್ಲ. ನಾವು ಅವರನ್ನು ಬಲ್ಲೆವು. ನಾವು ಅವರನ್ನು ಎರಡೆರಡು ಬಾರಿ ಶಿಕ್ಷಿಸುವೆವು ಮತ್ತು ಕೊನೆಗೆ ಅವರನ್ನು ಮಹಾ ಶಿಕ್ಷೆಯೆಡೆಗೆ ಮರಳಿಸಲಾಗುವುದು
Surah At-Taubah, Verse 99


وَٱلسَّـٰبِقُونَ ٱلۡأَوَّلُونَ مِنَ ٱلۡمُهَٰجِرِينَ وَٱلۡأَنصَارِ وَٱلَّذِينَ ٱتَّبَعُوهُم بِإِحۡسَٰنٖ رَّضِيَ ٱللَّهُ عَنۡهُمۡ وَرَضُواْ عَنۡهُ وَأَعَدَّ لَهُمۡ جَنَّـٰتٖ تَجۡرِي تَحۡتَهَا ٱلۡأَنۡهَٰرُ خَٰلِدِينَ فِيهَآ أَبَدٗاۚ ذَٰلِكَ ٱلۡفَوۡزُ ٱلۡعَظِيمُ

(ಅವರಲ್ಲಿ) ಮತ್ತೆ ಕೆಲವರಿದ್ದಾರೆ – ತಮ್ಮ ಪಾಪಗಳನ್ನು ಒಪ್ಪಿಕೊಳ್ಳುವವರು. ಅವರು ಸತ್ಕರ್ಮದ ಜೊತೆ ಪಾಪ ಕರ್ಮವನ್ನು ಬೆರೆಸಿಕೊಂಡಿರುವರು. ಅಲ್ಲಾಹನು ಅವರನ್ನು ಕ್ಷಮಿಸುವ ನಿರೀಕ್ಷೆ ಇದೆ. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಮತ್ತು ಕರುಣಾಳುವಾಗಿದ್ದಾನೆ
Surah At-Taubah, Verse 100


وَمِمَّنۡ حَوۡلَكُم مِّنَ ٱلۡأَعۡرَابِ مُنَٰفِقُونَۖ وَمِنۡ أَهۡلِ ٱلۡمَدِينَةِ مَرَدُواْ عَلَى ٱلنِّفَاقِ لَا تَعۡلَمُهُمۡۖ نَحۡنُ نَعۡلَمُهُمۡۚ سَنُعَذِّبُهُم مَّرَّتَيۡنِ ثُمَّ يُرَدُّونَ إِلَىٰ عَذَابٍ عَظِيمٖ

(ದೂತರೇ,) ನೀವು ಅವರ ಸಂಪತ್ತುಗಳಿಂದ (ಕಡ್ಡಾಯ) ದಾನವನ್ನು ಸಂಗ್ರಹಿಸಿರಿ ಮತ್ತು ಆ ಮೂಲಕ ಅವರನ್ನು ನಿರ್ಮಲಗೊಳಿಸಿರಿ ಹಾಗೂ ಶುದ್ಧೀಕರಿಸಿರಿ ಮತ್ತು ಅವರ ಪರವಾಗಿ ಪ್ರಾರ್ಥಿಸಿರಿ. ನಿಮ್ಮ ಪ್ರಾರ್ಥನೆಯು ಅವರ ಪಾಲಿಗೆ ಶಾಂತಿದಾಯಕವಾಗಿರುತ್ತದೆ. ಅಲ್ಲಾಹನಂತು ಎಲ್ಲವನ್ನೂ ಕೇಳುವವನು ಹಾಗೂ ಬಲ್ಲವನಾಗಿದ್ದಾನೆ
Surah At-Taubah, Verse 101


وَءَاخَرُونَ ٱعۡتَرَفُواْ بِذُنُوبِهِمۡ خَلَطُواْ عَمَلٗا صَٰلِحٗا وَءَاخَرَ سَيِّئًا عَسَى ٱللَّهُ أَن يَتُوبَ عَلَيۡهِمۡۚ إِنَّ ٱللَّهَ غَفُورٞ رَّحِيمٌ

ಅವರಿಗೆ ತಿಳಿದಿಲ್ಲವೇ, ಅಲ್ಲಾಹನೇ ತನ್ನ ದಾಸರಿಂದ ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಅವರ ದಾನಗಳಿಗೆ ಮನ್ನಣೆ ನೀಡುವವನೆಂದು? ನಿಜಕ್ಕೂ ಅಲ್ಲಾಹನೇ ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
Surah At-Taubah, Verse 102


خُذۡ مِنۡ أَمۡوَٰلِهِمۡ صَدَقَةٗ تُطَهِّرُهُمۡ وَتُزَكِّيهِم بِهَا وَصَلِّ عَلَيۡهِمۡۖ إِنَّ صَلَوٰتَكَ سَكَنٞ لَّهُمۡۗ وَٱللَّهُ سَمِيعٌ عَلِيمٌ

ಹೇಳಿರಿ; ನೀವು ಕರ್ಮ ಮಾಡಿರಿ. ಅಲ್ಲಾಹ್, ಅವನ ದೂತರು ಮತ್ತು ವಿಶ್ವಾಸಿಗಳು ನಿಮ್ಮ ಕರ್ಮವನ್ನು ನೋಡುವರು. ಕೊನೆಗೆ ನಿಮ್ಮನ್ನು, ಗುಪ್ತವಾಗಿರುವ ಹಾಗೂ ಬಹಿರಂಗವಾಗಿರುವ ಎಲ್ಲವನ್ನೂ ಬಲ್ಲವನ ಬಳಿಗೆ ಮರಳಿಸಲಾಗುವುದು. ಆಗ ನೀವು ಏನೆಲ್ಲಾ ಮಾಡುತ್ತಿದ್ದಿರಿ ಎಂಬುದನ್ನು ಅವನು ನಿಮಗೆ ತಿಳಿಸುವನು
Surah At-Taubah, Verse 103


أَلَمۡ يَعۡلَمُوٓاْ أَنَّ ٱللَّهَ هُوَ يَقۡبَلُ ٱلتَّوۡبَةَ عَنۡ عِبَادِهِۦ وَيَأۡخُذُ ٱلصَّدَقَٰتِ وَأَنَّ ٱللَّهَ هُوَ ٱلتَّوَّابُ ٱلرَّحِيمُ

ಮತ್ತೆ ಕೆಲವರಿದ್ದಾರೆ. ಅವರು, ಅಲ್ಲಾಹನು ತಮ್ಮನ್ನು ಶಿಕ್ಷಿಸುವನೋ ಅಥವಾ ತಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸುವನೋ ಎಂದು ಅವನ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಅಲ್ಲಾಹನೇ ಬಲ್ಲವನು ಮತ್ತು ಯುಕ್ತಿವಂತನು
Surah At-Taubah, Verse 104


وَقُلِ ٱعۡمَلُواْ فَسَيَرَى ٱللَّهُ عَمَلَكُمۡ وَرَسُولُهُۥ وَٱلۡمُؤۡمِنُونَۖ وَسَتُرَدُّونَ إِلَىٰ عَٰلِمِ ٱلۡغَيۡبِ وَٱلشَّهَٰدَةِ فَيُنَبِّئُكُم بِمَا كُنتُمۡ تَعۡمَلُونَ

ಹಾನಿಮಾಡುವುದಕ್ಕಾಗಿ, ಧಿಕ್ಕಾರಕ್ಕಾಗಿ ಮತ್ತು ವಿಶ್ವಾಸಿಗಳ ನಡುವೆ ಬಿಕ್ಕಟ್ಟು ಬೆಳೆಸಲಿಕ್ಕಾಗಿ ಹಾಗೂ ಈ ಹಿಂದೆ ಅಲ್ಲಾಹ್ ಮತ್ತು ಅವನ ದೂತರ ವಿರುದ್ಧ ಯುಧ್ಧ ಸಾರಿದ್ದ ವ್ಯಕ್ತಿಗೆ ಹೊಂಚಿನ ಸ್ಥಳವಾಗಿ ಮಸೀದಿಯನ್ನು ಬಳಸಿಕೊಂಡವರು – ತಾವು ಒಳಿತನ್ನು ಮಾತ್ರ ಬಯಸಿದ್ದೆವೆಂದು ಆಣೆ ಹಾಕಿ ಹೇಳುವರು. ಆದರೆ ಖಂಡಿತವಾಗಿಯೂ ಅವರು ಸುಳ್ಳುಗಾರರೆಂದು ಅಲ್ಲಾಹನು ಸಾಕ್ಷಿ ಹೇಳುತ್ತಾನೆ
Surah At-Taubah, Verse 105


وَءَاخَرُونَ مُرۡجَوۡنَ لِأَمۡرِ ٱللَّهِ إِمَّا يُعَذِّبُهُمۡ وَإِمَّا يَتُوبُ عَلَيۡهِمۡۗ وَٱللَّهُ عَلِيمٌ حَكِيمٞ

ನೀವು ಅದರಲ್ಲಿ (ಆ ಮಸೀದಿಯಲ್ಲಿ) ಖಂಡಿತ ನಿಲ್ಲಬೇಡಿ. ಪ್ರಥಮ ದಿನದಿಂದಲೇ ದೇವಭಯದ ಬುನಾದಿಯಲ್ಲಿ ನಿರ್ಮಿಸಲಾಗಿರುವ ಮಸೀದಿಯು, ನೀವು ನಿಲ್ಲುವುದಕ್ಕೆ ಹೆಚ್ಚು ಅರ್ಹವಾಗಿದೆ. ಅದರಲ್ಲಿರುವವರು, ತಾವು ಸದಾ ನಿರ್ಮಲರಾಗಿರಬೇಕೆಂದು ಅಪೇಕ್ಷಿಸುತ್ತಾರೆ ಮತ್ತು ಅಲ್ಲಾಹನು ನಿರ್ಮಲರಾಗಿ ಇರುವವರನ್ನು ಪ್ರೀತಿಸುತ್ತಾನೆ
Surah At-Taubah, Verse 106


وَٱلَّذِينَ ٱتَّخَذُواْ مَسۡجِدٗا ضِرَارٗا وَكُفۡرٗا وَتَفۡرِيقَۢا بَيۡنَ ٱلۡمُؤۡمِنِينَ وَإِرۡصَادٗا لِّمَنۡ حَارَبَ ٱللَّهَ وَرَسُولَهُۥ مِن قَبۡلُۚ وَلَيَحۡلِفُنَّ إِنۡ أَرَدۡنَآ إِلَّا ٱلۡحُسۡنَىٰۖ وَٱللَّهُ يَشۡهَدُ إِنَّهُمۡ لَكَٰذِبُونَ

ತನ್ನ ಕಟ್ಟಡವನ್ನು ಅಲ್ಲಾಹನ ಭಯ ಹಾಗೂ ಅವನ ಮೆಚ್ಚುಗೆಯ ಬುನಾದಿಯ ಮೇಲೆ ಕಟ್ಟಿದವನು ಶ್ರೇಷ್ಠನೋ, ಅಥವಾ ಅವನನ್ನೂ ಹೊತ್ತು ನರಕಕ್ಕೆ ಕುಸಿದು ಬೀಳಲಿರುವ, ಭಾರೀ ಹೊಂಡವೊಂದರ ಅಸ್ಥಿರ ಅಂಚಿನಲ್ಲಿರುವ ಬುನಾದಿಯ ಮೇಲೆ ತನ್ನ ಕಟ್ಟಡವನ್ನು ಕಟ್ಟಿದವನು ಶ್ರೇಷ್ಠನೋ? ಅಕ್ರಮಿಗಳ ಪಂಗಡಕ್ಕೆ ಅಲ್ಲಾಹನು ಸರಿದಾರಿ ತೋರಿಸುವುದಿಲ್ಲ
Surah At-Taubah, Verse 107


لَا تَقُمۡ فِيهِ أَبَدٗاۚ لَّمَسۡجِدٌ أُسِّسَ عَلَى ٱلتَّقۡوَىٰ مِنۡ أَوَّلِ يَوۡمٍ أَحَقُّ أَن تَقُومَ فِيهِۚ فِيهِ رِجَالٞ يُحِبُّونَ أَن يَتَطَهَّرُواْۚ وَٱللَّهُ يُحِبُّ ٱلۡمُطَّهِّرِينَ

ಅವರು ಕಟ್ಟಿರುವ ಕಟ್ಟಡವು, ಅವರ ಮನಸ್ಸುಗಳು ಛಿದ್ರವಾಗಿ ಬಿಡುವ ತನಕವೂ ಅವರ ಮನಸ್ಸುಗಳಲ್ಲಿ ಸಂಶಯವನ್ನು ಬಿತ್ತುತ್ತಲೇ ಇರುವುದು – ಅಲ್ಲಾಹನು ಎಲ್ಲವನ್ನೂ ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ
Surah At-Taubah, Verse 108


أَفَمَنۡ أَسَّسَ بُنۡيَٰنَهُۥ عَلَىٰ تَقۡوَىٰ مِنَ ٱللَّهِ وَرِضۡوَٰنٍ خَيۡرٌ أَم مَّنۡ أَسَّسَ بُنۡيَٰنَهُۥ عَلَىٰ شَفَا جُرُفٍ هَارٖ فَٱنۡهَارَ بِهِۦ فِي نَارِ جَهَنَّمَۗ وَٱللَّهُ لَا يَهۡدِي ٱلۡقَوۡمَ ٱلظَّـٰلِمِينَ

ಖಂಡಿತವಾಗಿಯೂ ಅಲ್ಲಾಹನು ವಿಶ್ವಾಸಿಗಳಿಂದ ಅವರ ಜೀವಗಳನ್ನು ಮತ್ತು ಅವರ ಸೊತ್ತುಗಳನ್ನು ಖರೀದಿಸಿರುವನು – ಅವರಿಗೆ ಸ್ವರ್ಗವನ್ನು ನೀಡಲಿಕ್ಕಾಗಿ. ಅವರು ಅಲ್ಲಾಹನ ಮಾರ್ಗದಲ್ಲೇ ಹೋರಾಡುತ್ತಾರೆ, ವಧಿಸುತ್ತಾರೆ ಮತ್ತು ವಧಿಸಲ್ಪಡುತ್ತಾರೆ. ತೌರಾತ್, ಇಂಜೀಲ್ ಮತ್ತು ಕುರ್‌ಆನ್‌ನಲ್ಲಿ ಅವರಿಗೆ ನೀಡಲಾಗಿರುವ ವಾಗ್ದಾನವು ಸತ್ಯವಾಗಿದೆ. ಅಲ್ಲಾಹನಿಗಿಂತ ಉತ್ತಮವಾಗಿ ತನ್ನ ಕರಾರನ್ನು ಪಾಲಿಸುವವನು ಯಾರಿದ್ದಾನೆ? ಆದ್ದರಿಂದ ಅವನ ಜೊತೆ ನೀವು ಮಾಡಿಕೊಂಡಿರುವ ವ್ಯವಹಾರಕ್ಕಾಗಿ ಸಂಭ್ರಮಿಸಿರಿ. ಇದು ನಿಜಕ್ಕೂ ಮಹಾ ವಿಜಯವಾಗಿದೆ
Surah At-Taubah, Verse 109


لَا يَزَالُ بُنۡيَٰنُهُمُ ٱلَّذِي بَنَوۡاْ رِيبَةٗ فِي قُلُوبِهِمۡ إِلَّآ أَن تَقَطَّعَ قُلُوبُهُمۡۗ وَٱللَّهُ عَلِيمٌ حَكِيمٌ

ಪದೇ ಪದೇ ಪಶ್ಚಾತ್ತಾಪ ಪಡುವವರು, ಆರಾಧಿಸುತ್ತಿರುವವರು, (ಅಲ್ಲಾಹನ) ಗುಣಗಾನ ಮಾಡುತ್ತಿರುವವರು, (ಅಲ್ಲಾಹನ ಮಾರ್ಗದಲ್ಲಿ) ಉಪವಾಸ ಆಚರಿಸುತ್ತಿರುವವರು, (ಅಲ್ಲಾಹನಿಗೆ) ಬಾಗುತ್ತಿರುವವರು, ಸಾಷ್ಟಾಂಗ ವಂದಿಸುತ್ತಿರುವವರು, ಸತ್ಕಾರ್ಯವನ್ನು ಆದೇಶಿಸುತ್ತಿರುವವರು, ಕೆಡುಕಿನಿಂದ ತಡೆಯುತ್ತಿರುವವರು ಮತ್ತು ಅಲ್ಲಾಹನು ವಿಧಿಸಿರುವ ಮಿತಿ ಮೇರೆಗಳನ್ನು ಪಾಲಿಸುತ್ತಿರುವವರು – ಇಂತಹ ವಿಶ್ವಾಸಿಗಳಿಗೆ ಶುಭವಾರ್ತೆ ನೀಡಿರಿ
Surah At-Taubah, Verse 110


۞إِنَّ ٱللَّهَ ٱشۡتَرَىٰ مِنَ ٱلۡمُؤۡمِنِينَ أَنفُسَهُمۡ وَأَمۡوَٰلَهُم بِأَنَّ لَهُمُ ٱلۡجَنَّةَۚ يُقَٰتِلُونَ فِي سَبِيلِ ٱللَّهِ فَيَقۡتُلُونَ وَيُقۡتَلُونَۖ وَعۡدًا عَلَيۡهِ حَقّٗا فِي ٱلتَّوۡرَىٰةِ وَٱلۡإِنجِيلِ وَٱلۡقُرۡءَانِۚ وَمَنۡ أَوۡفَىٰ بِعَهۡدِهِۦ مِنَ ٱللَّهِۚ فَٱسۡتَبۡشِرُواْ بِبَيۡعِكُمُ ٱلَّذِي بَايَعۡتُم بِهِۦۚ وَذَٰلِكَ هُوَ ٱلۡفَوۡزُ ٱلۡعَظِيمُ

ಬಹುದೇವಾರಾಧಕರು ತಮ್ಮ ಆಪ್ತ ಬಂಧುಗಳೇ ಆಗಿದ್ದರೂ, ಅವರು ನರಕದವರೆಂಬುದು ತಮಗೆ ಸ್ಪಷ್ಟವಾದ ಬಳಿಕ ಅವರ ಪರವಾಗಿ ಕ್ಷಮೆಯಾಚಿಸುವುದು ದೇವದೂತರಿಗಾಗಲಿ ವಿಶ್ವಾಸಿಗಳಿಗಾಗಲಿ ಭೂಷಣವಲ್ಲ
Surah At-Taubah, Verse 111


ٱلتَّـٰٓئِبُونَ ٱلۡعَٰبِدُونَ ٱلۡحَٰمِدُونَ ٱلسَّـٰٓئِحُونَ ٱلرَّـٰكِعُونَ ٱلسَّـٰجِدُونَ ٱلۡأٓمِرُونَ بِٱلۡمَعۡرُوفِ وَٱلنَّاهُونَ عَنِ ٱلۡمُنكَرِ وَٱلۡحَٰفِظُونَ لِحُدُودِ ٱللَّهِۗ وَبَشِّرِ ٱلۡمُؤۡمِنِينَ

ಇಬ್ರಾಹೀಮರು ತಮ್ಮ ತಂದೆಯ ಪರವಾಗಿ ನಡೆಸಿದ ಕ್ಷಮಾಯಾಚನೆಯು, ಅವರು ಆತನಿಗೆ ನೀಡಿದ್ದ ಒಂದು ವಾಗ್ದಾನದ ಪಾಲನೆ ಮಾತ್ರವಾಗಿತ್ತು. ಕೊನೆಗೆ, ಆತನು ಅಲ್ಲಾಹನ ಶತ್ರುವೆಂಬುದು ಅವರಿಗೆ ಸ್ಪಷ್ಟವಾದಾಗ ಅವರು ಆತನಿಂದ ದೂರ ಉಳಿದರು. ಖಂಡಿತವಾಗಿಯೂ ಇಬ್ರಾಹೀಮರು ತುಂಬಾ ಮೃದು ಸ್ವಭಾವದವರು ಹಾಗೂ ಸಂಯಮಿಯಾಗಿದ್ದರು
Surah At-Taubah, Verse 112


مَا كَانَ لِلنَّبِيِّ وَٱلَّذِينَ ءَامَنُوٓاْ أَن يَسۡتَغۡفِرُواْ لِلۡمُشۡرِكِينَ وَلَوۡ كَانُوٓاْ أُوْلِي قُرۡبَىٰ مِنۢ بَعۡدِ مَا تَبَيَّنَ لَهُمۡ أَنَّهُمۡ أَصۡحَٰبُ ٱلۡجَحِيمِ

ಅಲ್ಲಾಹನು ಯಾವುದೇ ಜನಾಂಗಕ್ಕೆ ಸರಿದಾರಿ ತೋರಿದ ಬಳಿಕ, ಅವರು ಯಾವುದರಿಂದ ದೂರವಿರಬೇಕು ಎಂಬುದನ್ನು ಅವರಿಗೆ ಸ್ಪಷ್ಟ ಪಡಿಸುವ ತನಕ ಅವರನ್ನು ದಾರಿಗೆಡಿಸುವುದಿಲ್ಲ. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ
Surah At-Taubah, Verse 113


وَمَا كَانَ ٱسۡتِغۡفَارُ إِبۡرَٰهِيمَ لِأَبِيهِ إِلَّا عَن مَّوۡعِدَةٖ وَعَدَهَآ إِيَّاهُ فَلَمَّا تَبَيَّنَ لَهُۥٓ أَنَّهُۥ عَدُوّٞ لِّلَّهِ تَبَرَّأَ مِنۡهُۚ إِنَّ إِبۡرَٰهِيمَ لَأَوَّـٰهٌ حَلِيمٞ

ಖಂಡಿತವಾಗಿಯೂ ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅವನೇ ಜೀವನ ನೀಡುವವನು ಮತ್ತು ಅವನೇ ಮರಣ ನೀಡುವವನು. ನಿಮಗೆ ಅಲ್ಲಾಹನ ಹೊರತು ಬೇರೆ ಯಾರೂ ಪೋಷಕರಾಗಲಿ, ಸಹಾಯಕರಾಗಲಿ ಇಲ್ಲ
Surah At-Taubah, Verse 114


وَمَا كَانَ ٱللَّهُ لِيُضِلَّ قَوۡمَۢا بَعۡدَ إِذۡ هَدَىٰهُمۡ حَتَّىٰ يُبَيِّنَ لَهُم مَّا يَتَّقُونَۚ إِنَّ ٱللَّهَ بِكُلِّ شَيۡءٍ عَلِيمٌ

ಅಲ್ಲಾಹನು, ದೇವದೂತರೆಡೆಗೆ ಹಾಗೂ ತುಂಬಾ ಕಠಿಣ ಕಾಲದಲ್ಲಿ ಅವರನ್ನು ಅನುಸರಿಸಿದ ‘ಮುಹಾಜಿರ್’ ಮತ್ತು ‘ಅನ್ಸಾರ್’ ಗಳೆಡೆಗೆ ಒಲವು ತೋರಿದನು. ಅವರಲ್ಲಿನ ಒಂದು ಗುಂಪಿನ ಮನಸ್ಸುಗಳು ದಾರಿಗೆಡುವುದರಲ್ಲಿದ್ದುವು. ಆ ಬಳಿಕ ಅವನು ಅವರೆಡೆಗೆ ಒಲವು ತೋರಿದನು.ಅವನು ಅವರ ಪಾಲಿಗೆ ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವನು
Surah At-Taubah, Verse 115


إِنَّ ٱللَّهَ لَهُۥ مُلۡكُ ٱلسَّمَٰوَٰتِ وَٱلۡأَرۡضِۖ يُحۡيِۦ وَيُمِيتُۚ وَمَا لَكُم مِّن دُونِ ٱللَّهِ مِن وَلِيّٖ وَلَا نَصِيرٖ

ಹಾಗೆಯೇ, ಯಾರ ಪ್ರಕರಣವನ್ನು ಮುಂದೂಡಲಾಗಿತ್ತೋ ಆ ಮೂವರು. ಭೂಮಿಯು ತನ್ನೆಲ್ಲಾ ವೈಶಾಲ್ಯದ ಹೊರತಾಗಿಯೂ ಅವರ ಪಾಲಿಗೆ ತೀರಾ ಸಂಕುಚಿತವಾಗಿ ಬಿಟ್ಟಿತ್ತು ಮತ್ತು ಅವರಿಗೆ ಸ್ವತಃ ತಮ್ಮ ಜೀವಗಳ ಕುರಿತು ಜಿಗುಪ್ಸೆ ಉಂಟಾಗಿತ್ತು. ಅಲ್ಲಾಹನೆಡೆಗೆ ಒಲಿಯುವುದನ್ನು ಬಿಟ್ಟರೆ, (ತಮಗೆ) ಅವನ ಕಡೆಯಿಂದ ಬೇರಾವುದೇ ಆಶ್ರಯ ಇಲ್ಲ ಎಂಬುದನ್ನು ಅವರು ಮನಗಂಡಿದ್ದರು. ಕೊನೆಗೆ, ಅವರು ಪಶ್ಚಾತ್ತಾಪ ಪಡಲೆಂದು ಅವನು ಅವರೆಡೆಗೆ ಒಲವು ತೋರಿದನು. ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣಾಳುವಾಗಿದ್ದಾನೆ
Surah At-Taubah, Verse 116


لَّقَد تَّابَ ٱللَّهُ عَلَى ٱلنَّبِيِّ وَٱلۡمُهَٰجِرِينَ وَٱلۡأَنصَارِ ٱلَّذِينَ ٱتَّبَعُوهُ فِي سَاعَةِ ٱلۡعُسۡرَةِ مِنۢ بَعۡدِ مَا كَادَ يَزِيغُ قُلُوبُ فَرِيقٖ مِّنۡهُمۡ ثُمَّ تَابَ عَلَيۡهِمۡۚ إِنَّهُۥ بِهِمۡ رَءُوفٞ رَّحِيمٞ

ವಿಶ್ವಾಸಿಗಳೇ, ಸದಾ ಅಲ್ಲಾಹನಿಗೆ ಅಂಜಿರಿ ಮತ್ತು ನೀವು ಸತ್ಯವಂತರ ಜೊತೆಗಾರರಾಗಿರಿ
Surah At-Taubah, Verse 117


وَعَلَى ٱلثَّلَٰثَةِ ٱلَّذِينَ خُلِّفُواْ حَتَّىٰٓ إِذَا ضَاقَتۡ عَلَيۡهِمُ ٱلۡأَرۡضُ بِمَا رَحُبَتۡ وَضَاقَتۡ عَلَيۡهِمۡ أَنفُسُهُمۡ وَظَنُّوٓاْ أَن لَّا مَلۡجَأَ مِنَ ٱللَّهِ إِلَّآ إِلَيۡهِ ثُمَّ تَابَ عَلَيۡهِمۡ لِيَتُوبُوٓاْۚ إِنَّ ٱللَّهَ هُوَ ٱلتَّوَّابُ ٱلرَّحِيمُ

ಮದೀನಾದವರು ಹಾಗೂ ಅವರ ಸುತ್ತ ಮುತ್ತಲಿನ ಗ್ರಾಮೀಣ ಜನರು ಅಲ್ಲಾಹನ ದೂತರನ್ನು ಬಿಟ್ಟು ಹಿಂದುಳಿದುದು ಮತ್ತು ತಮ್ಮ ಜೀವಗಳನ್ನು ಅವರ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದು ಸರಿಯಲ್ಲ. ಏಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರು ಸಹಿಸುವ ಪ್ರತಿಯೊಂದು ದಾಹಕ್ಕೆ, ಪ್ರತಿಯೊಂದು ಸಂಕಷ್ಟಕ್ಕೆ, ಪ್ರತಿಯೊಂದು ಹಸಿವಿಗೆ, ಧಿಕ್ಕಾರಿಗಳ ಕೋಪಕ್ಕೆ ಕಾರಣವಾಗುವ ಅವರ ಪ್ರತಿಯೊಂದು ಹೆಜ್ಜೆಗೆ ಮತ್ತು ಶತ್ರುವಿನಿಂದ ಅವರು ಕಿತ್ತುಕೊಳ್ಳುವ ಪ್ರತಿಯೊಂದು ವಸ್ತುವಿಗೆ ಪ್ರತಿಯಾಗಿ ಅವರ ಪಾಲಿಗೆ ಒಂದು ಸತ್ಕರ್ಮವು ದಾಖಲಾಗದೆ ಇರುವುದಿಲ್ಲ. ಖಂಡಿತವಾಗಿಯೂ ಶ್ರೇಷ್ಠ ಕರ್ಮಗಳನ್ನು ಮಾಡುವವರ ಪ್ರತಿಫಲವನ್ನು ಅಲ್ಲಾಹನು ಖಂಡಿತ ವ್ಯರ್ಥ ಗೊಳಿಸುವುದಿಲ್ಲ
Surah At-Taubah, Verse 118


يَـٰٓأَيُّهَا ٱلَّذِينَ ءَامَنُواْ ٱتَّقُواْ ٱللَّهَ وَكُونُواْ مَعَ ٱلصَّـٰدِقِينَ

ಸಣ್ಣದಿರಲಿ, ದೊಡ್ಡದಿರಲಿ ಅವರು ಮಾಡಿದ ಪ್ರತಿಯೊಂದು ಖರ್ಚನ್ನು ಹಾಗೂ ಅವರು ಪ್ರತಿಯೊಂದು ಕಣಿವೆ ದಾಟಿದ್ದನ್ನು ಅವರ ಪರವಾಗಿ ದಾಖಲಿಸಿಡಲಾಗುತ್ತದೆ – ಅಲ್ಲಾಹನು ಅವರಿಗೆ, ಅವರು ಮಾಡಿರುವ ಎಲ್ಲ ಸತ್ಕರ್ಮಗಳ ಪ್ರತಿಫಲ ನೀಡಲಿಕ್ಕಾಗಿ
Surah At-Taubah, Verse 119


مَا كَانَ لِأَهۡلِ ٱلۡمَدِينَةِ وَمَنۡ حَوۡلَهُم مِّنَ ٱلۡأَعۡرَابِ أَن يَتَخَلَّفُواْ عَن رَّسُولِ ٱللَّهِ وَلَا يَرۡغَبُواْ بِأَنفُسِهِمۡ عَن نَّفۡسِهِۦۚ ذَٰلِكَ بِأَنَّهُمۡ لَا يُصِيبُهُمۡ ظَمَأٞ وَلَا نَصَبٞ وَلَا مَخۡمَصَةٞ فِي سَبِيلِ ٱللَّهِ وَلَا يَطَـُٔونَ مَوۡطِئٗا يَغِيظُ ٱلۡكُفَّارَ وَلَا يَنَالُونَ مِنۡ عَدُوّٖ نَّيۡلًا إِلَّا كُتِبَ لَهُم بِهِۦ عَمَلٞ صَٰلِحٌۚ إِنَّ ٱللَّهَ لَا يُضِيعُ أَجۡرَ ٱلۡمُحۡسِنِينَ

ವಿಶ್ವಾಸಿಗಳೆಲ್ಲರೂ ಒಟ್ಟಾಗಿ (ಹೋರಾಟಕ್ಕೆ) ಹೊರಟು ಬಿಡುವುದು ಸರಿಯಲ್ಲ. (ಇದರ ಬದಲು) ಅವರ ಪ್ರತಿಯೊಂದು ವಿಭಾಗದಲ್ಲಿನ ಒಂದು ಪಂಗಡವು, ಧರ್ಮ ಜ್ಞಾನಗಳಿಸಲಿಕ್ಕಾಗಿ ಹೊರಟು, ಮರಳಿ ಬಂದು ತಮ್ಮ ಜನಾಂಗದವರನ್ನು ಎಚ್ಚರಿಸಬಹುದಾಗಿತ್ತು. ಈ ರೀತಿ ಅವರು ಜಾಗೃತರಾಗಬಹುದು
Surah At-Taubah, Verse 120


وَلَا يُنفِقُونَ نَفَقَةٗ صَغِيرَةٗ وَلَا كَبِيرَةٗ وَلَا يَقۡطَعُونَ وَادِيًا إِلَّا كُتِبَ لَهُمۡ لِيَجۡزِيَهُمُ ٱللَّهُ أَحۡسَنَ مَا كَانُواْ يَعۡمَلُونَ

ವಿಶ್ವಾಸಿಗಳೇ, ಧಿಕ್ಕಾರಿಗಳ ಪೈಕಿ ನಿಮ್ಮ ಪಕ್ಕದಲ್ಲಿರುವವರ ವಿರುದ್ಧ (ಮೊದಲು) ಹೋರಾಡಿರಿ – ಅವರು ನಿಮ್ಮಲ್ಲಿ ಕಾಠಿಣ್ಯವನ್ನು ಕಾಣಲಿ. ನಿಮಗೆ ತಿಳಿದಿರಲಿ, ಖಂಡಿತವಾಗಿಯೂ ಅಲ್ಲಾಹನು ಸತ್ಯನಿಷ್ಠರ ಜೊತೆಗಿದ್ದಾನೆ
Surah At-Taubah, Verse 121


۞وَمَا كَانَ ٱلۡمُؤۡمِنُونَ لِيَنفِرُواْ كَآفَّةٗۚ فَلَوۡلَا نَفَرَ مِن كُلِّ فِرۡقَةٖ مِّنۡهُمۡ طَآئِفَةٞ لِّيَتَفَقَّهُواْ فِي ٱلدِّينِ وَلِيُنذِرُواْ قَوۡمَهُمۡ إِذَا رَجَعُوٓاْ إِلَيۡهِمۡ لَعَلَّهُمۡ يَحۡذَرُونَ

(ಕುರ್‌ಆನಿನ) ಯಾವುದೇ (ಹೊಸ) ಅಧ್ಯಾಯವನ್ನು ಇಳಿಸಲಾದಾಗ ಅವರಲ್ಲಿನ ಕೆಲವರು, ಇದು ನಿಮ್ಮ ಪೈಕಿ ಯಾರ ವಿಶ್ವಾಸವನ್ನು ಹೆಚ್ಚಿಸಿತು? ಎಂದು ಪ್ರಶ್ನಿಸುತ್ತಾರೆ. ನಿಜವಾಗಿ, ಅದು ವಿಶ್ವಾಸಿಗಳ ವಿಶ್ವಾಸವನ್ನು ಹೆಚ್ಚಿಸಿದೆ ಮತ್ತು ಅವರು ಅದರಿಂದ ಸಂತುಷ್ಟರಾಗಿದ್ದಾರೆ
Surah At-Taubah, Verse 122


يَـٰٓأَيُّهَا ٱلَّذِينَ ءَامَنُواْ قَٰتِلُواْ ٱلَّذِينَ يَلُونَكُم مِّنَ ٱلۡكُفَّارِ وَلۡيَجِدُواْ فِيكُمۡ غِلۡظَةٗۚ وَٱعۡلَمُوٓاْ أَنَّ ٱللَّهَ مَعَ ٱلۡمُتَّقِينَ

ಇನ್ನು, ಮನಸ್ಸುಗಳಲ್ಲಿ ರೋಗವಿರುವವರ ಮಾಲಿನ್ಯಕ್ಕೆ ಅದು ಮತ್ತಷ್ಟು ಮಾಲಿನ್ಯವನ್ನು ಸೇರಿಸಿದೆ ಮತ್ತು ಅವರು ಧಿಕ್ಕಾರಿಗಳಾಗಿರುವ ಸ್ಥಿತಿಯಲ್ಲೇ ಮೃತರಾಗಿದ್ದಾರೆ
Surah At-Taubah, Verse 123


وَإِذَا مَآ أُنزِلَتۡ سُورَةٞ فَمِنۡهُم مَّن يَقُولُ أَيُّكُمۡ زَادَتۡهُ هَٰذِهِۦٓ إِيمَٰنٗاۚ فَأَمَّا ٱلَّذِينَ ءَامَنُواْ فَزَادَتۡهُمۡ إِيمَٰنٗا وَهُمۡ يَسۡتَبۡشِرُونَ

ಪ್ರತಿ ವರ್ಷವೂ ಒಂದು ಅಥವಾ ಎರಡು ಬಾರಿ ಅವರನ್ನು ಪರೀಕ್ಷೆಗೆ ಗುರಿಪಡಿಸಲಾಗುತ್ತಿರುವುದನ್ನು ಅವರು ಕಾಣಲಿಲ್ಲವೇ? ಇಷ್ಟಾಗಿಯೂ ಅವರು ಪಶ್ಚಾತ್ತಾಪ ಪಡುವುದಿಲ್ಲ ಮತ್ತು ಪಾಠ ಕಲಿಯುವುದಿಲ್ಲ
Surah At-Taubah, Verse 124


وَأَمَّا ٱلَّذِينَ فِي قُلُوبِهِم مَّرَضٞ فَزَادَتۡهُمۡ رِجۡسًا إِلَىٰ رِجۡسِهِمۡ وَمَاتُواْ وَهُمۡ كَٰفِرُونَ

ಯಾವುದೇ (ಹೊಸ) ಅಧ್ಯಾಯವನ್ನು ಇಳಿಸಲಾದಾಗ ಅವರು (ಕಪಟಿಗಳು) ಪರಸ್ಪರರೆಡೆಗೆ ನೋಡುತ್ತಾರೆ ಹಾಗೂ ‘‘ಯಾರಾದರೂ ನಿಮ್ಮನ್ನು ನೋಡುತ್ತಿದ್ದಾರೆಯೇ?’’ ಎನ್ನುತ್ತಾ ಹೊರಟು ಹೋಗುತ್ತಾರೆ. ನಿಜವಾಗಿ ಅಲ್ಲಾಹನು ಅವರ ಮನಸ್ಸುಗಳನ್ನು ತಿರುಚಿ ಬಿಟ್ಟಿದ್ದಾನೆ. ಏಕೆಂದರೆ ಅವರು ವಿವೇಕವಿಲ್ಲದವರು
Surah At-Taubah, Verse 125


أَوَلَا يَرَوۡنَ أَنَّهُمۡ يُفۡتَنُونَ فِي كُلِّ عَامٖ مَّرَّةً أَوۡ مَرَّتَيۡنِ ثُمَّ لَا يَتُوبُونَ وَلَا هُمۡ يَذَّكَّرُونَ

ನಿಮ್ಮ ಬಳಿಗೆ ನಿಮ್ಮೊಳಗಿಂದಲೇ ಒಬ್ಬ ದೇವದೂತರು ಬಂದಿದ್ದಾರೆ. ನಿಮಗೆ ಎದುರಾಗುವ ಪ್ರತಿಯೊಂದು ತೊಂದರೆಯು ಅವರ ಪಾಲಿಗೆ ಕಠಿಣವಾಗಿರುತ್ತದೆ. ಅವರು ನಿಮ್ಮ ಹಿತಕ್ಕಾಗಿ ಹಂಬಲಿಸುವವರಾಗಿದ್ದಾರೆ ಮತ್ತು ವಿಶ್ವಾಸಿಗಳ ಪಾಲಿಗೆ ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಮಯಿಯಾಗಿದ್ದಾರೆ
Surah At-Taubah, Verse 126


وَإِذَا مَآ أُنزِلَتۡ سُورَةٞ نَّظَرَ بَعۡضُهُمۡ إِلَىٰ بَعۡضٍ هَلۡ يَرَىٰكُم مِّنۡ أَحَدٖ ثُمَّ ٱنصَرَفُواْۚ صَرَفَ ٱللَّهُ قُلُوبَهُم بِأَنَّهُمۡ قَوۡمٞ لَّا يَفۡقَهُونَ

(ದೂತರೇ,) ಅವರು ಕಡೆಗಣಿಸಿದರೆ ನೀವು ಹೇಳಿರಿ; ‘‘ನನಗೆ ಅಲ್ಲಾಹನೇ ಸಾಕು. ಅವನ ಹೊರತು ಬೇರೆ ದೇವರಿಲ್ಲ. ನಾನು ಅವನ ಮೇಲೆಯೇ ಸಂಪೂರ್ಣ ಭರವಸೆ ಇಟ್ಟಿದ್ದೇನೆ. ಅವನು ಮಹಾ ವಿಶ್ವ ಸಿಂಹಾಸನದ ಒಡೆಯ
Surah At-Taubah, Verse 127


لَقَدۡ جَآءَكُمۡ رَسُولٞ مِّنۡ أَنفُسِكُمۡ عَزِيزٌ عَلَيۡهِ مَا عَنِتُّمۡ حَرِيصٌ عَلَيۡكُم بِٱلۡمُؤۡمِنِينَ رَءُوفٞ رَّحِيمٞ

ಅಲಿಫ್ ಲಾಮ್ ರಾ. ಇವು ಯುಕ್ತಿ ಪೂರ್ಣ ಗ್ರಂಥದ ವಾಕ್ಯಗಳು
Surah At-Taubah, Verse 128


فَإِن تَوَلَّوۡاْ فَقُلۡ حَسۡبِيَ ٱللَّهُ لَآ إِلَٰهَ إِلَّا هُوَۖ عَلَيۡهِ تَوَكَّلۡتُۖ وَهُوَ رَبُّ ٱلۡعَرۡشِ ٱلۡعَظِيمِ

‘‘ಮಾನವರನ್ನು ಎಚ್ಚರಿಸಿರಿ ಮತ್ತು ವಿಶ್ವಾಸಿಗಳಿಗೆ, ಅವರ ಒಡೆಯನ ಬಳಿ ಸ್ಥಿರವಾದ ನೆಲೆ ಇದೆ ಎಂಬ ಶುಭವಾರ್ತೆ ನೀಡಿರಿ’’ ಎಂಬ ದಿವ್ಯವಾಣಿಯನ್ನು ನಾವು ಅವರೊಳಗಿನ ಒಬ್ಬ ವ್ಯಕ್ತಿಗೆ ನೀಡಿದೆವೆಂದು ಜನರಿಗೆ ಅಚ್ಚರಿಯಾಗಿ ಬಿಟ್ಟಿತೇ? ಧಿಕ್ಕಾರಿಗಳು, ಖಂಡಿತವಾಗಿಯೂ ಇದೊಂದು ಸ್ಪಷ್ಟ ಮಾಟಗಾರಿಕೆಯಾಗಿದೆ ಎಂದು ಬಿಟ್ಟರು
Surah At-Taubah, Verse 129


Author: Abdussalam Puthige


<< Surah 8
>> Surah 10

Kannada Translations by other Authors


Kannada Translation By Abdussalam Puthige
Kannada Translation By Abdussalam Puthige
Kannada Translation By Abdussalam Puthige
Popular Areas
Apartments for rent in Dubai Apartments for rent Abu Dhabi Villas for rent in Dubai House for rent Abu Dhabi Apartments for sale in Dubai Apartments for sale in Abu Dhabi Flat for rent Sharjah
Popular Searches
Studios for rent in UAE Apartments for rent in UAE Villas for rent in UAE Apartments for sale in UAE Villas for sale in UAE Land for sale in UAE Dubai Real Estate
Trending Areas
Apartments for rent in Dubai Marina Apartments for sale in Dubai Marina Villa for rent in Sharjah Villa for sale in Dubai Flat for rent in Ajman Studio for rent in Abu Dhabi Villa for rent in Ajman
Trending Searches
Villa for rent in Abu Dhabi Shop for rent in Dubai Villas for sale in Ajman Studio for rent in Sharjah 1 Bedroom Apartment for rent in Dubai Property for rent in Abu Dhabi Commercial properties for sale
© Copyright Dubai Prayer Time. All Rights Reserved
Designed by Prayer Time In Dubai