Surah At-Taubah Verse 38 - Kannada Translation by Abdussalam Puthige
Surah At-Taubahيَـٰٓأَيُّهَا ٱلَّذِينَ ءَامَنُواْ مَا لَكُمۡ إِذَا قِيلَ لَكُمُ ٱنفِرُواْ فِي سَبِيلِ ٱللَّهِ ٱثَّاقَلۡتُمۡ إِلَى ٱلۡأَرۡضِۚ أَرَضِيتُم بِٱلۡحَيَوٰةِ ٱلدُّنۡيَا مِنَ ٱلۡأٓخِرَةِۚ فَمَا مَتَٰعُ ٱلۡحَيَوٰةِ ٱلدُّنۡيَا فِي ٱلۡأٓخِرَةِ إِلَّا قَلِيلٌ
ನೀವು ಅವರಿಗೆ (ದೇವದೂತರಿಗೆ) ನೆರವಾಗದಿದ್ದರೆ, (ನಿಮಗೆ ತಿಳಿದಿರಲಿ,) ಧಿಕ್ಕಾರಿಗಳು ಅವರನ್ನು (ನಾಡಿನಿಂದ) ಹೊರಹಾಕಿದಾಗ ಅಲ್ಲಾಹನು ಅವರಿಗೆ ನೆರವಾಗಿರುವನು. (ಅಂದು) ಅವರು (ದೂತರು) ಇಬ್ಬರಲ್ಲಿ ಎರಡನೆಯವರಾಗಿದ್ದರು. ಅವರಿಬ್ಬರೂ ಗುಹೆಯಲ್ಲಿದ್ದಾಗ, ಅವರು (ದೂತರು) ತಮ್ಮ ಸಂಗಾತಿಯೊಡನೆ, ‘‘ಅಂಜಬೇಡ, ಖಂಡಿತವಾಗಿಯೂ ಅಲ್ಲಾಹನು ನಮ್ಮ ಜೊತೆಗಿದ್ದಾನೆ.’’ಎಂದಿದ್ದರು. ಕೊನೆಗೆ ಅಲ್ಲಾಹನು ಅವರಿಗೆ ಮನಃಶಾಂತಿಯನ್ನು ಇಳಿಸಿಕೊಟ್ಟನು ಮತ್ತು ನಿಮಗೆ ಕಾಣಿಸದ ಪಡೆಗಳ ಮೂಲಕ ಅವರಿಗೆ ಬಲ ಒದಗಿಸಿದನು. ಅಲ್ಲದೆ ಅವನು ಧಿಕ್ಕಾರಿಗಳ ಮಾತನ್ನು ಸೋಲಿಸಿದನು, ಅಲ್ಲಾಹನ ಮಾತೇ ಮೇಲಾಯಿತು. ಅಲ್ಲಾಹನು ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ