Surah At-Taubah Verse 40 - Kannada Translation by Abdussalam Puthige
Surah At-Taubahإِلَّا تَنصُرُوهُ فَقَدۡ نَصَرَهُ ٱللَّهُ إِذۡ أَخۡرَجَهُ ٱلَّذِينَ كَفَرُواْ ثَانِيَ ٱثۡنَيۡنِ إِذۡ هُمَا فِي ٱلۡغَارِ إِذۡ يَقُولُ لِصَٰحِبِهِۦ لَا تَحۡزَنۡ إِنَّ ٱللَّهَ مَعَنَاۖ فَأَنزَلَ ٱللَّهُ سَكِينَتَهُۥ عَلَيۡهِ وَأَيَّدَهُۥ بِجُنُودٖ لَّمۡ تَرَوۡهَا وَجَعَلَ كَلِمَةَ ٱلَّذِينَ كَفَرُواْ ٱلسُّفۡلَىٰۗ وَكَلِمَةُ ٱللَّهِ هِيَ ٱلۡعُلۡيَاۗ وَٱللَّهُ عَزِيزٌ حَكِيمٌ
ಲಾಭವು ತಕ್ಷಣದ್ದಾಗಿದ್ದರೆ ಮತ್ತು ಪ್ರಯಾಣವು ಸುಲಭದ್ದಾಗಿದ್ದರೆ ಅವರು ಖಂಡಿತ ನಿಮ್ಮ ಜೊತೆ ಬರುತ್ತಿದ್ದರು. ಆದರೆ ಅವರ ಪಾಲಿಗೆ ದಾರಿಯು ತುಂಬಾ ಉದ್ದವಾಯಿತು. ಇದೀಗ ಅವರು ಅಲ್ಲಾಹನ ಹೆಸರಲ್ಲಿ ಆಣೆ ಹಾಕಿ ‘‘ನಮಗೆ ಸಾಧ್ಯವಿದ್ದಿದ್ದರೆ ನಾವು ಖಂಡಿತ ನಿಮ್ಮ ಜೊತೆ ಬರುತ್ತಿದ್ದೆವು’’ ಎಂದು ಹೇಳುವರು, ನಿಜವಾಗಿ ಅವರು ತಮ್ಮನ್ನು ತಾವೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಅವರು ಸುಳ್ಳು ಹೇಳುವವರೆಂಬುದು ಅಲ್ಲಾಹನಿಗೆ ತಿಳಿದಿದೆ